ಬ್ರೇಕಿಂಗ್ ನ್ಯೂಸ್
12-02-26 09:19 pm HK News Desk ದೇಶ - ವಿದೇಶ
ವಾಷಿಂಗ್ಟನ್, ಫೆಬ್ರವರಿ 12 : ಅಮೆರಿಕದಲ್ಲಿ 2023ರಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ 23 ವರ್ಷದ ಭಾರತೀಯ ವಿದ್ಯಾರ್ಥಿನಿ ಜಾಹ್ನವಿ ಕಂದುಲಾ ಅವರ ಕುಟುಂಬಕ್ಕೆ ಸುಮಾರು 29 ಮಿಲಿಯನ್ ಡಾಲರ್ (ಅಂದಾಜು ₹260-262 ಕೋಟಿ) ಪರಿಹಾರ ನೀಡಲು ನಿರ್ಧರಿಸಲಾಗಿದೆ. ಪೊಲೀಸರ ನಿರ್ಲಕ್ಷ್ಯದಿಂದ ಸಂಭವಿಸಿದ ಅಪಘಾತ ಪ್ರಕರಣಗಳಲ್ಲಿ ಇದು ಅಮೆರಿಕ ಇತಿಹಾಸದಲ್ಲೇ ಅತಿದೊಡ್ಡ ಪರಿಹಾರಗಳಲ್ಲಿ ಒಂದೆಂದು ಪರಿಗಣಿಸಲಾಗಿದೆ.
ಜಾಹ್ನವಿ ಕಂದುಲಾ ಅವರು ಸಿಯಾಟಲ್ ನಗರದ ವಿಶ್ವವಿದ್ಯಾಲಯದಲ್ಲಿ ಸ್ನಾತಕೋತ್ತರ ಪದವಿ ಅಭ್ಯಾಸ ಮಾಡುತ್ತಿದ್ದರು. 2023ರ ಜನವರಿಯಲ್ಲಿ ರಸ್ತೆ ದಾಟುತ್ತಿದ್ದ ವೇಳೆ, ಪೊಲೀಸ್ ಅಧಿಕಾರಿ ಕೆವಿನ್ ಡೇವ್ ಚಾಲನೆ ಮಾಡುತ್ತಿದ್ದ ವಾಹನವು 25 mph ಮಿತಿಯ ಪ್ರದೇಶದಲ್ಲಿ 74 mph (119 kmph) ವೇಗದಲ್ಲಿ ಡಿಕ್ಕಿ ಹೊಡೆದಿತ್ತು. ಡಿಕ್ಕಿಯ ರಭಸಕ್ಕೆ ಜಾಹ್ನವಿ ಸುಮಾರು 100 ಅಡಿಗಳಷ್ಟು ದೂರ ಎಸೆಯಲ್ಪಟ್ಟು ಸ್ಥಳದಲ್ಲೇ ಮೃತಪಟ್ಟಿದ್ದರು.
ತನಿಖೆಯಲ್ಲಿ, ಅಧಿಕಾರಿ ಡೇವ್ ಅತಿಯಾದ ವೇಗದಲ್ಲಿ ಕಾರು ಚಾಲನೆ ಮಾಡಿದ್ದು ದೃಢವಾಗಿತ್ತು. ಇದಕ್ಕಾಗಿ ಅಧಿಕಾರಿಗೆ 5,000 ಡಾಲರ್ ದಂಡ ವಿಧಿಸಿ, ಪೊಲೀಸ್ ಇಲಾಖೆಯಿಂದ ವಜಾಗೊಳಿಸಲಾಗಿತ್ತು. ಆದರೆ, ಉದ್ದೇಶಪೂರ್ವಕ ನಿರ್ಲಕ್ಷ್ಯವನ್ನು ಸಾಬೀತುಪಡಿಸಲು ಸಾಧ್ಯವಾಗದ ಕಾರಣ ಗಂಭೀರ ಕ್ರಿಮಿನಲ್ ಆರೋಪಗಳನ್ನು ದಾಖಲಿಸಿರಲಿಲ್ಲ.
ಆದರೆ ಮತ್ತೊಬ್ಬ ಅಧಿಕಾರಿ ಡೇನಿಯಲ್ ಆಡೆರರ್ ಅವರ ಬಾಡಿ ಕ್ಯಾಮ್ ವಿಡಿಯೋ ಹೊರಬಂದ ಬಳಿಕ ಇದು ಭಾರೀ ವಿವಾದಕ್ಕೆ ಕಾರಣವಾಗಿತ್ತು. ಜಾಹ್ನವಿ ಸಾವಿನ ಕುರಿತು ಅವರು ನಗುತ್ತಾ ಮಾಡಿದ ಅವಹೇಳನಕಾರಿ ಹೇಳಿಕೆಗಳು ಸಾರ್ವಜನಿಕ ಆಕ್ರೋಶಕ್ಕೆ ಕಾರಣವಾಗಿದ್ದು, ಅವರನ್ನು ಕೂಡ ಸೇವೆಯಿಂದ ವಜಾಗೊಳಿಸಲಾಗಿದೆ.
ಘಟನೆ ವಿವಾದ ಆಗುತ್ತಿದ್ದಂತೆ ಭಾರತೀಯ ರಾಜತಾಂತ್ರಿಕ ಅಧಿಕಾರಿಗಳು ತನಿಖೆಗೆ ಒತ್ತಾಯಿಸಿದ್ದರು. ಪ್ರಕರಣದ ವಿಚಾರಣೆ ನಡೆದು ಕಿಂಗ್ ಕೌಂಟಿ ಸುಪೀರಿಯರ್ ನ್ಯಾಯಾಲಯ ತೀರ್ಪು ನೀಡಿದ್ದು, ದೊಡ್ಡ ಮೊತ್ತದ ದಂಡ ಹಾಗೂ ಪೊಲೀಸ್ ಅಧಿಕಾರಿಗಳ ಹೊಣೆಗಾರಿಕೆಯ ಕುರಿತು ಮಹತ್ವದ ಸಂದೇಶ ನೀಡಿದೆ.
In a major development in the 2023 fatal crash case in the United States, a court has ordered compensation of nearly 29 million dollars (approximately ₹260–262 crore) to the family of 23-year-old Indian student Jaahnavi Kandula, who died in a road accident involving a police vehicle. The settlement is being described as one of the largest compensation amounts in U.S. history in cases involving police negligence.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
27-07-26 01:09 pm
HK News Staffer
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm