ಬ್ರೇಕಿಂಗ್ ನ್ಯೂಸ್
12-02-26 09:19 pm HK News Desk ದೇಶ - ವಿದೇಶ
ವಾಷಿಂಗ್ಟನ್, ಫೆಬ್ರವರಿ 12 : ಅಮೆರಿಕದಲ್ಲಿ 2023ರಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ 23 ವರ್ಷದ ಭಾರತೀಯ ವಿದ್ಯಾರ್ಥಿನಿ ಜಾಹ್ನವಿ ಕಂದುಲಾ ಅವರ ಕುಟುಂಬಕ್ಕೆ ಸುಮಾರು 29 ಮಿಲಿಯನ್ ಡಾಲರ್ (ಅಂದಾಜು ₹260-262 ಕೋಟಿ) ಪರಿಹಾರ ನೀಡಲು ನಿರ್ಧರಿಸಲಾಗಿದೆ. ಪೊಲೀಸರ ನಿರ್ಲಕ್ಷ್ಯದಿಂದ ಸಂಭವಿಸಿದ ಅಪಘಾತ ಪ್ರಕರಣಗಳಲ್ಲಿ ಇದು ಅಮೆರಿಕ ಇತಿಹಾಸದಲ್ಲೇ ಅತಿದೊಡ್ಡ ಪರಿಹಾರಗಳಲ್ಲಿ ಒಂದೆಂದು ಪರಿಗಣಿಸಲಾಗಿದೆ.
ಜಾಹ್ನವಿ ಕಂದುಲಾ ಅವರು ಸಿಯಾಟಲ್ ನಗರದ ವಿಶ್ವವಿದ್ಯಾಲಯದಲ್ಲಿ ಸ್ನಾತಕೋತ್ತರ ಪದವಿ ಅಭ್ಯಾಸ ಮಾಡುತ್ತಿದ್ದರು. 2023ರ ಜನವರಿಯಲ್ಲಿ ರಸ್ತೆ ದಾಟುತ್ತಿದ್ದ ವೇಳೆ, ಪೊಲೀಸ್ ಅಧಿಕಾರಿ ಕೆವಿನ್ ಡೇವ್ ಚಾಲನೆ ಮಾಡುತ್ತಿದ್ದ ವಾಹನವು 25 mph ಮಿತಿಯ ಪ್ರದೇಶದಲ್ಲಿ 74 mph (119 kmph) ವೇಗದಲ್ಲಿ ಡಿಕ್ಕಿ ಹೊಡೆದಿತ್ತು. ಡಿಕ್ಕಿಯ ರಭಸಕ್ಕೆ ಜಾಹ್ನವಿ ಸುಮಾರು 100 ಅಡಿಗಳಷ್ಟು ದೂರ ಎಸೆಯಲ್ಪಟ್ಟು ಸ್ಥಳದಲ್ಲೇ ಮೃತಪಟ್ಟಿದ್ದರು.
ತನಿಖೆಯಲ್ಲಿ, ಅಧಿಕಾರಿ ಡೇವ್ ಅತಿಯಾದ ವೇಗದಲ್ಲಿ ಕಾರು ಚಾಲನೆ ಮಾಡಿದ್ದು ದೃಢವಾಗಿತ್ತು. ಇದಕ್ಕಾಗಿ ಅಧಿಕಾರಿಗೆ 5,000 ಡಾಲರ್ ದಂಡ ವಿಧಿಸಿ, ಪೊಲೀಸ್ ಇಲಾಖೆಯಿಂದ ವಜಾಗೊಳಿಸಲಾಗಿತ್ತು. ಆದರೆ, ಉದ್ದೇಶಪೂರ್ವಕ ನಿರ್ಲಕ್ಷ್ಯವನ್ನು ಸಾಬೀತುಪಡಿಸಲು ಸಾಧ್ಯವಾಗದ ಕಾರಣ ಗಂಭೀರ ಕ್ರಿಮಿನಲ್ ಆರೋಪಗಳನ್ನು ದಾಖಲಿಸಿರಲಿಲ್ಲ.
ಆದರೆ ಮತ್ತೊಬ್ಬ ಅಧಿಕಾರಿ ಡೇನಿಯಲ್ ಆಡೆರರ್ ಅವರ ಬಾಡಿ ಕ್ಯಾಮ್ ವಿಡಿಯೋ ಹೊರಬಂದ ಬಳಿಕ ಇದು ಭಾರೀ ವಿವಾದಕ್ಕೆ ಕಾರಣವಾಗಿತ್ತು. ಜಾಹ್ನವಿ ಸಾವಿನ ಕುರಿತು ಅವರು ನಗುತ್ತಾ ಮಾಡಿದ ಅವಹೇಳನಕಾರಿ ಹೇಳಿಕೆಗಳು ಸಾರ್ವಜನಿಕ ಆಕ್ರೋಶಕ್ಕೆ ಕಾರಣವಾಗಿದ್ದು, ಅವರನ್ನು ಕೂಡ ಸೇವೆಯಿಂದ ವಜಾಗೊಳಿಸಲಾಗಿದೆ.
ಘಟನೆ ವಿವಾದ ಆಗುತ್ತಿದ್ದಂತೆ ಭಾರತೀಯ ರಾಜತಾಂತ್ರಿಕ ಅಧಿಕಾರಿಗಳು ತನಿಖೆಗೆ ಒತ್ತಾಯಿಸಿದ್ದರು. ಪ್ರಕರಣದ ವಿಚಾರಣೆ ನಡೆದು ಕಿಂಗ್ ಕೌಂಟಿ ಸುಪೀರಿಯರ್ ನ್ಯಾಯಾಲಯ ತೀರ್ಪು ನೀಡಿದ್ದು, ದೊಡ್ಡ ಮೊತ್ತದ ದಂಡ ಹಾಗೂ ಪೊಲೀಸ್ ಅಧಿಕಾರಿಗಳ ಹೊಣೆಗಾರಿಕೆಯ ಕುರಿತು ಮಹತ್ವದ ಸಂದೇಶ ನೀಡಿದೆ.
In a major development in the 2023 fatal crash case in the United States, a court has ordered compensation of nearly 29 million dollars (approximately ₹260–262 crore) to the family of 23-year-old Indian student Jaahnavi Kandula, who died in a road accident involving a police vehicle. The settlement is being described as one of the largest compensation amounts in U.S. history in cases involving police negligence.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am