ಬ್ರೇಕಿಂಗ್ ನ್ಯೂಸ್
12-02-26 10:51 pm HK News Desk ದೇಶ - ವಿದೇಶ
ನವದೆಹಲಿ, ಫೆ.12 : ವಂದೇ ಮಾತರಂ ಗೀತೆಯನ್ನು ರಾಷ್ಟ್ರಗೀತೆಯ ರೀತಿಯಲ್ಲೇ ಹಾಡುವುದು ಕಡ್ಡಾಯಗೊಳಿಸಿದ ಕೇಂದ್ರ ಗೃಹ ಸಚಿವಾಲಯದ ಕ್ರಮಕ್ಕೆ ಜಮಾತೆ ಉಲೆಮಾ ಹಿಂದ್ ವಿರೋಧ ವ್ಯಕ್ತಪಡಿಸಿದೆ. ಎಲ್ಲಾ ಸರ್ಕಾರಿ ಕಾರ್ಯಕ್ರಮಗಳಲ್ಲಿ, ಎಲ್ಲಾ ಶಾಲೆಗಳಲ್ಲಿ ವಂದೇ ಮಾತರಂ ಗೀತೆಯ ಎಲ್ಲಾ ಆರು ಚರಣಗಳನ್ನು ಹಾಡುವುದನ್ನು ಗೃಹ ಇಲಾಖೆ ಕಡ್ಡಾಯ ಮಾಡಿದ್ದು ಗೀತೆಯನ್ನು ಹಾಡುವಾಗ ಎಲ್ಲರೂ ಎದ್ದು ನಿಲ್ಲಬೇಕು. ರಾಷ್ಟ್ರಗೀತೆಗೂ ಮುನ್ನ ಆರು ಚರಣಗಳನ್ನು ಹಾಡಬೇಕು ಎಂದು ಕೇಂದ್ರ ಸರ್ಕಾರ ನಿರ್ದೇಶನ ನೀಡಿದೆ.
ಗೃಹ ಇಲಾಖೆಯ ಆದೇಶವನ್ನು 'ಏಕಪಕ್ಷೀಯ' ಮತ್ತು 'ನಿರಂಕುಶ' ಎಂದು ಮುಸ್ಲಿಂ ಸಂಘಟನೆ ಜಮಿಯತ್ ಉಲಮಾ-ಇ-ಹಿಂದ್ ಗುರುವಾರ ಆಕ್ಷೇಪಿಸಿದೆ. ಇದು ಸಂವಿಧಾನ ಖಾತರಿಪಡಿಸುವ ಧಾರ್ಮಿಕ ಸ್ವಾತಂತ್ರ್ಯದ ಮೇಲಿನ ಉಗ್ರ ದಾಳಿ ಎಂದು ಹೇಳಿದೆ. ಈ ಕುರಿತು ಮಾತನಾಡಿರುವ ಜಮಿಯತ್ ಉಲೆಮಾ-ಇ-ಹಿಂದ್ ಅಧ್ಯಕ್ಷ ಮೌಲಾನಾ ಅರ್ಷದ್ ಮದನಿ, ವಂದೇ ಮಾತರಂ ಹಾಡುವುದು ಅಥವಾ ನುಡಿಸುವುದಕ್ಕೆ ಮುಸ್ಲಿಮರು ಯಾರು ತಡೆಯುವುದಿಲ್ಲ. ಆದರೆ ಗೀತೆಯ ಕೆಲವು ಪದ್ಯಗಳು ಮಾತೃಭೂಮಿಯನ್ನು ದೇವತೆಯಾಗಿ ಬಿಂಬಿಸುವ ನಂಬಿಕೆಗಳನ್ನು ಆಧರಿಸಿವೆ. ಇದು ಏಕದೇವತಾವಾದಿ ಧರ್ಮಗಳ ಮೂಲಭೂತ ನಂಬಿಕೆಗೆ ವಿರುದ್ಧವಾಗಿದೆ ಎಂದು ಹೇಳಿದ್ದಾರೆ.
ಇದು ಅಲ್ಪಸಂಖ್ಯಾತರ ಸಾಂವಿಧಾನಿಕ ಹಕ್ಕುಗಳನ್ನು ಮೊಟಕುಗೊಳಿಸುವ ವ್ಯವಸ್ಥಿತ ಪ್ರಯತ್ನವಾಗಿದೆ."ಮುಸ್ಲಿಮರು ಮಾತ್ರ ಅಲ್ಲಾನನ್ನು ಪೂಜಿಸುತ್ತಾರೆ. ಈ ಗೀತೆ ಹಾಡಲು ಒತ್ತಾಯಿಸುವುದು ಸಂವಿಧಾನದ 25 ನೇ ವಿಧಿ ಮತ್ತು ಸುಪ್ರೀಂ ಕೋರ್ಟ್ನ ಹಲವಾರು ತೀರ್ಪುಗಳ ಸ್ಪಷ್ಟ ಉಲ್ಲಂಘನೆಯಾಗಿದೆ" ಎಂದು ಅವರು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.
ಹಾಡನ್ನು ಕಡ್ಡಾಯಗೊಳಿಸುವುದು ಮತ್ತು ಅದನ್ನು ನಾಗರಿಕರ ಮೇಲೆ ಹೇರಲು ಪ್ರಯತ್ನಿಸುವುದು ದೇಶಭಕ್ತಿಯ ಅಭಿವ್ಯಕ್ತಿಯಲ್ಲ, ಬದಲಿಗೆ ಇದು ಚುನಾವಣಾ ರಾಜಕೀಯ, ಮತೀಯ ಅಜೆಂಡಾ ಮತ್ತು ಕೆಲವು ಮೂಲಭೂತ ಸಮಸ್ಯೆಗಳಿಂದ ಸಾರ್ವಜನಿಕ ಗಮನವನ್ನು ಬೇರೆಡೆಗೆ ಸೆಳೆಯುವ ಉದ್ದೇಶಪೂರ್ವಕ ಪ್ರಯತ್ನ ಎಂದು ಮದನಿ ಹೇಳಿದ್ದಾರೆ.
Jamiat Ulema-e-Hind has expressed strong opposition to the Union Home Ministry’s directive making the singing of all six stanzas of Vande Mataram mandatory at government functions and in all schools. As per the reported order, the song must be sung before the National Anthem, and everyone present must stand during its rendition.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am