ಬ್ರೇಕಿಂಗ್ ನ್ಯೂಸ್
15-02-26 04:01 pm HK Desk ದೇಶ - ವಿದೇಶ
ಮಾಸ್ಕೋ, ಫೆ.14: ಮಗನಿಗಾಗಿ ತಂದೆ ಪ್ರೀತಿಯಿಂದ ಬರೋಬ್ಬರಿ 6 ಕೋಟಿ ರೂಪಾಯಿ ಮೌಲ್ಯದ BMW ಕಾರನ್ನು ಉಡುಗೊರೆಯಾಗಿ ನೀಡಿದ್ದರು. ಆದರೆ ಕಾರು ಖರೀದಿಸಿದ ಕೆಲವೇ ದಿನದಲ್ಲೇ ಮಗ ದುರಂತ ಅಂತ್ಯ ಕಂಡಿದ್ದ. ಮಗನ ಸಾವಿನ ನೋವಿನಲ್ಲಿ ಆತನಿಗಾಗಿ ತೆಗೆದಿದ್ದ ಕಾರನ್ನು ಉಳಿಸಿಕೊಳ್ಳದೆ ಮಗನ ಸಮಾಧಿ ಪಕ್ಕದಲ್ಲೇ ಹೊಸ BMW ಕಾರನ್ನು ಸಮಾಧಿ ಮಾಡಿದ್ದಾರೆ. ಇದರ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ.
ತಂದೆ, ತಾಯಿ ಪ್ರೀತಿಯಿಂದಲೇ ಮಗನನ್ನು ಬೆಳೆಸಿದ್ದರು. ಮಗ ಏನು ಕೇಳಿದರೂ ಪೋಷಕರು ಇಲ್ಲ ಎಂದಿರಲಿಲ್ಲ. ಮಗನ ಹುಟ್ಟುಹಬ್ಬಕ್ಕೆ ತಂದೆ ಬರೋಬ್ಬರಿ 6 ಕೋಟಿ ಮೌಲ್ಯದ ಐಷಾರಾಮಿ ಕಾರನ್ನು ಉಡುಗೊರೆ ನೀಡಿದ್ದರು. ಮಗನಿಗೆ ಗೊತ್ತಿಲ್ಲದೆ ಕಾರನ್ನು ಬುಕ್ ಮಾಡಿದ್ದರು. ಹುಟ್ಟುಹಬ್ಬದ ದಿನ ಅಚ್ಚರಿ ನೀಡಿದ್ದರು. ವಿಶೇಷ ಉಡುಗೊರೆ ನೋಡಿ ಮಗನೂ ಸಂಭ್ರಮಿಸಿದ್ದ. ಕಾರಿನಲ್ಲಿ ಪೋಷಕರನ್ನು ಕೂರಿಸಿ ಸುತ್ತಾಡಿದ್ದ.
ಕಾರು ಬಂದ ಕೆಲವೇ ದಿನದಲ್ಲಿ ಮಗ ದುರಂತ ಸಾವು;
ಕಾರು ಮನೆಗೆ ಬಂದ ಕೆಲವೇ ದಿನಗಳಲ್ಲಿ ಮಗ ದುರಂತ ಸಾವು ಕಂಡಿದ್ದಾನೆ. ಮಗನ ಕಳೆದುಕೊಂಡ ಪೋಷಕರು ಗೋಳಾಡಿದ್ದಾರೆ. ಮಗ ಇಲ್ಲದ ಮೇಲೆ ಪ್ರತಿ ದಿನ ಬೆಳಗ್ಗೆ ಆತನ ಕಾರು ನೋಡಿದಾಗ ತಂದೆ ದುಃಖ ಉಮ್ಮಳಿಸಿ ಬರುತ್ತಿತ್ತು. ಮಗನಿಲ್ಲದ ಮೇಲೆ ಆತನಿಗಾಗಿ ಕೊಡಿಸಿದ ಕಾರು ಯಾಕೆ ಎಂದು ತಂದೆ 6 ಕೋಟಿ ರೂಪಾಯಿ ಮೌಲ್ಯದ ಹೊಸ BMW ಕಾರನ್ನು ಸಮಾಧಿ ಮಾಡಲು ಮುಂದಾಗಿದ್ದಾರೆ.
ಮಗನ ಸಮಾಧಿ ಪಕ್ಕದಲ್ಲೇ ಕಾರು ಸಮಾಧಿ
ಹೊಸ BMW ಕಾರನ್ನು ಮಗನ ಸಮಾಧಿ ಪಕ್ಕದಲ್ಲೇ ಸಮಾಧಿ ಮಾಡಿದ್ದಾರೆ. ಸಮಾಧಿ ಸ್ಥಳದಿಂದ ಕಾರನ್ನೂ ಯಾರೂ ಕದಿಯಬಾರದು ಎಂದು ತಂದೆ ಕಾರನ್ನು ಹೂತು ಹಾಕಲು ಜೆಸಿಬಿ ಮೂಲಕ ಗುಂಡಿ ಅಗೆದಿದ್ದಾರೆ. ಬಳಿಕ ಕಾಂಕ್ರೀಟ್ ತಂದು ಕಾರಿನ ಮೇಲೆ ಸುರಿದಿದ್ದಾರೆ. ಸಂಪೂರ್ಣ ಕಾಂಕ್ರೀಟ್ನಿಂದ ಗುಂಡಿಯಲ್ಲಿ ಕಾರನ್ನಿಟ್ಟು ಮುಚ್ಚಲಾಗಿದೆ. ಕೊನೆಯಲ್ಲಿ ಕಾರಿನ ಕೀಯನ್ನು ಅದೇ ಗುಂಡಿಗೆ ಎಸೆದು ಕಾಂಕ್ರೀಟ್ನಿಂದ ಮುಚ್ಚಿ ಮಣ್ಣು ಹಾಕಲಾಗಿದೆ. ಇದರ ವಿಡಿಯೋ ನೋಡಿ ಹಲವರು ಕಣ್ಣೀರು ಹಾಕಿದ್ದಾರೆ.
In a heart-wrenching incident from Moscow, a grieving father buried a luxury BMW car worth nearly ₹6 crore beside his son’s grave after the young man’s untimely death. A video of the emotional act has gone viral on social media.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
27-07-26 01:09 pm
HK News Staffer
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm