ಬ್ರೇಕಿಂಗ್ ನ್ಯೂಸ್
15-02-26 04:01 pm HK Desk ದೇಶ - ವಿದೇಶ
ಮಾಸ್ಕೋ, ಫೆ.14: ಮಗನಿಗಾಗಿ ತಂದೆ ಪ್ರೀತಿಯಿಂದ ಬರೋಬ್ಬರಿ 6 ಕೋಟಿ ರೂಪಾಯಿ ಮೌಲ್ಯದ BMW ಕಾರನ್ನು ಉಡುಗೊರೆಯಾಗಿ ನೀಡಿದ್ದರು. ಆದರೆ ಕಾರು ಖರೀದಿಸಿದ ಕೆಲವೇ ದಿನದಲ್ಲೇ ಮಗ ದುರಂತ ಅಂತ್ಯ ಕಂಡಿದ್ದ. ಮಗನ ಸಾವಿನ ನೋವಿನಲ್ಲಿ ಆತನಿಗಾಗಿ ತೆಗೆದಿದ್ದ ಕಾರನ್ನು ಉಳಿಸಿಕೊಳ್ಳದೆ ಮಗನ ಸಮಾಧಿ ಪಕ್ಕದಲ್ಲೇ ಹೊಸ BMW ಕಾರನ್ನು ಸಮಾಧಿ ಮಾಡಿದ್ದಾರೆ. ಇದರ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ.
ತಂದೆ, ತಾಯಿ ಪ್ರೀತಿಯಿಂದಲೇ ಮಗನನ್ನು ಬೆಳೆಸಿದ್ದರು. ಮಗ ಏನು ಕೇಳಿದರೂ ಪೋಷಕರು ಇಲ್ಲ ಎಂದಿರಲಿಲ್ಲ. ಮಗನ ಹುಟ್ಟುಹಬ್ಬಕ್ಕೆ ತಂದೆ ಬರೋಬ್ಬರಿ 6 ಕೋಟಿ ಮೌಲ್ಯದ ಐಷಾರಾಮಿ ಕಾರನ್ನು ಉಡುಗೊರೆ ನೀಡಿದ್ದರು. ಮಗನಿಗೆ ಗೊತ್ತಿಲ್ಲದೆ ಕಾರನ್ನು ಬುಕ್ ಮಾಡಿದ್ದರು. ಹುಟ್ಟುಹಬ್ಬದ ದಿನ ಅಚ್ಚರಿ ನೀಡಿದ್ದರು. ವಿಶೇಷ ಉಡುಗೊರೆ ನೋಡಿ ಮಗನೂ ಸಂಭ್ರಮಿಸಿದ್ದ. ಕಾರಿನಲ್ಲಿ ಪೋಷಕರನ್ನು ಕೂರಿಸಿ ಸುತ್ತಾಡಿದ್ದ.
ಕಾರು ಬಂದ ಕೆಲವೇ ದಿನದಲ್ಲಿ ಮಗ ದುರಂತ ಸಾವು;
ಕಾರು ಮನೆಗೆ ಬಂದ ಕೆಲವೇ ದಿನಗಳಲ್ಲಿ ಮಗ ದುರಂತ ಸಾವು ಕಂಡಿದ್ದಾನೆ. ಮಗನ ಕಳೆದುಕೊಂಡ ಪೋಷಕರು ಗೋಳಾಡಿದ್ದಾರೆ. ಮಗ ಇಲ್ಲದ ಮೇಲೆ ಪ್ರತಿ ದಿನ ಬೆಳಗ್ಗೆ ಆತನ ಕಾರು ನೋಡಿದಾಗ ತಂದೆ ದುಃಖ ಉಮ್ಮಳಿಸಿ ಬರುತ್ತಿತ್ತು. ಮಗನಿಲ್ಲದ ಮೇಲೆ ಆತನಿಗಾಗಿ ಕೊಡಿಸಿದ ಕಾರು ಯಾಕೆ ಎಂದು ತಂದೆ 6 ಕೋಟಿ ರೂಪಾಯಿ ಮೌಲ್ಯದ ಹೊಸ BMW ಕಾರನ್ನು ಸಮಾಧಿ ಮಾಡಲು ಮುಂದಾಗಿದ್ದಾರೆ.
ಮಗನ ಸಮಾಧಿ ಪಕ್ಕದಲ್ಲೇ ಕಾರು ಸಮಾಧಿ
ಹೊಸ BMW ಕಾರನ್ನು ಮಗನ ಸಮಾಧಿ ಪಕ್ಕದಲ್ಲೇ ಸಮಾಧಿ ಮಾಡಿದ್ದಾರೆ. ಸಮಾಧಿ ಸ್ಥಳದಿಂದ ಕಾರನ್ನೂ ಯಾರೂ ಕದಿಯಬಾರದು ಎಂದು ತಂದೆ ಕಾರನ್ನು ಹೂತು ಹಾಕಲು ಜೆಸಿಬಿ ಮೂಲಕ ಗುಂಡಿ ಅಗೆದಿದ್ದಾರೆ. ಬಳಿಕ ಕಾಂಕ್ರೀಟ್ ತಂದು ಕಾರಿನ ಮೇಲೆ ಸುರಿದಿದ್ದಾರೆ. ಸಂಪೂರ್ಣ ಕಾಂಕ್ರೀಟ್ನಿಂದ ಗುಂಡಿಯಲ್ಲಿ ಕಾರನ್ನಿಟ್ಟು ಮುಚ್ಚಲಾಗಿದೆ. ಕೊನೆಯಲ್ಲಿ ಕಾರಿನ ಕೀಯನ್ನು ಅದೇ ಗುಂಡಿಗೆ ಎಸೆದು ಕಾಂಕ್ರೀಟ್ನಿಂದ ಮುಚ್ಚಿ ಮಣ್ಣು ಹಾಕಲಾಗಿದೆ. ಇದರ ವಿಡಿಯೋ ನೋಡಿ ಹಲವರು ಕಣ್ಣೀರು ಹಾಕಿದ್ದಾರೆ.
In a heart-wrenching incident from Moscow, a grieving father buried a luxury BMW car worth nearly ₹6 crore beside his son’s grave after the young man’s untimely death. A video of the emotional act has gone viral on social media.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am