ಬ್ರೇಕಿಂಗ್ ನ್ಯೂಸ್
19-02-26 10:10 pm mangalore ದೇಶ - ವಿದೇಶ
ನವದೆಹಲಿ, ಫೆ.19 ರಾಜಕೀಯದಲ್ಲಿ 'ಉಚಿತ ಕೊಡುಗೆ' (ಫ್ರೀಬೀಸ್) ಸಂಸ್ಕೃತಿ ಹೆಚ್ಚುತ್ತಿರುವುದನ್ನು ಖಂಡಿಸಿದ ಸುಪ್ರೀಂ ಕೋರ್ಟ್, ದೇಶದ ಆರ್ಥಿಕ ಅಭಿವೃದ್ಧಿಗೆ ಅಡ್ಡಿಯಾಗುವ ಇಂತಹ ನೀತಿಗಳನ್ನು ರಾಜಕೀಯ ಪಕ್ಷಗಳು ಪುನರ್ವಿಮರ್ಶೆ ಮಾಡಬೇಕು ಎಂದು ಸಲಹೆ ಮಾಡಿದೆ.
ಗ್ರಾಹಕರ ಆರ್ಥಿಕ ಸ್ಥಿತಿಯನ್ನು ಲೆಕ್ಕಿಸದೆ ಎಲ್ಲರಿಗೂ ಉಚಿತ ವಿದ್ಯುತ್ ಒದಗಿಸಲು ಮುಂದಾಗಿರುವ ತಮಿಳುನಾಡು ವಿದ್ಯುತ್ ವಿತರಣಾ ನಿಗಮ ಲಿಮಿಟೆಡ್ನ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ನೇತೃತ್ವದ ಸುಪ್ರೀಂ ಪೀಠ, ರಾಜ್ಯಗಳು ಬಡವರನ್ನು ಬೆಂಬಲಿಸುವುದರಲ್ಲಿ ಅರ್ಥವಿದೆ. ಆದರೆ ಶ್ರೀಮಂತ ಮತ್ತು ಬಡವರ ನಡುವೆ ವ್ಯತ್ಯಾಸವಿಲ್ಲದೆ ಎಲ್ಲರಿಗೂ ಉಚಿತವಾಗಿ ವಿದ್ಯುತ್ ನೀಡುತ್ತೇವೆ ಎನ್ನುವುದಕ್ಕೆ ಸಮರ್ಥನೆ ಇಲ್ಲ ಎಂದು ಹೇಳಿದೆ.
"ದೇಶದ ಹೆಚ್ಚಿನ ರಾಜ್ಯಗಳು ಆದಾಯ ಕೊರತೆಯನ್ನು ಎದುರಿಸುತ್ತಿದೆ. ಆದರೂ ಅವು ಅಭಿವೃದ್ಧಿಗೆ ಬದಲಾಗಿ ಉಚಿತ ಕೊಡುಗೆಗಳನ್ನು ನೀಡುತ್ತಿವೆ" ಎಂದು ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು ನ್ಯಾಯಮೂರ್ತಿಗಳಾದ ಜೋಯ್ಮಲ್ಯ ಬಾಗ್ಚಿ ಮತ್ತು ವಿಪುಲ್ ಎಂ ಪಾಂಚೋಲಿ ಅವರನ್ನೊಳಗೊಂಡ ಪೀಠ ಹೇಳಿದೆ. ಈ ರೀತಿಯ ಉಚಿತ ಕೊಡುಗೆಗಳಿಂದ ದೇಶದ ಆರ್ಥಿಕ ಅಭಿವೃದ್ಧಿಗೆ ಅಡ್ಡಿಯಾಗುತ್ತದೆ ಮತ್ತು ರಾಜ್ಯ ಸರ್ಕಾರಗಳು ಎಲ್ಲರಿಗೂ ಉಚಿತ ಆಹಾರ, ಸೈಕಲ್ಗಳು, ವಿದ್ಯುತ್ ನೀಡುವ ಬದಲು ಉದ್ಯೋಗ ಒದಗಿಸುವ ಮಾರ್ಗಗಳನ್ನು ಹುಡುಕಬೇಕು ಎಂದು ಪೀಠ ಸಲಹೆ ಮಾಡಿದೆ.
ಆದಾಗ್ಯೂ, ಉಚಿತ ವಿದ್ಯುತ್ ಒದಗಿಸಲು ಪ್ರಸ್ತಾಪಿಸಿರುವ ಡಿಎಂಕೆ ಸರ್ಕಾರದ ನೇತೃತ್ವದ ವಿದ್ಯುತ್ ವಿತರಣಾ ಸಂಸ್ಥೆಯ ಮನವಿ ಮೇರೆಗೆ ಸುಪ್ರೀಂ ಕೋರ್ಟ್, ಕೇಂದ್ರ ಮತ್ತು ಇತರರಿಗೆ ನೋಟಿಸ್ ಜಾರಿ ಮಾಡಿದೆ.
"ಭಾರತದಲ್ಲಿ ನಾವು ಯಾವ ರೀತಿಯ ಸಂಸ್ಕೃತಿಯನ್ನು ಬೆಳೆಸುತ್ತಿದ್ದೇವೆ? ಎಂದು ಪ್ರಶ್ನಿಸಿದ ಪೀಠವು, "ರಾಜ್ಯಗಳು ಉದ್ಯೋಗಾವಕಾಶಗಳನ್ನು ಸೃಷ್ಟಿಸುವತ್ತ ಗಮನಹರಿಸಬೇಕು. ನೀವು ಬೆಳಗ್ಗೆಯಿಂದ ಸಂಜೆಯ ವರೆಗೆ ಉಚಿತ ಆಹಾರ, ಉಚಿತ ಸೈಕಲ್, ನಂತರ ಉಚಿತ ವಿದ್ಯುತ್ ನೀಡಲು ಪ್ರಾರಂಭಿಸಿದರೆ ಯಾರು ಕೆಲಸ ಮಾಡುತ್ತಾರೆ ಮತ್ತು ಜನರಲ್ಲಿ ಕೆಲಸ ಮಾಡುವ ಮನೋಭಾವ ಕಡಿಮೆಯಾಗುತ್ತದೆ ಅಲ್ಲವೇ ಎಂದು ಸಿಜೆಐ ಪ್ರಶ್ನಿಸಿದರು.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
27-07-26 01:09 pm
HK News Staffer
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm