ಬ್ರೇಕಿಂಗ್ ನ್ಯೂಸ್
19-02-26 10:10 pm mangalore ದೇಶ - ವಿದೇಶ
ನವದೆಹಲಿ, ಫೆ.19 ರಾಜಕೀಯದಲ್ಲಿ 'ಉಚಿತ ಕೊಡುಗೆ' (ಫ್ರೀಬೀಸ್) ಸಂಸ್ಕೃತಿ ಹೆಚ್ಚುತ್ತಿರುವುದನ್ನು ಖಂಡಿಸಿದ ಸುಪ್ರೀಂ ಕೋರ್ಟ್, ದೇಶದ ಆರ್ಥಿಕ ಅಭಿವೃದ್ಧಿಗೆ ಅಡ್ಡಿಯಾಗುವ ಇಂತಹ ನೀತಿಗಳನ್ನು ರಾಜಕೀಯ ಪಕ್ಷಗಳು ಪುನರ್ವಿಮರ್ಶೆ ಮಾಡಬೇಕು ಎಂದು ಸಲಹೆ ಮಾಡಿದೆ.
ಗ್ರಾಹಕರ ಆರ್ಥಿಕ ಸ್ಥಿತಿಯನ್ನು ಲೆಕ್ಕಿಸದೆ ಎಲ್ಲರಿಗೂ ಉಚಿತ ವಿದ್ಯುತ್ ಒದಗಿಸಲು ಮುಂದಾಗಿರುವ ತಮಿಳುನಾಡು ವಿದ್ಯುತ್ ವಿತರಣಾ ನಿಗಮ ಲಿಮಿಟೆಡ್ನ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ನೇತೃತ್ವದ ಸುಪ್ರೀಂ ಪೀಠ, ರಾಜ್ಯಗಳು ಬಡವರನ್ನು ಬೆಂಬಲಿಸುವುದರಲ್ಲಿ ಅರ್ಥವಿದೆ. ಆದರೆ ಶ್ರೀಮಂತ ಮತ್ತು ಬಡವರ ನಡುವೆ ವ್ಯತ್ಯಾಸವಿಲ್ಲದೆ ಎಲ್ಲರಿಗೂ ಉಚಿತವಾಗಿ ವಿದ್ಯುತ್ ನೀಡುತ್ತೇವೆ ಎನ್ನುವುದಕ್ಕೆ ಸಮರ್ಥನೆ ಇಲ್ಲ ಎಂದು ಹೇಳಿದೆ.
"ದೇಶದ ಹೆಚ್ಚಿನ ರಾಜ್ಯಗಳು ಆದಾಯ ಕೊರತೆಯನ್ನು ಎದುರಿಸುತ್ತಿದೆ. ಆದರೂ ಅವು ಅಭಿವೃದ್ಧಿಗೆ ಬದಲಾಗಿ ಉಚಿತ ಕೊಡುಗೆಗಳನ್ನು ನೀಡುತ್ತಿವೆ" ಎಂದು ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು ನ್ಯಾಯಮೂರ್ತಿಗಳಾದ ಜೋಯ್ಮಲ್ಯ ಬಾಗ್ಚಿ ಮತ್ತು ವಿಪುಲ್ ಎಂ ಪಾಂಚೋಲಿ ಅವರನ್ನೊಳಗೊಂಡ ಪೀಠ ಹೇಳಿದೆ. ಈ ರೀತಿಯ ಉಚಿತ ಕೊಡುಗೆಗಳಿಂದ ದೇಶದ ಆರ್ಥಿಕ ಅಭಿವೃದ್ಧಿಗೆ ಅಡ್ಡಿಯಾಗುತ್ತದೆ ಮತ್ತು ರಾಜ್ಯ ಸರ್ಕಾರಗಳು ಎಲ್ಲರಿಗೂ ಉಚಿತ ಆಹಾರ, ಸೈಕಲ್ಗಳು, ವಿದ್ಯುತ್ ನೀಡುವ ಬದಲು ಉದ್ಯೋಗ ಒದಗಿಸುವ ಮಾರ್ಗಗಳನ್ನು ಹುಡುಕಬೇಕು ಎಂದು ಪೀಠ ಸಲಹೆ ಮಾಡಿದೆ.
ಆದಾಗ್ಯೂ, ಉಚಿತ ವಿದ್ಯುತ್ ಒದಗಿಸಲು ಪ್ರಸ್ತಾಪಿಸಿರುವ ಡಿಎಂಕೆ ಸರ್ಕಾರದ ನೇತೃತ್ವದ ವಿದ್ಯುತ್ ವಿತರಣಾ ಸಂಸ್ಥೆಯ ಮನವಿ ಮೇರೆಗೆ ಸುಪ್ರೀಂ ಕೋರ್ಟ್, ಕೇಂದ್ರ ಮತ್ತು ಇತರರಿಗೆ ನೋಟಿಸ್ ಜಾರಿ ಮಾಡಿದೆ.
"ಭಾರತದಲ್ಲಿ ನಾವು ಯಾವ ರೀತಿಯ ಸಂಸ್ಕೃತಿಯನ್ನು ಬೆಳೆಸುತ್ತಿದ್ದೇವೆ? ಎಂದು ಪ್ರಶ್ನಿಸಿದ ಪೀಠವು, "ರಾಜ್ಯಗಳು ಉದ್ಯೋಗಾವಕಾಶಗಳನ್ನು ಸೃಷ್ಟಿಸುವತ್ತ ಗಮನಹರಿಸಬೇಕು. ನೀವು ಬೆಳಗ್ಗೆಯಿಂದ ಸಂಜೆಯ ವರೆಗೆ ಉಚಿತ ಆಹಾರ, ಉಚಿತ ಸೈಕಲ್, ನಂತರ ಉಚಿತ ವಿದ್ಯುತ್ ನೀಡಲು ಪ್ರಾರಂಭಿಸಿದರೆ ಯಾರು ಕೆಲಸ ಮಾಡುತ್ತಾರೆ ಮತ್ತು ಜನರಲ್ಲಿ ಕೆಲಸ ಮಾಡುವ ಮನೋಭಾವ ಕಡಿಮೆಯಾಗುತ್ತದೆ ಅಲ್ಲವೇ ಎಂದು ಸಿಜೆಐ ಪ್ರಶ್ನಿಸಿದರು.
14-04-26 02:04 pm
HK News Staffer
ಸುಳ್ಯದಲ್ಲಿ ಪಾಳು ಬಾವಿಗೆ ಬಿದ್ದ ಕಾಡಾನೆ; ಅಡ್ಡಲಾಗಿ...
13-04-26 09:49 pm
ಕುಂದಾಪುರದ 111 ವರ್ಷಗಳ ಸರ್ಕಾರಿ ಶಾಲೆಗೆ ಬಂತು ಎಐ ರ...
13-04-26 08:19 pm
ದಾವಣಗೆರೆ ದಕ್ಷಿಣದಲ್ಲಿ ಪ್ರಚಾರದಿಂದ ದೂರ; ಸಿಎಂ ರಾಜ...
13-04-26 04:20 pm
ಪಿಗ್ಮಿ ಏಜೆಂಟರು ಮಧ್ಯವರ್ತಿಗಳಲ್ಲ, ಬ್ಯಾಂಕುಗಳ ನೌಕರ...
12-04-26 07:58 pm
14-04-26 10:48 pm
HK News Staffer
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
ಟಿಸಿಎಸ್ ಕಂಪನಿಯಲ್ಲಿ ಹೈಫೈ ಜಿಹಾದ್; ಸೆಕ್ಸ್ ದಂಧೆ,...
13-04-26 10:35 pm
ಬಾಂಗ್ಲಾದಲ್ಲಿ ಮುಸ್ಲಿಂ ಯುವಕರಿಂದಲೇ ಇಬ್ಬರು ಧರ್ಮಗು...
13-04-26 09:07 pm
ಅಮೆರಿಕ- ಇರಾನ್ ಸಂಧಾನ ಯಶಸ್ವಿಯಾಗ್ತಿತ್ತು, ನೆತನ್ಯ...
13-04-26 01:27 pm
13-04-26 11:39 pm
Mangalore Correspondent
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
14-04-26 11:16 pm
HK News Desk
ಆರಿಫ್ ಕೊಲೆ ಪ್ರಕರಣ ; ಮತ್ತೆ ಮೂವರು ಆರೋಪಿಗಳ ಬಂಧನ,...
14-04-26 11:52 am
ನಂತೂರು ಭೀಕರ ಅಪಘಾತ ; ಬೈಕ್ ಸವಾರನ ಧಾವಂತಕ್ಕೆ ರಸ್ತ...
14-04-26 11:14 am
ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಪತ್ನಿ ಸೌಮ್ಯಾ ಶೆಟ...
11-04-26 11:14 pm
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm