ಬ್ರೇಕಿಂಗ್ ನ್ಯೂಸ್
20-02-26 08:45 pm HK News Desk ದೇಶ - ವಿದೇಶ
ನವದೆಹಲಿ, ಫೆ.20: ರಾಜಧಾನಿ ದೆಹಲಿಯ ಭಾರತ್ ಮಂಟಪದಲ್ಲಿ ನಡೆಯುತ್ತಿರುವ ಇಂಡಿಯಾ AI ಇಂಪ್ಯಾಕ್ಟ್ - 2026 ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರು ಶರ್ಟ್ ಬಿಚ್ಚಿ ಪ್ರತಿಭಟನೆ ನಡೆಸಿದ್ದು ಈ ವೇಳೆ ಅಲ್ಲಿ ಸೇರಿದ್ದ ಸಾರ್ವಜನಿಕರು ಕಾಂಗ್ರೆಸ್ ಕಾರ್ಯಕರ್ತರನ್ನು ಕಾಲಿನಲ್ಲಿ ಒದ್ದು ಹೊರಕ್ಕಟ್ಟಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಫೆಬ್ರವರಿ 19ರಿಂದ 21ರ ವರೆಗೆ AI ಇಂಪ್ಯಾಕ್ಟ್ ಶೃಂಗಸಭೆ ನಡೆಯುತ್ತಿದ್ದು 10 ಮಂದಿಯಷ್ಟಿದ್ದ ಕಾಂಗ್ರೆಸ್ ಕಾರ್ಯಕರ್ತರು ಅಲ್ಲಿಗೆ ನುಗ್ಗಿ ತಮ್ಮ ಶರ್ಟ್ಗಳನ್ನು ತೆಗೆದು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಘೋಷಣೆಗಳನ್ನು ಕೂಗಿದರು. ಭಾರತ-ಯುಎಸ್ ಒಪ್ಪಂದದ ಮೂಲಕ ಸರ್ಕಾರವು ರಾಷ್ಟ್ರೀಯ ಹಿತಾಸಕ್ತಿಗಳನ್ನು ರಾಜಿ ಮಾಡಿಕೊಳ್ಳುತ್ತಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು. ಈ ಘಟನೆಯಿಂದ ಹೌಹಾರಿದ ಅಲ್ಲಿ ಸೇರಿದ್ದ ಸಾರ್ವಜನಿಕರು ಪ್ರತಿಭಟನೆ ನಡೆಸುತ್ತಿದ್ದ ಕಾಂಗ್ರೆಸ್ ಕಾರ್ಯಕರ್ತರಿಗೆ ಕಾಲಿನಿಂದ ಒದ್ದು, ಅಟ್ಟಾಟಿಸಿ ಭಾರತ್ ಮಂಟಪದ ಆವರಣದಿಂದ ಹೊರಕ್ಕಟ್ಟಿದ್ದಾರೆ. ಇದರ ವಿಡಿಯೋ ಜಾಲತಾಣದಲ್ಲಿ ವೈರಲ್ ಆಗಿದೆ.
ಕಾರ್ಯಕರ್ತರ ದಿಢೀರ್ ಪ್ರತಿಭಟನೆ ಶೃಂಗಸಭೆಯಲ್ಲಿ ಭದ್ರತಾ ಲೋಪಕ್ಕೂ ಕಾರಣವಾಗಿದೆ. ಪ್ರತಿಭಟನಾಕಾರರು QR-ಕೋಡ್ ಇದ್ದ ಪಾಸ್ಗಳನ್ನು ಪಡೆದು ಒಳಕ್ಕೆ ಪ್ರವೇಶಿಸಿದ್ದಾರೆ ಎಂದು ಹೇಳಲಾಗಿದೆ. ಇದು ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತಿದೆ. ಘಟನೆಗೆ ಸಂಬಂಧಿಸಿ ದೆಹಲಿ ಪೊಲೀಸರು ನಾಲ್ಕು ಮಂದಿ ಕಾರ್ಯಕರ್ತರನ್ನು ಬಂಧಿಸಿದ್ದಾರೆ. ತಿಲಕ್ ಮಾರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಇದೇ ವೇಳೆ, ಕಾಂಗ್ರೆಸ್ ಪ್ರತಿಭಟನೆಗೆ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದ್ದು ಕಾಂಗ್ರೆಸ್ ಪಾಲಿಗೆ ಎಐ ಸಮಿಟ್ ಅಂದ್ರೆ ಏಂಟಿ ಇಂಡಿಯಾ ಎನ್ನುವಂತಾಗಿದೆ ಎಂದು ಟೀಕೆ ಮಾಡಿದೆ.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
27-07-26 01:09 pm
HK News Staffer
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm