ಬ್ರೇಕಿಂಗ್ ನ್ಯೂಸ್
21-02-26 05:01 pm HK News Desk ದೇಶ - ವಿದೇಶ
ಅಹ್ಮದಾಬಾದ್, ಫೆ.21: 'ಲವ್ ಜಿಹಾದ್’ ತಡೆಯಲು ಗುಜರಾತ್ ಸರ್ಕಾರ ವಿವಾಹ ನೋಂದಣಿ ನಿಯಮಗಳಲ್ಲಿ ಮಹತ್ವದ ಬದಲಾವಣೆಗೆ ಮುಂದಾಗಿದ್ದು, ಪ್ರೇಮ ವಿವಾಹಗಳಿಗೂ ಪೋಷಕರ ಅನುಮತಿ ಕಡ್ಡಾಯ ಎನ್ನುವ ಮಾನದಂಡ ಸೇರಿಸಿದೆ. ಈ ವಿಚಾರ ಸಾಕಷ್ಟು ಚರ್ಚೆಗೂ ಕಾರಣವಾಗಿದೆ.
ಗುಜರಾತ್ ವಿವಾಹ ನೋಂದಣಿ ನಿಯಮಗಳಿಗೆ ತಿದ್ದುಪಡಿ ತರುತ್ತಿದ್ದು, ಇದು ಗೌಪ್ಯತೆ, ಪೋಷಕರ ಒಪ್ಪಿಗೆ ಮತ್ತು ಗುರುತು ಮರೆಮಾಚಿ ವಂಚಿಸುವುದನ್ನು ತಡೆಯುವ ಉದ್ದೇಶ ಹೊಂದಿದೆ. ಪ್ರಸ್ತಾವಿತ ಪ್ರಮಾಣೀಕರಣ ಅವಧಿಯಲ್ಲಿ ಅರ್ಜಿಗಳನ್ನು ಸ್ವೀಕರಿಸಿದ 40 ದಿನಗಳಲ್ಲಿ ಗುರುತಿನ ಚೀಟಿ, ಸಾಕ್ಷಿ ಮತ್ತು ನೋಟರಿ ಪರಿಶೀಲನೆ ಮಾಡಲಾಗುತ್ತದೆ. ವಿವಾಹ ನೋಂದಣಿ ಅರ್ಜಿಗಳನ್ನು ಸ್ವೀಕರಿಸಿದ ಹತ್ತು ದಿನಗಳಲ್ಲಿ ಸಹಾಯಕ ನೋಂದಣಾಧಿಕಾರಿ ಸ್ವತಃ ಪೋಷಕರಿಗೆ ಮಾಹಿತಿ ನೀಡಲಿದ್ದಾರೆ. ಅರ್ಜಿಯನ್ನು ಸಂಬಂಧಪಟ್ಟ ಜಿಲ್ಲೆ ಅಥವಾ ತಾಲೂಕು ನೋಂದಣಾಧಿಕಾರಿಗೆ ಕಳುಹಿಸಬೇಕು. ಪರಿಶೀಲನೆ ಮತ್ತು ಉಪ-ನಿಯಮಗಳ (1 ರಿಂದ 7) ಅನುಸರಣೆಯನ್ನು ಖಚಿತಪಡಿಸಿದ ನಂತರವೇ ಮದುವೆಯನ್ನು ನೋಂದಣಿ ಮಾಡಲಾಗುತ್ತದೆ ಎಂದು ಗುಜರಾತ್ ಗೃಹ ಸಚಿವ ಹರ್ಷ ಸಾಂಘ್ವಿ ವಿವರಿಸಿದ್ದಾರೆ.
ವಿಧಾನಸಭೆಯಲ್ಲಿ ಮಂಡಿಸಲಾದ ಈ ಪ್ರಸ್ತಾವನೆ ಪ್ರಕಾರ, ರಾಜ್ಯದಲ್ಲಿ ವಿವಾಹ ನೋಂದಣಿ ಪ್ರಮಾಣಪತ್ರ ಪಡೆಯುವುದು ಕಡ್ಡಾಯವಾಗಲಿದೆ. ಹೊಸ ನಿಯಮದ ಪ್ರಕಾರ, ವಧು-ವರರು ತಮ್ಮ ಹೆತ್ತವರಿಗೆ ಮದುವೆಯ ಬಗ್ಗೆ ತಿಳಿಸಿರುವುದಾಗಿ ಘೋಷಣೆಯನ್ನು ಸಲ್ಲಿಸಬೇಕಾಗುತ್ತದೆ, ಜೊತೆಗೆ ಅವರ ಪೋಷಕರ ಗುರುತಿನ ಪುರಾವೆ, ಫೋನ್ ನಂಬರ್, ವಸತಿ ಪುರಾವೆಗಳು ಸೇರಿದಂತೆ ಇತರ ದಾಖಲೆಗಳನ್ನು ನೀಡಬೇಕಾಗುತ್ತದೆ ಎಂದು ಹೇಳಿದ್ದಾರೆ.
ಪ್ರೇಮ ವಿವಾಹ ನೋಂದಣಿಗೆ ಅರ್ಜಿ ಸಲ್ಲಿಸಿದ ನಂತರ, ಹುಡುಗಿಯ ಪೋಷಕರಿಗೆ ವಾಟ್ಸಾಪ್ ಮೂಲಕ ವಿವರಗಳನ್ನು ನೀಡಲಾಗುತ್ತದೆ. ಆದರೆ ಅರ್ಜಿ ಸಲ್ಲಿಸಿದ 40 ದಿನಗಳ ನಂತರ ವಿವಾಹ ನೋಂದಣಿ ಪ್ರಮಾಣಪತ್ರವನ್ನು ನೀಡಲಾಗುತ್ತದೆ. 40 ದಿನಗಳ ವಿಳಂಬವು ಬಲವಂತ, ತಪ್ಪು ನಿರೂಪಣೆ ಅಥವಾ ನಕಲಿ ಗುರುತನ್ನು ಪತ್ತೆಹಚ್ಚಲು ಅವಕಾಶ ನೀಡುತ್ತದೆ ಎಂದು ಸರ್ಕಾರ ವಾದಿಸಿದೆ. ಈ ಕ್ರಮವನ್ನು ಸಮರ್ಥಿಸಿಕೊಂಡ ಗೃಹ ಸಚಿವ ಹರ್ಷ ಸಾಂಘ್ವಿ, "ನಾವು ಪ್ರೀತಿಯನ್ನು ವಿರೋಧಿಸುವುದಿಲ್ಲ. ಆದರೆ ಯಾರಾದರೂ 'ಸಲೀಮ್ ಸುರೇಶ್' ಆಗಿ ನಕಲಿ ಗುರುತಿನೊಂದಿಗೆ ಯುವತಿಯನ್ನು ಬಲೆಗೆ ಬೀಳಿಸಲು ಹೋದರೆ, ಅಂತಹ ವಂಚನೆಗೆ ಅವಕಾಶ ನೀಡುವುದಿಲ್ಲ ಎಂದು ಸದನಕ್ಕೆ ತಿಳಿಸಿದರು.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
27-07-26 01:09 pm
HK News Staffer
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm