ಬ್ರೇಕಿಂಗ್ ನ್ಯೂಸ್
21-02-26 05:01 pm HK News Desk ದೇಶ - ವಿದೇಶ
ಅಹ್ಮದಾಬಾದ್, ಫೆ.21: 'ಲವ್ ಜಿಹಾದ್’ ತಡೆಯಲು ಗುಜರಾತ್ ಸರ್ಕಾರ ವಿವಾಹ ನೋಂದಣಿ ನಿಯಮಗಳಲ್ಲಿ ಮಹತ್ವದ ಬದಲಾವಣೆಗೆ ಮುಂದಾಗಿದ್ದು, ಪ್ರೇಮ ವಿವಾಹಗಳಿಗೂ ಪೋಷಕರ ಅನುಮತಿ ಕಡ್ಡಾಯ ಎನ್ನುವ ಮಾನದಂಡ ಸೇರಿಸಿದೆ. ಈ ವಿಚಾರ ಸಾಕಷ್ಟು ಚರ್ಚೆಗೂ ಕಾರಣವಾಗಿದೆ.
ಗುಜರಾತ್ ವಿವಾಹ ನೋಂದಣಿ ನಿಯಮಗಳಿಗೆ ತಿದ್ದುಪಡಿ ತರುತ್ತಿದ್ದು, ಇದು ಗೌಪ್ಯತೆ, ಪೋಷಕರ ಒಪ್ಪಿಗೆ ಮತ್ತು ಗುರುತು ಮರೆಮಾಚಿ ವಂಚಿಸುವುದನ್ನು ತಡೆಯುವ ಉದ್ದೇಶ ಹೊಂದಿದೆ. ಪ್ರಸ್ತಾವಿತ ಪ್ರಮಾಣೀಕರಣ ಅವಧಿಯಲ್ಲಿ ಅರ್ಜಿಗಳನ್ನು ಸ್ವೀಕರಿಸಿದ 40 ದಿನಗಳಲ್ಲಿ ಗುರುತಿನ ಚೀಟಿ, ಸಾಕ್ಷಿ ಮತ್ತು ನೋಟರಿ ಪರಿಶೀಲನೆ ಮಾಡಲಾಗುತ್ತದೆ. ವಿವಾಹ ನೋಂದಣಿ ಅರ್ಜಿಗಳನ್ನು ಸ್ವೀಕರಿಸಿದ ಹತ್ತು ದಿನಗಳಲ್ಲಿ ಸಹಾಯಕ ನೋಂದಣಾಧಿಕಾರಿ ಸ್ವತಃ ಪೋಷಕರಿಗೆ ಮಾಹಿತಿ ನೀಡಲಿದ್ದಾರೆ. ಅರ್ಜಿಯನ್ನು ಸಂಬಂಧಪಟ್ಟ ಜಿಲ್ಲೆ ಅಥವಾ ತಾಲೂಕು ನೋಂದಣಾಧಿಕಾರಿಗೆ ಕಳುಹಿಸಬೇಕು. ಪರಿಶೀಲನೆ ಮತ್ತು ಉಪ-ನಿಯಮಗಳ (1 ರಿಂದ 7) ಅನುಸರಣೆಯನ್ನು ಖಚಿತಪಡಿಸಿದ ನಂತರವೇ ಮದುವೆಯನ್ನು ನೋಂದಣಿ ಮಾಡಲಾಗುತ್ತದೆ ಎಂದು ಗುಜರಾತ್ ಗೃಹ ಸಚಿವ ಹರ್ಷ ಸಾಂಘ್ವಿ ವಿವರಿಸಿದ್ದಾರೆ.
ವಿಧಾನಸಭೆಯಲ್ಲಿ ಮಂಡಿಸಲಾದ ಈ ಪ್ರಸ್ತಾವನೆ ಪ್ರಕಾರ, ರಾಜ್ಯದಲ್ಲಿ ವಿವಾಹ ನೋಂದಣಿ ಪ್ರಮಾಣಪತ್ರ ಪಡೆಯುವುದು ಕಡ್ಡಾಯವಾಗಲಿದೆ. ಹೊಸ ನಿಯಮದ ಪ್ರಕಾರ, ವಧು-ವರರು ತಮ್ಮ ಹೆತ್ತವರಿಗೆ ಮದುವೆಯ ಬಗ್ಗೆ ತಿಳಿಸಿರುವುದಾಗಿ ಘೋಷಣೆಯನ್ನು ಸಲ್ಲಿಸಬೇಕಾಗುತ್ತದೆ, ಜೊತೆಗೆ ಅವರ ಪೋಷಕರ ಗುರುತಿನ ಪುರಾವೆ, ಫೋನ್ ನಂಬರ್, ವಸತಿ ಪುರಾವೆಗಳು ಸೇರಿದಂತೆ ಇತರ ದಾಖಲೆಗಳನ್ನು ನೀಡಬೇಕಾಗುತ್ತದೆ ಎಂದು ಹೇಳಿದ್ದಾರೆ.
ಪ್ರೇಮ ವಿವಾಹ ನೋಂದಣಿಗೆ ಅರ್ಜಿ ಸಲ್ಲಿಸಿದ ನಂತರ, ಹುಡುಗಿಯ ಪೋಷಕರಿಗೆ ವಾಟ್ಸಾಪ್ ಮೂಲಕ ವಿವರಗಳನ್ನು ನೀಡಲಾಗುತ್ತದೆ. ಆದರೆ ಅರ್ಜಿ ಸಲ್ಲಿಸಿದ 40 ದಿನಗಳ ನಂತರ ವಿವಾಹ ನೋಂದಣಿ ಪ್ರಮಾಣಪತ್ರವನ್ನು ನೀಡಲಾಗುತ್ತದೆ. 40 ದಿನಗಳ ವಿಳಂಬವು ಬಲವಂತ, ತಪ್ಪು ನಿರೂಪಣೆ ಅಥವಾ ನಕಲಿ ಗುರುತನ್ನು ಪತ್ತೆಹಚ್ಚಲು ಅವಕಾಶ ನೀಡುತ್ತದೆ ಎಂದು ಸರ್ಕಾರ ವಾದಿಸಿದೆ. ಈ ಕ್ರಮವನ್ನು ಸಮರ್ಥಿಸಿಕೊಂಡ ಗೃಹ ಸಚಿವ ಹರ್ಷ ಸಾಂಘ್ವಿ, "ನಾವು ಪ್ರೀತಿಯನ್ನು ವಿರೋಧಿಸುವುದಿಲ್ಲ. ಆದರೆ ಯಾರಾದರೂ 'ಸಲೀಮ್ ಸುರೇಶ್' ಆಗಿ ನಕಲಿ ಗುರುತಿನೊಂದಿಗೆ ಯುವತಿಯನ್ನು ಬಲೆಗೆ ಬೀಳಿಸಲು ಹೋದರೆ, ಅಂತಹ ವಂಚನೆಗೆ ಅವಕಾಶ ನೀಡುವುದಿಲ್ಲ ಎಂದು ಸದನಕ್ಕೆ ತಿಳಿಸಿದರು.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am