ಬ್ರೇಕಿಂಗ್ ನ್ಯೂಸ್
22-02-26 06:19 pm HK News Desk ದೇಶ - ವಿದೇಶ
ನವದೆಹಲಿ, ಫೆ.22: ತಮಿಳುನಾಡು ಹಾಗೂ ಪಶ್ಚಿಮ ಬಂಗಾಳದಲ್ಲಿ ಪಾಕಿಸ್ತಾನದ ಐಎಸ್ಐ ಹಾಗೂ ಬಾಂಗ್ಲಾದೇಶದ ಉಗ್ರಗಾಮಿ ಸಂಘಟನೆಗಳೊಂದಿಗೆ ಸಂಪರ್ಕ ಹೊಂದಿದ್ದ ಎಂಟು ಮಂದಿ ಶಂಕಿತ ಉಗ್ರರನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. ಸಮಾಜಘಾತುಕ ಕೆಲಸಗಳನ್ನು ಮಾಡುತ್ತಿದ್ದುದಲ್ಲದೆ, ಉಗ್ರ ಸಂಘಟನೆಗಳನ್ನು ಬೆಂಬಲಿಸುವ 'ಫ್ರೀ ಕಾಶ್ಮೀರ'ದಂತಹ ಪೋಸ್ಟ್ ಗಳನ್ನು ಹಂಚಿಕೊಳ್ಳುತ್ತಿದ್ದರು ಎಂದು ತಿಳಿದುಬಂದಿದೆ, ಇವರ ಬಳಿಯಿದ್ದ 8 ಫೋನ್ ಸೇರಿದಂತೆ 16 ಸಿಮ್ ಗಳನ್ನು ವಶಪಡಿಸಿದ್ದಾರೆ.
ತಮಿಳುನಾಡಿನಲ್ಲಿ ಆರು ಮಂದಿ ಹಾಗು ಇಬ್ಬರು ಪಶ್ಚಿಮ ಬಂಗಾಳದಲ್ಲಿ ಬಂಧನಕ್ಕೀಡಾಗಿದ್ದಾರೆ. ಆರು ಮಂದಿ ಶಂಕಿತ ಉಗ್ರರು ತಮಿಳುನಾಡಿನ ತಿರುಪ್ಪೂರು ಜಿಲ್ಲೆಯಲ್ಲಿ ಗಾರ್ಮೆಂಟ್ಸ್ ನಲ್ಲಿ ಕೆಲಸ ಮಾಡುತ್ತಿದ್ದರು. ಬಂಧಿತರನ್ನು ಮಿಜಾನೂರ್ ರೆಹಮಾನ್, ಮೊಹಮ್ಮದ್ ಶಬತ್, ಉಮರ್, ಮೊಹಮ್ಮದ್ ಲಿತನ್, ಮೊಹಮ್ಮದ್ ಶಾಹಿದ್ ಮತ್ತು ಮೊಹಮ್ಮದ್ ಉಜ್ಜಲ್ ಎಂದು ಗುರುತಿಸಲಾಗಿದೆ.
ಉಳಿದ ಇಬ್ಬರು ಶಂಕಿತರನ್ನು ಪಶ್ಚಿಮ ಬಂಗಾಳದಲ್ಲಿ ಬಂಧಿಸಲಾಗಿದೆ. ಇವರಲ್ಲಿ ಕೆಲವರು ಬಾಂಗ್ಲಾದೇಶದ ಪ್ರಜೆಗಳಾಗಿದ್ದು, ತಮ್ಮ ಗುರುತನ್ನು ಮರೆಮಾಚಲು ನಕಲಿ ಆಧಾರ್ ಕಾರ್ಡ್ ಗಳನ್ನು ಬಳಸುತ್ತಿದ್ದರು ಎಂದು ತಿಳಿದುಬಂದಿದೆ. ಇವರು ಪಾಕಿಸ್ತಾನ ಮೂಲದ ಉಗ್ರ ಸಂಘಟನೆಗಳನ್ನು ಬೆಂಬಲಿಸುವಂತಹ ಪ್ರಚೋದನಕಾರಿ ಪೋಸ್ಟ್ ಗಳನ್ನು ಹಾಕುತ್ತಿದ್ದರು ಎಂಬ ವಿಚಾರ ತಿಳಿದುಬಂದಿದೆ. ಇವರ ಬಳಿ ಇದ್ದ 8 ಫೋನ್ ಗಳನ್ನು ಹಾಗೂ 16 ಸಿಮ್ ಕಾರ್ಡ್ ಗಳನ್ನು ವಶ ಪಡಿಸಲಾಗಿದೆ ಎಂದು ದೆಹಲಿಯ ವಿಶೇಷ ಘಟಕ ತಿಳಿಸಿದೆ.
ದೇಶದ ವಿವಿಧ ಕಡೆಗಳಲ್ಲಿ ವಿಧ್ವಂಸಕ ಚಟುವಟಿಕೆಗಳನ್ನು ನಡೆಸಲು ಇವರು ನೆಟ್ ವರ್ಕ್ ಮಾಡುತ್ತಿದ್ದರು. ಇತ್ತೀಚೆಗೆ ದೆಹಲಿ ಮೆಟ್ರೋ ಸೇರಿದಂತೆ ರಾಷ್ಟ್ರ ರಾಜಧಾನಿಯ ಹಲವೆಡೆ ಪ್ರಚೋದನಕಾರಿ ಪೋಸ್ಟರ್ ಕಾಣಿಸಿಕೊಂಡ ನಂತರ ಈ ಜಾಲದ ಮಾಹಿತಿ ಸಿಕ್ಕಿತ್ತು. ಇವರು ʼಫ್ರೀ ಕಾಶ್ಮೀರʼ ಪೋಸ್ಟ್ ಗಳನ್ನು ಹಂಚಿಕೊಂಡಿದ್ದನ್ನು ಪೊಲೀಸರು ಪತ್ತೆ ಮಾಡಿದ್ದರು. ಹೆಚ್ಚಿನ ತನಿಖೆ ನಡೆಯಲಿದ್ದು, ಇವರೊಂದಿಗೆ ಸಂಪರ್ಕದಲ್ಲಿರುವ ವ್ಯಕ್ತಿಗಳನ್ನು ಪತ್ತೆಹಚ್ಚುವುದು, ಇವರಿಗೆ ದೊರಕುತ್ತಿದ್ದ ಆರ್ಥಿಕ ಸಹಾಯ ಹಾಗೂ ಸಂಪರ್ಕಗಳು ಎಲ್ಲಿಯವು ಎಂಬುದನ್ನು ಪತ್ತೆ ಹಚ್ಚಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
21-02-26 11:27 am
HK News Desk
ಹಾಸನಾಂಬೆ ಉತ್ಸವ ಟೆಂಡರ್ನಲ್ಲಿ ಭಾರೀ ಗೋಲ್ಮಾಲ್ ? ;...
20-02-26 09:20 pm
ಸಾರಿಗೆ ನೌಕರರ ಮುಷ್ಕರ ತಾತ್ಕಾಲಿಕ ಹಿಂದಕ್ಕೆ ; 26 ತ...
19-02-26 09:29 pm
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
22-02-26 06:19 pm
HK News Desk
ಲವ್ ಜಿಹಾದ್’ ತಡೆಗೆ ಗುಜರಾತ್ ನಲ್ಲಿ ವಿವಾಹ ನೋಂದಣಿ...
21-02-26 05:01 pm
ಸುಂಕ ನೀತಿ ಕಾನೂನುಬಾಹಿರ ಎಂದ ಅಮೆರಿಕ ಸುಪ್ರೀಂ ಕೋರ್...
21-02-26 03:07 pm
ಎಐ ಶೃಂಗಸಭೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಶರ್ಟ್ ಬಿ...
20-02-26 08:45 pm
ಗಲ್ಫ್ ದೇಶಗಳತ್ತ ಅಮೆರಿಕದ ಯುದ್ಧ ವಿಮಾನಗಳು ; ಇರಾನ್...
19-02-26 11:04 pm
22-02-26 06:55 pm
Mangalore Correspondent
ಸುಜಿತ್ ಮಾಡೂರು ಬಿಜೆಪಿಯಿಂದ ಉಚ್ಚಾಟನೆ ಪ್ರಕರಣ ; ಸಾ...
21-02-26 09:30 pm
ಲೂಡೋ ಆಡುವಾಗ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟು ವರ್...
21-02-26 09:02 pm
Mangalore, SIT, Sridhar: ಶಿಬಾಜೆ ಶ್ರೀಧರ ಮುಗೇರ...
20-02-26 06:05 pm
Kotekar, Mangalore News: ಕೋಟೆಕಾರು ಪ.ಪಂ ಸದಸ್ಯ...
20-02-26 04:18 pm
21-02-26 05:50 pm
HK News Desk
ಬೆಂಗಳೂರಿನಲ್ಲಿ ಭಯೋತ್ಪಾದಕ ಜಾಲ ; ಎನ್ಐಎ ವಾಂಟೆಡ್ ಲ...
21-02-26 04:29 pm
ಕೊಲೆ- ಆತ್ಮಹತ್ಯೆ-ನಾಪತ್ತೆ ಕತೆ ಕಟ್ಟಿದ್ದ ಮಹಿಳೆ ;...
21-02-26 02:22 pm
Mangalore Police, Safwan Hussain Arrest : ನಟೋ...
20-02-26 10:08 pm
ಲಕ್ಕುಂಡಿ ನಿಧಿ ಹೆಸ್ರಲ್ಲಿ ಜನರಿಗೆ ಟೋಪಿ ; ಹಂಡಿಯೊಳ...
20-02-26 09:07 pm