ಬ್ರೇಕಿಂಗ್ ನ್ಯೂಸ್
23-02-26 06:57 pm HK News Desk ದೇಶ - ವಿದೇಶ
ಜೈಪುರ, ಫೆ.23: ರಾಜಸ್ಥಾನದಲ್ಲಿ ಕಂಬಳಿ ವಿತರಣೆ ಕಾರ್ಯಕ್ರಮದ ವೇಳೆ ಮುಸ್ಲಿಂ ಮಹಿಳೆಗೆ ಕಂಬಳಿ ನೀಡಲು ನಿರಾಕರಿಸಿರುವ ಬಿಜೆಪಿ ಸಂಸದನ ನಡೆ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಘಟನೆಗೆ ಸಂಬಂಧಿಸಿ ಟೋಂಕ್–ಸವಾಯಿ ಮಾಧೋಪುರ ಕ್ಷೇತ್ರದ ಮಾಜಿ ಬಿಜೆಪಿ ಸಂಸದ ಸುಖಬೀರ್ ಸಿಂಗ್ ಜೌನಪುರಿಯಾ ವಿರುದ್ಧ ಮುಸ್ಲಿಂ ಮಹಿಳೆ ಬಗ್ಗೆ ತಾರತಮ್ಯದ ಆರೋಪ ಕೇಳಿಬಂದಿದೆ.
ಫೆಬ್ರವರಿ 22 ರಂದು ನಿವಾಯ್ ತಹಸಿಲಿನ ಕರೇರಾ ಗ್ರಾಮದಲ್ಲಿ ಕಂಬಳಿ ವಿತರಣಾ ಸಮಾರಂಭ ಆಯೋಜಿಸಲಾಗಿತ್ತು. 2014 ರಿಂದ 2024ರ ವರೆಗೆ ಸಂಸದರಾಗಿದ್ದ ಸುಖಬೀರ್ ಸಿಂಗ್ ಜೌನಪುರಿಯಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಹಿಳೆಯರಿಗೆ ಕಂಬಳಿಗಳನ್ನು ವಿತರಿಸುತ್ತಿದ್ದರು.
ಈ ಸಂದರ್ಭದಲ್ಲಿ ಒಬ್ಬ ಮಹಿಳೆ ಕಂಬಳಿ ಸ್ವೀಕರಿಸಲು ಬಂದಿದ್ದು ಆಕೆಯದ್ದು ಮುಸ್ಲಿಂ ಹೆಸರು ಎಂದು ತಿಳಿಯುತ್ತಲೇ ಸುಖಬೀರ್ ಸಿಂಗ್, “ಪ್ರಧಾನಿ ನರೇಂದ್ರ ಮೋದಿಯನ್ನು ನಿಂದಿಸುವವರಿಗೆ ಕಂಬಳಿ ತೆಗೆದುಕೊಳ್ಳುವ ಹಕ್ಕಿಲ್ಲ. ನಿಮಗಿದು ಕೆಟ್ಟದು ಅಂತನಿಸಿದರೆ ನನಗೇನೂ ಮಾಡಲಾಗದು" ಎಂದು ಹೇಳಿ ಕಂಬಳಿಯನ್ನು ನೀಡಲು ನಿರಾಕರಿಸಿದ ವಿಡಿಯೋ ವೈರಲ್ ಆಗಿದೆ. ಘಟನೆಯ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸಾರ್ವಜನಿಕ ವಲಯದಲ್ಲಿ ಆಕ್ರೋಶ ವ್ಯಕ್ತವಾಗಿದೆ.
ಟೋಂಕ್–ಸವಾಯಿ ಮಾಧೋಪುರ ಕ್ಷೇತ್ರದ ಕಾಂಗ್ರೆಸ್ ಸಂಸದ ಹರೀಶ್ ಚಂದ್ರ ಮೀನಾ ಈ ವೀಡಿಯೋವನ್ನು ಹಂಚಿಕೊಂಡು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಸಿಂಗ್ ಅವರ ನಡವಳಿಕೆ ದೇಶದ ಸಾಮಾಜಿಕ ಸೌಹಾರ್ದತೆಗೆ ಧಕ್ಕೆಯುಂಟು ಮಾಡುತ್ತದೆ ಎಂದು ಕಿಡಿಕಾರಿದ್ದಾರೆ. ಇದೇ ವೇಳೆ ವಿರೋಧ ಪಕ್ಷದ ನಾಯಕ ಟಿಕಾರಂ ಜೂಲಿ ಕೂಡ ಘಟನೆಯನ್ನು ತಾರತಮ್ಯದ ನಡವಳಿಕೆ ಎಂದು ಟೀಕಿಸಿದ್ದು ಜನಪ್ರತಿನಿಧಿಯೊಬ್ಬರು ಈ ರೀತಿಯಲ್ಲಿ ವರ್ತಿಸಿರುವುದು ಖಂಡನೀಯ ಎಂದು ಹೇಳಿದ್ದಾರೆ.
ವಿವಾದ ತೀವ್ರಗೊಂಡ ನಂತರ ಸುಖಬೀರ್ ಸಿಂಗ್ ಜೌನಪುರಿಯಾ ಸ್ಪಷ್ಟನೆ ನೀಡಿದ್ದು, ಕಂಬಳಿ ವಿತರಣೆ ಸಂಪೂರ್ಣ ತಮ್ಮ ವೈಯಕ್ತಿಕ ಕಾರ್ಯಕ್ರಮವಾಗಿದ್ದು ಯಾವುದೇ ಸರ್ಕಾರಿ ಯೋಜನೆ ಅಥವಾ ಸಾರ್ವಜನಿಕ ಹಣವನ್ನು ಬಳಸಲಾಗಿಲ್ಲ ಎಂದು ತಿಳಿಸಿದ್ದಾರೆ. ತಾವು ಯಾರ ಮೇಲೂ ತಾರತಮ್ಯ ಮಾಡಿಲ್ಲ ಎಂದು ಅವರು ಹೇಳಿದ್ದಾರೆ.
29-05-26 10:41 pm
HK News Staffer
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಿದ್ದರಾ...
28-05-26 06:18 pm
CM Siddaramaiah, Supporters crying, Kaveri: ಸ...
28-05-26 05:31 pm
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am