ಬ್ರೇಕಿಂಗ್ ನ್ಯೂಸ್
23-02-26 06:57 pm HK News Desk ದೇಶ - ವಿದೇಶ
ಜೈಪುರ, ಫೆ.23: ರಾಜಸ್ಥಾನದಲ್ಲಿ ಕಂಬಳಿ ವಿತರಣೆ ಕಾರ್ಯಕ್ರಮದ ವೇಳೆ ಮುಸ್ಲಿಂ ಮಹಿಳೆಗೆ ಕಂಬಳಿ ನೀಡಲು ನಿರಾಕರಿಸಿರುವ ಬಿಜೆಪಿ ಸಂಸದನ ನಡೆ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಘಟನೆಗೆ ಸಂಬಂಧಿಸಿ ಟೋಂಕ್–ಸವಾಯಿ ಮಾಧೋಪುರ ಕ್ಷೇತ್ರದ ಮಾಜಿ ಬಿಜೆಪಿ ಸಂಸದ ಸುಖಬೀರ್ ಸಿಂಗ್ ಜೌನಪುರಿಯಾ ವಿರುದ್ಧ ಮುಸ್ಲಿಂ ಮಹಿಳೆ ಬಗ್ಗೆ ತಾರತಮ್ಯದ ಆರೋಪ ಕೇಳಿಬಂದಿದೆ.
ಫೆಬ್ರವರಿ 22 ರಂದು ನಿವಾಯ್ ತಹಸಿಲಿನ ಕರೇರಾ ಗ್ರಾಮದಲ್ಲಿ ಕಂಬಳಿ ವಿತರಣಾ ಸಮಾರಂಭ ಆಯೋಜಿಸಲಾಗಿತ್ತು. 2014 ರಿಂದ 2024ರ ವರೆಗೆ ಸಂಸದರಾಗಿದ್ದ ಸುಖಬೀರ್ ಸಿಂಗ್ ಜೌನಪುರಿಯಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಹಿಳೆಯರಿಗೆ ಕಂಬಳಿಗಳನ್ನು ವಿತರಿಸುತ್ತಿದ್ದರು.
ಈ ಸಂದರ್ಭದಲ್ಲಿ ಒಬ್ಬ ಮಹಿಳೆ ಕಂಬಳಿ ಸ್ವೀಕರಿಸಲು ಬಂದಿದ್ದು ಆಕೆಯದ್ದು ಮುಸ್ಲಿಂ ಹೆಸರು ಎಂದು ತಿಳಿಯುತ್ತಲೇ ಸುಖಬೀರ್ ಸಿಂಗ್, “ಪ್ರಧಾನಿ ನರೇಂದ್ರ ಮೋದಿಯನ್ನು ನಿಂದಿಸುವವರಿಗೆ ಕಂಬಳಿ ತೆಗೆದುಕೊಳ್ಳುವ ಹಕ್ಕಿಲ್ಲ. ನಿಮಗಿದು ಕೆಟ್ಟದು ಅಂತನಿಸಿದರೆ ನನಗೇನೂ ಮಾಡಲಾಗದು" ಎಂದು ಹೇಳಿ ಕಂಬಳಿಯನ್ನು ನೀಡಲು ನಿರಾಕರಿಸಿದ ವಿಡಿಯೋ ವೈರಲ್ ಆಗಿದೆ. ಘಟನೆಯ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸಾರ್ವಜನಿಕ ವಲಯದಲ್ಲಿ ಆಕ್ರೋಶ ವ್ಯಕ್ತವಾಗಿದೆ.
ಟೋಂಕ್–ಸವಾಯಿ ಮಾಧೋಪುರ ಕ್ಷೇತ್ರದ ಕಾಂಗ್ರೆಸ್ ಸಂಸದ ಹರೀಶ್ ಚಂದ್ರ ಮೀನಾ ಈ ವೀಡಿಯೋವನ್ನು ಹಂಚಿಕೊಂಡು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಸಿಂಗ್ ಅವರ ನಡವಳಿಕೆ ದೇಶದ ಸಾಮಾಜಿಕ ಸೌಹಾರ್ದತೆಗೆ ಧಕ್ಕೆಯುಂಟು ಮಾಡುತ್ತದೆ ಎಂದು ಕಿಡಿಕಾರಿದ್ದಾರೆ. ಇದೇ ವೇಳೆ ವಿರೋಧ ಪಕ್ಷದ ನಾಯಕ ಟಿಕಾರಂ ಜೂಲಿ ಕೂಡ ಘಟನೆಯನ್ನು ತಾರತಮ್ಯದ ನಡವಳಿಕೆ ಎಂದು ಟೀಕಿಸಿದ್ದು ಜನಪ್ರತಿನಿಧಿಯೊಬ್ಬರು ಈ ರೀತಿಯಲ್ಲಿ ವರ್ತಿಸಿರುವುದು ಖಂಡನೀಯ ಎಂದು ಹೇಳಿದ್ದಾರೆ.
ವಿವಾದ ತೀವ್ರಗೊಂಡ ನಂತರ ಸುಖಬೀರ್ ಸಿಂಗ್ ಜೌನಪುರಿಯಾ ಸ್ಪಷ್ಟನೆ ನೀಡಿದ್ದು, ಕಂಬಳಿ ವಿತರಣೆ ಸಂಪೂರ್ಣ ತಮ್ಮ ವೈಯಕ್ತಿಕ ಕಾರ್ಯಕ್ರಮವಾಗಿದ್ದು ಯಾವುದೇ ಸರ್ಕಾರಿ ಯೋಜನೆ ಅಥವಾ ಸಾರ್ವಜನಿಕ ಹಣವನ್ನು ಬಳಸಲಾಗಿಲ್ಲ ಎಂದು ತಿಳಿಸಿದ್ದಾರೆ. ತಾವು ಯಾರ ಮೇಲೂ ತಾರತಮ್ಯ ಮಾಡಿಲ್ಲ ಎಂದು ಅವರು ಹೇಳಿದ್ದಾರೆ.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
27-07-26 01:09 pm
HK News Staffer
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm