ಬ್ರೇಕಿಂಗ್ ನ್ಯೂಸ್
23-02-26 06:57 pm HK News Desk ದೇಶ - ವಿದೇಶ
ಜೈಪುರ, ಫೆ.23: ರಾಜಸ್ಥಾನದಲ್ಲಿ ಕಂಬಳಿ ವಿತರಣೆ ಕಾರ್ಯಕ್ರಮದ ವೇಳೆ ಮುಸ್ಲಿಂ ಮಹಿಳೆಗೆ ಕಂಬಳಿ ನೀಡಲು ನಿರಾಕರಿಸಿರುವ ಬಿಜೆಪಿ ಸಂಸದನ ನಡೆ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಘಟನೆಗೆ ಸಂಬಂಧಿಸಿ ಟೋಂಕ್–ಸವಾಯಿ ಮಾಧೋಪುರ ಕ್ಷೇತ್ರದ ಮಾಜಿ ಬಿಜೆಪಿ ಸಂಸದ ಸುಖಬೀರ್ ಸಿಂಗ್ ಜೌನಪುರಿಯಾ ವಿರುದ್ಧ ಮುಸ್ಲಿಂ ಮಹಿಳೆ ಬಗ್ಗೆ ತಾರತಮ್ಯದ ಆರೋಪ ಕೇಳಿಬಂದಿದೆ.
ಫೆಬ್ರವರಿ 22 ರಂದು ನಿವಾಯ್ ತಹಸಿಲಿನ ಕರೇರಾ ಗ್ರಾಮದಲ್ಲಿ ಕಂಬಳಿ ವಿತರಣಾ ಸಮಾರಂಭ ಆಯೋಜಿಸಲಾಗಿತ್ತು. 2014 ರಿಂದ 2024ರ ವರೆಗೆ ಸಂಸದರಾಗಿದ್ದ ಸುಖಬೀರ್ ಸಿಂಗ್ ಜೌನಪುರಿಯಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಹಿಳೆಯರಿಗೆ ಕಂಬಳಿಗಳನ್ನು ವಿತರಿಸುತ್ತಿದ್ದರು.
ಈ ಸಂದರ್ಭದಲ್ಲಿ ಒಬ್ಬ ಮಹಿಳೆ ಕಂಬಳಿ ಸ್ವೀಕರಿಸಲು ಬಂದಿದ್ದು ಆಕೆಯದ್ದು ಮುಸ್ಲಿಂ ಹೆಸರು ಎಂದು ತಿಳಿಯುತ್ತಲೇ ಸುಖಬೀರ್ ಸಿಂಗ್, “ಪ್ರಧಾನಿ ನರೇಂದ್ರ ಮೋದಿಯನ್ನು ನಿಂದಿಸುವವರಿಗೆ ಕಂಬಳಿ ತೆಗೆದುಕೊಳ್ಳುವ ಹಕ್ಕಿಲ್ಲ. ನಿಮಗಿದು ಕೆಟ್ಟದು ಅಂತನಿಸಿದರೆ ನನಗೇನೂ ಮಾಡಲಾಗದು" ಎಂದು ಹೇಳಿ ಕಂಬಳಿಯನ್ನು ನೀಡಲು ನಿರಾಕರಿಸಿದ ವಿಡಿಯೋ ವೈರಲ್ ಆಗಿದೆ. ಘಟನೆಯ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸಾರ್ವಜನಿಕ ವಲಯದಲ್ಲಿ ಆಕ್ರೋಶ ವ್ಯಕ್ತವಾಗಿದೆ.
ಟೋಂಕ್–ಸವಾಯಿ ಮಾಧೋಪುರ ಕ್ಷೇತ್ರದ ಕಾಂಗ್ರೆಸ್ ಸಂಸದ ಹರೀಶ್ ಚಂದ್ರ ಮೀನಾ ಈ ವೀಡಿಯೋವನ್ನು ಹಂಚಿಕೊಂಡು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಸಿಂಗ್ ಅವರ ನಡವಳಿಕೆ ದೇಶದ ಸಾಮಾಜಿಕ ಸೌಹಾರ್ದತೆಗೆ ಧಕ್ಕೆಯುಂಟು ಮಾಡುತ್ತದೆ ಎಂದು ಕಿಡಿಕಾರಿದ್ದಾರೆ. ಇದೇ ವೇಳೆ ವಿರೋಧ ಪಕ್ಷದ ನಾಯಕ ಟಿಕಾರಂ ಜೂಲಿ ಕೂಡ ಘಟನೆಯನ್ನು ತಾರತಮ್ಯದ ನಡವಳಿಕೆ ಎಂದು ಟೀಕಿಸಿದ್ದು ಜನಪ್ರತಿನಿಧಿಯೊಬ್ಬರು ಈ ರೀತಿಯಲ್ಲಿ ವರ್ತಿಸಿರುವುದು ಖಂಡನೀಯ ಎಂದು ಹೇಳಿದ್ದಾರೆ.
ವಿವಾದ ತೀವ್ರಗೊಂಡ ನಂತರ ಸುಖಬೀರ್ ಸಿಂಗ್ ಜೌನಪುರಿಯಾ ಸ್ಪಷ್ಟನೆ ನೀಡಿದ್ದು, ಕಂಬಳಿ ವಿತರಣೆ ಸಂಪೂರ್ಣ ತಮ್ಮ ವೈಯಕ್ತಿಕ ಕಾರ್ಯಕ್ರಮವಾಗಿದ್ದು ಯಾವುದೇ ಸರ್ಕಾರಿ ಯೋಜನೆ ಅಥವಾ ಸಾರ್ವಜನಿಕ ಹಣವನ್ನು ಬಳಸಲಾಗಿಲ್ಲ ಎಂದು ತಿಳಿಸಿದ್ದಾರೆ. ತಾವು ಯಾರ ಮೇಲೂ ತಾರತಮ್ಯ ಮಾಡಿಲ್ಲ ಎಂದು ಅವರು ಹೇಳಿದ್ದಾರೆ.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am