ಬ್ರೇಕಿಂಗ್ ನ್ಯೂಸ್
25-02-26 10:10 pm HK News Desk ದೇಶ - ವಿದೇಶ
ಬೆಂಗಳೂರು, ಫೆ.25 ತಮ್ಮ ಬೇಡಿಕೆ ಈಡೇರಿಸಲು ಸರ್ಕಾರ ವಿಫಲವಾಗಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳು ಮಾರ್ಚ್ 11ರಿಂದ ಅನಿರ್ದಿಷ್ಟ ಮುಷ್ಕರ ನಡೆಸಲು ಮುಂದಾಗಿದ್ದಾರೆ. ಸರ್ಕಾರಿ ವೈದ್ಯಾಧಿಕಾರಿಗಳ ಸಂಘ, ಕರ್ನಾಟಕ ರಾಜ್ಯ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖಾ ನೌಕರರ ಕೇಂದ್ರ ಸಂಘ ಮತ್ತು ಇಲಾಖೆಯ ಎಲ್ಲಾ ವೃಂದ ಸಂಘಗಳು ಮುಷ್ಕರಕ್ಕೆ ಕರೆ ನೀಡಿವೆ.
ಅನಿರ್ದಿಷ್ಟ ಮುಷ್ಕರದ ಮೊದಲ ಹಂತವಾಗಿ ಮಾರ್ಚ್ 11ರಿಂದ 15ರ ವರೆಗೆ ಓಪಿಡಿ ಸೇವೆ (ಹೊರರೋಗಿಗಳ ಸೇವೆ) ಬಂದ್ ಮಾಡಲು ನಿರ್ಧರಿಸಿದ್ದು ತುರ್ತು ಸೇವೆ ಮಾತ್ರ ಇರಲಿದೆ ಎಂದು ತಿಳಿಸಿದ್ದಾರೆ. ಬೇಡಿಕೆ ಈಡೇರುವವರೆಗೆ ಹೋರಾಟ ಮುಂದುವರೆಸುವುದಾಗಿ ವೈದ್ಯಾಧಿಕಾರಿಗಳ ಸಂಘದ ರಾಜ್ಯಾಧ್ಯಕ್ಷ ಡಾ ರವೀಂದ್ರನಾಛ ಎನ್ ಮೇಟಿ, ಕಾರ್ಯದರ್ಶಿ ಡಾ. ತಿಮ್ಮರಾಜು ಪಿ.ಆರ್, ಆರೋಗ್ಯ ಇಲಾಖೆ ಕೇಂದ್ರ ಸಂಘದ ರಾಜ್ಯಾಧ್ಯಕ್ಷ ಮಲ್ಲಿಕಾರ್ಜುನ ಬಿ ಬಳ್ಳಾರಿ, ಕಾರ್ಯದರ್ಶಿ ಎಚ್ ಪುಟ್ಟರಾಜು ತಿಳಿಸಿದ್ದಾರೆ.
ಎರಡು ಹಂತದಲ್ಲಿ ಮುಷ್ಕರ
ಎರಡು ಹಂತದಲ್ಲಿ ಮುಷ್ಕರ ನಡೆಸಲು ಮುಂದಾಗಿದ್ದಾರೆ. ಮೊದಲ ಹಂತದಲ್ಲಿ ಓಪಿಡಿ ಬಂದ್ ಮಾಡಿ ಮುಷ್ಕರ ನಡೆಸುವುದು, ಎರಡನೇ ಹಂತದಲ್ಲಿ ಆಸ್ಪತ್ರೆಗೆ ಗೈರಾಗುವ ಮೂಲಕ ವೈದ್ಯರು ಮುಷ್ಕರ ನಡೆಸಲಿದ್ದಾರೆ. ಮಾರ್ಚ್ 11ರಿಂದ 15ರ ವರೆಗೆ ರಾಜ್ಯದ ಎಲ್ಲಾ ಜಿಲ್ಲಾಸ್ಪತ್ರೆಗಳು, ತಾಲೂಕು ಆಸ್ಪತ್ರೆಗಳು, ಸಮುದಾಯ ಆರೋಗ್ಯ ಕೇಂದ್ರಗಳು, ಪ್ರಾಥಮಿಕ ಆರೋಗ್ಯ ಕೇಂದ್ರಗಳು ಮತ್ತು ಡಿಸ್ಪೆನ್ಸರಿಗಳಲ್ಲಿ ಕಪ್ಪು ಪಟ್ಟಿ ಧರಿಸಿ ಹೊರ ರೋಗಿ ಚಿಕಿತ್ಸೆ ಸ್ಥಗಿತಗೊಳಿಸಲು ವೈದ್ಯರು ತೀರ್ಮಾನಿಸಿದ್ದಾರೆ. ಕೇವಲ ತುರ್ತು ಸೇವೆಗಳನ್ನು ಮಾತ್ರ ನಿರ್ವಹಿಸುವ ಮೂಲಕ ಮುಷ್ಕರದಲ್ಲಿ ಪಾಲ್ಗೊಳ್ಳಲು ನಿರ್ಧರಿಸಿದ್ದಾರೆ. ಮಾರ್ಚ್ 16ರಿಂದ ಕರ್ತವ್ಯಕ್ಕೆ ಅನಿರ್ದಿಷ್ಟಾವಧಿ ವರೆಗೂ ಗೈರಾಗುವ ಮೂಲಕ ಮುಷ್ಕರ ತೀವ್ರಗೊಳಿಸಲು ನಿರ್ಧಾರಿಸಲಾಗಿದೆ ಎಂದು ಸಂಘಟನೆ ಪದಾಧಿಕಾರಿಗಳು ತಿಳಿಸಿದ್ದಾರೆ.
ವೈದ್ಯರ ಸಂಘದ ಬೇಡಿಕೆಗಳು
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
27-07-26 01:09 pm
HK News Staffer
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm