ಬ್ರೇಕಿಂಗ್ ನ್ಯೂಸ್
27-02-26 06:14 am HK News Staffer ದೇಶ - ವಿದೇಶ
ಭುವನೇಶ್ವರ, ಫೆ.26: ಭುವನೇಶ್ವರದಲ್ಲಿ ನಡೆದ ವಿಜಿಲೆನ್ಸ್ ಕಾರ್ಯಾಚರಣೆ ಒಡಿಶಾ ರಾಜ್ಯದ ಭ್ರಷ್ಟಾಚಾರ ವಿರೋಧಿ ಇತಿಹಾಸದಲ್ಲಿ ಹೊಸ ಇತಿಹಾಸ ಬರೆದಿದೆ. ಕಟಕ್ ವೃತ್ತದ ಗಣಿ ಉಪ ನಿರ್ದೇಶಕ ದೇವಬ್ರತ ಮೊಹಂತಿ ಅವರನ್ನು ₹30,000 ಲಂಚ ಸ್ವೀಕರಿಸಿದ ಆರೋಪದ ಮೇಲೆ ಬುಧವಾರ ಬೆಳಗ್ಗೆ ಬಂಧಿಸಿದ ಕೆಲವೇ ಗಂಟೆಗಳಲ್ಲಿ, ಅವರ ನಿವಾಸದಲ್ಲಿ ನಡೆದ ಶೋಧದಲ್ಲಿ 4 ಕೋಟಿಗೂ ಅಧಿಕ ನಗದು ಪತ್ತೆಯಾಗಿದೆ. ಅಧಿಕಾರಿಗಳ ಪ್ರಕಾರ, ಇದು ಒಡಿಶಾ ವಿಜಿಲೆನ್ಸ್ ಇತಿಹಾಸದಲ್ಲೇ ಅತಿದೊಡ್ಡ ನಗದು ವಶಕ್ಕೆ ಪಡೆದಿರುವುದಾಗಿದೆ.
ಕಲ್ಲಿದ್ದಲು ಡಿಪೋದ ಸುಗಮ ಕಾರ್ಯಾಚರಣೆ ಮತ್ತು ಸಾರಿಗೆ ಅನುಮತಿ ನೀಡಲು ಪರವಾನಗಿ ಪಡೆದ ವ್ಯಾಪಾರಿಯಿಂದ ಲಂಚ ಬೇಡಿಕೆಯ ದೂರಿನ ಆಧಾರದ ಮೇಲೆ ವಿಜಿಲೆನ್ಸ್ ಇಲಾಖೆ ದೇಬಬ್ರತ್ ಮೊಹಂತಿ ಮೇಲೆ ಬಲೆ ಬೀಸಿತ್ತು. ಬಂಧನದ ಬಳಿಕ ಭುವನೇಶ್ವರ ವಿಜಿಲೆನ್ಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ವಿಸ್ತರಿಸಲಾಗಿತ್ತು. ನಂತರ ಭುವನೇಶ್ವರದಲ್ಲಿರುವ ಅವರ ವಸತಿ ಫ್ಲಾಟ್, ಭದ್ರಕ್ ಜಿಲ್ಲೆಯ ಮಾತಾಸಾಹಿಯಲ್ಲಿರುವ ಪೋಷಕರ ಮನೆ ಹಾಗೂ ಕಟಕ್ನಲ್ಲಿರುವ ಕಚೇರಿಯಲ್ಲಿ ಏಕಕಾಲದಲ್ಲಿ ದಾಳಿ ನಡೆಸಲಾಯಿತು.
ಭುವನೇಶ್ವರದ ಫ್ಲಾಟ್ನಲ್ಲಿ ಟ್ರಾಲಿ ಬ್ಯಾಗ್ಗಳು ಮತ್ತು ಅಲ್ಮೆರಾಗಳಲ್ಲಿ ಸಂಗ್ರಹಿಸಲಾಗಿದ್ದ ಭಾರೀ ಪ್ರಮಾಣದ ನಗದು ಪತ್ತೆಯಾಗಿದೆ. ಇದರ ಜೊತೆಗೆ ಕಚೇರಿ ಡ್ರಾಯರ್ ಮತ್ತು ವೈಯಕ್ತಿಕ ವಶದಿಂದ ₹1.20 ಲಕ್ಷ ನಗದು, ಭುವನೇಶ್ವರದ ಪಹಲಾ ಪ್ರದೇಶದಲ್ಲಿರುವ ಸುಮಾರು 2,400 ಚದರ ಅಡಿ ವಿಸ್ತೀರ್ಣದ ಎರಡು ಅಂತಸ್ತಿನ ಕಟ್ಟಡ ಮತ್ತು ಸುಮಾರು 130 ಗ್ರಾಂ ಚಿನ್ನಾಭರಣವೂ ಪತ್ತೆಯಾಗಿದೆ.
ಮೊಹಂತಿ 2004ರಲ್ಲಿ ಜೂನಿಯರ್ ಮೈನಿಂಗ್ ಆಫೀಸರ್ ಆಗಿ ಸರ್ಕಾರಿ ಸೇವೆಗೆ ಸೇರಿದ್ದರು. ಆಗ ಅವರ ಸಂಬಳ 8,000 ರೂ. ಇತ್ತು. ನಂತರ ಅವರು ಬರಿಪಾದ (2006-2008), ಬೆರ್ಹಾಂಪುರ್ (2009-2011), ಕಟಕ್ (2011-2014) ಮತ್ತು ಭುವನೇಶ್ವರದಲ್ಲಿರುವ ರಾಜ್ಯ ಪ್ರಧಾನ ಕಚೇರಿಯಲ್ಲಿ (2014-2018) ಸೇವೆ ಸಲ್ಲಿಸಿದ್ದರು. ಮಾರ್ಚ್ 2018 ರಲ್ಲಿ ಅವರನ್ನು ಸಹಾಯಕ ಗಣಿಗಾರಿಕೆ ಅಧಿಕಾರಿ ಆಗಿ ಬಡ್ತಿ ನೀಡಿ ಸಂಬಲ್ಪುರದಲ್ಲಿ ನಿಯೋಜಿಸಲಾಗಿತ್ತು. ಏಪ್ರಿಲ್ 2022 ರಿಂದ ಡಿಸೆಂಬರ್ 2025 ರವರೆಗೆ, ಅವರು ಫುಲ್ಬಾನಿಯಲ್ಲಿ ಗಣಿ ಅಧಿಕಾರಿಯಾಗಿ ಸೇವೆ ಸಲ್ಲಿಸಿದ್ದರು.
ದಾಳಿಯ ನಂತರ ಅವರ ಚರ ಮತ್ತು ಸ್ಥಿರ ಆಸ್ತಿಗಳ ಸಮಗ್ರ ಮೌಲ್ಯಮಾಪನ ನಡೆಯಲಿದೆ ಎಂದು ಭುವನೇಶ್ವರ ವಿಜಿಲೆನ್ಸ್ ವಿಭಾಗದ ಎಸ್ಪಿ ಸರೋಜ್ ಕುಮಾರ್ ಸಮಲ್ ತಿಳಿಸಿದ್ದಾರೆ.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
27-07-26 01:09 pm
HK News Staffer
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm