ಬ್ರೇಕಿಂಗ್ ನ್ಯೂಸ್
28-02-26 01:08 pm HK News Desk ದೇಶ - ವಿದೇಶ
ಚೆನ್ನೈ, ಫೆ.28: ನಟ ಮತ್ತು ಟಿವಿಕೆ ಪಕ್ಷದ ಮುಖ್ಯಸ್ಥ ವಿಜಯ್ ಪತ್ನಿ ಸಂಗೀತಾ ಅವರು ವಿಚ್ಛೇದನ ಕೋರಿ ಅರ್ಜಿ ಸಲ್ಲಿಸಿದ್ದಾರೆ. ಆ ಮೂಲಕ ನಟನ ಜೊತೆಗಿನ 27 ವರ್ಷಗಳ ದಾಂಪತ್ಯವನ್ನು ಕೊನೆಗೊಳಿಸಲು ನಿರ್ಧರಿಸಿದ್ದಾರೆ. ಇತ್ತೀಚೆಗೆ ವಿಜಯ್, ತ್ರಿಶಾ ಎಂಬ ನಟಿಯೊಂದಿಗೆ ಸಂಬಂಧ ಹೊಂದಿದ್ದಾರೆಂದು ಗಂಭೀರ ಆರೋಪ ಕೇಳಿಬಂದಿತ್ತು. ಇದರ ಬೆನ್ನಲ್ಲೇ ವಿಜಯ್- ಸಂಗೀತಾ ಸಂಬಂಧದಲ್ಲಿ ಬಿರುಕು ಕಾಣಿಸಿಕೊಂಡಿದೆ.
1999ರ ಆಗಸ್ಟ್ನಲ್ಲಿ ವಿವಾಹವಾಗಿದ್ದ ವಿಜಯ್ - ಸಂಗೀತಾ ದಂಪತಿಗೆ ಜೇಸನ್ ಸಂಜಯ್ ಮತ್ತು ದಿವ್ಯಾ ಶಶಾ ಎಂಬ ಇಬ್ಬರು ಮಕ್ಕಳಿದ್ದಾರೆ. ವಿಜಯ್ ಅವರು ನಟಿಯೊಂದಿಗಿನ ಸಂಬಂಧವನ್ನು ನಿಲ್ಲಿಸುತ್ತೇನೆ ಅಂತ ಭರವಸೆ ಕೊಟ್ಟಿದ್ದರು. ಆದರೆ, ಅದು ಹಾಗೆಯೇ ಮುಂದುವರಿದಿದೆ ಎಂದು ಅರ್ಜಿಯಲ್ಲಿ ಸಂಗೀತಾ ಆಕ್ಷೇಪಿಸಿದ್ದಾರೆ.
ಪತಿ ನನ್ನನ್ನು ಸಾಮಾಜಿಕ ಮತ್ತು ವೃತ್ತಿಪರ ಜೀವನದಿಂದ ದೂರ ಇಟ್ಟಿದ್ದಾರೆ. ವಿದೇಶ ಪ್ರವಾಸ ಮಾಡುವುದು ಮತ್ತು ಆ ನಟಿಯೊಂದಿಗೆ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದನ್ನು ಮುಂದುವರಿಸಿದ್ದಾರೆ. ಈ ಪ್ರವಾಸದ ಫೋಟೊಗಳನ್ನು ನಟಿ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡುತ್ತಿದ್ದಾರೆ. ಇದರಿಂದ ನನಗೆ ಮತ್ತು ಮಕ್ಕಳಿಗೆ ಅವಮಾನವಾಗಿದೆ ಎಂದು ವಿಜಯ್ ಪತ್ನಿ ಆರೋಪಿಸಿದ್ದಾರೆ.

ಲಂಡನ್ ಮೂಲದ ತಮಿಳುನಾಡು ಮೂಲದ ಉದ್ಯಮಿಯ ಪುತ್ರಿಯಾಗಿರುವ ಸಂಗೀತಾ ಅವರನ್ನು 1999ರ ಆಗಸ್ಟ್ 25ರಂದು ವಿಜಯ್ ವಿವಾಹವಾಗಿದ್ದರು. ಇದಕ್ಕೂ ಮೊದಲು ಸಂಗೀತಾ, ವಿಜಯ್ ಅವರ ಕಟ್ಟಾ ಅಭಿಯಾನಿಯಾಗಿದ್ದರು. ವಿಜಯ್ ಸಿನಿಮಾಗಳಿಂದ ಪ್ರಭಾವಿತರಾಗಿ ಬೆನ್ನು ಬಿದ್ದು ಬಳಿಕ ಮದುವೆಯಾಗಿದ್ದರು. ಸಂಗೀತಾ ಹಿಂದುವಾಗಿದ್ದು ವಿಜಯ್ ಕ್ರಿಸ್ತಿಯನ್ ಸಂಪ್ರದಾಯದವರಾಗಿದ್ದು ಇಬ್ಬರ ವಿವಾಹವು ಹಿಂದೂ ಮತ್ತು ಕ್ರಿಶ್ಚಿಯನ್ ಸಂಪ್ರದಾಯದಂತೆ ನಡೆದಿತ್ತು. ಮದುವೆ ಬಳಿಕ ಸಂಗೀತಾ ಚೆನ್ನೈನಲ್ಲಿಯೇ ನೆಲೆಸಿದ್ದರು.
ಹಲವು ಸಮಯದ ವಿರಸದ ಬಳಿಕ ಸಂಗೀತಾ ಕಳೆದ ಡಿ.5ರಂದು ಚೆನ್ನೈನ ಕೌಟುಂಬಿಕ ನ್ಯಾಯಾಲಯದಲ್ಲಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದು ತಡವಾಗಿ ಸುದ್ದಿಯಾಗಿದೆ. ಆದರೆ ಈ ಬಗ್ಗೆ ವಿಜಯ್ ಯಾವುದೇ ಪ್ರತಿಕ್ರಿಯೆ ಕೊಟ್ಟಿಲ್ಲ. ಇದೇ ವೇಳೆ, ಜ್ಯೋತಿಷಿ ಪ್ರಶಾಂತ್ ಕಿಣಿಯವರು ಈಗಲ್ಲದಿದ್ದರೂ ಮುಂದಿನ ಬಾರಿಯಾದರೂ ವಿಜಯ್ ಅವರು ತಮಿಳುನಾಡು ಮುಖ್ಯಮಂತ್ರಿ ಆಗಲಿದ್ದಾರೆ. 2030ರ ಬಳಿಕ ದೊಡ್ಡ ಸಕ್ಸಸ್ ಸಿಗಲಿದೆ ಎಂದಿದ್ದಾರೆ. ಆದರೆ ಚುನಾವಣೆ ಹೊತ್ತಲ್ಲೇ ವಿಚ್ಚೇದನ ಸುದ್ದಿಯಾಗಿದ್ದು ಯಾವ ರೀತಿಯ ಪರಿಣಾಮ ಬೀರುತ್ತೆ ನೋಡಬೇಕು.
29-05-26 10:41 pm
HK News Staffer
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಿದ್ದರಾ...
28-05-26 06:18 pm
CM Siddaramaiah, Supporters crying, Kaveri: ಸ...
28-05-26 05:31 pm
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am