ಬ್ರೇಕಿಂಗ್ ನ್ಯೂಸ್
28-02-26 07:17 pm HK News Staffer ದೇಶ - ವಿದೇಶ
ನವದೆಹಲಿ, ಫೆ.28: ಇರಾನ್ -ಅಮೆರಿಕ ಸಂಘರ್ಷ ಹಿನ್ನೆಲೆಯಲ್ಲಿ ಗಲ್ಫ್ ರಾಷ್ಟ್ರಗಳಿಗೆ ಯುರೋಪ್, ಏಷ್ಯಾದಿಂದ ತೆರಳುವ ಬಹುತೇಕ ವಿಮಾನಗಳನ್ನು ರದ್ದುಪಡಿಸಲಾಗಿದೆ. ಗಲ್ಫ್ ರಾಷ್ಟ್ರಗಳ ಮೂಲಕ ಯುರೋಪ್ ಕಡೆಗೆ ತೆರಳುತ್ತಿದ್ದ ವಿಮಾನಗಳನ್ನು ಬೇರೆ ದಾರಿ ಮೂಲಕ ತೆರಳಲು ಸೂಚಿಸಲಾಗಿದೆ.
ಭಾರತದ ಏರ್ ಇಂಡಿಯಾವು ಗಲ್ಫ್ ರಾಷ್ಟ್ರಗಳಿಗೆ ತೆರಳುವ ಎಲ್ಲ ವಿಮಾನಗಳನ್ನು ರದ್ದುಪಡಿಸಿದೆ. ಶನಿವಾರ ದೆಹಲಿಯಿಂದ ಇಸ್ರೇಲಿನ ಟೆಲ್ ಅವೀವ್ ತೆರಳಿದ್ದ ವಿಮಾನ ಅರ್ಧ ದಾರಿಯಿಂದಲೇ ಭಾರತಕ್ಕೆ ಮರಳಿದ್ದು ಮುಂಬೈನಲ್ಲಿ ಲ್ಯಾಂಡ್ ಆಗಿದೆ. ಮುಂದಿನ ಸಂಚಾರದ ಬಗ್ಗೆ ದಿನಾಂಕವನ್ನು ತಿಳಿಸಲಾಗುವುದು ಎಂದು ಏರ್ ಇಂಡಿಯಾ ಹೇಳಿದೆ. ಇಂಡಿಗೋ ಕಂಪನಿಯು ಪರಿಸ್ಥಿತಿಯನ್ನು ಗಮನಿಸುತ್ತಿದ್ದು, ಪ್ರಯಾಣಿಕರು ವಿಮಾನ ಸಂಚಾರದ ಸ್ಟೇಟಸ್ ಬಗ್ಗೆ ನಿಗಾ ಇರಿಸುವಂತೆ ಸೂಚಿಸಿದೆ. ಲುಫ್ತಾನ್ಸಾ ಕಂಪನಿ ಬೀರತ್ ಮತ್ತು ಒಮಾನ್ ತೆರಳುವ ವಿಮಾನವನ್ನು ರದ್ದುಮಾಡಿದೆ.
ಕೆಲವು ವಿಮಾನ ಕಂಪನಿಗಳು ವಾರ ಕಾಲಕ್ಕೆ ತಮ್ಮ ಸಂಚಾರ ರದ್ದುಪಡಿಸಿದ್ದರೆ, ಕೆಲವು ಕಂಪನಿಗಳು ಪರಿಸ್ಥಿತಿ ನೋಡಿಕೊಂಡು ವಿಮಾನ ಸಂಚಾರದ ಬಗ್ಗೆ ತಿಳಿಸಲಾಗುವುದು ಎಂದಿವೆ. ದುಬೈ ಎಮಿರೇಟ್ಸ್ ದುಬೈ ಏರ್ಪೋರ್ಟ್ ನಿಂದ ತನ್ನ ಸಂಚಾರವನ್ನು ತಾತ್ಕಾಲಿಕವಾಗಿ ನಿಲ್ಲಿಸಿದೆ. ಪಾಕಿಸ್ತಾನದ ಪಿಐಎ ಗಲ್ಫ್ ರಾಷ್ಟ್ರಗಳಿಗೆ ವಿಮಾನ ಸಂಚಾರವನ್ನು ಬಂದ್ ಮಾಡಿದೆ. ರಷ್ಯನ್ ಏರ್ ಲೈನ್ಸ್ ಇರಾನ್ ಮತ್ತು ಇಸ್ರೇಲ್ ಮೂಲಕ ತೆರಳುವ ವಿಮಾನಗಳನ್ನು ರದ್ದುಪಡಿಸಿದೆ. ಗಲ್ಫ್ ರಾಷ್ಟ್ರಗಳಿಗೆ ಪರ್ಯಾಯ ದಾರಿ ಮೂಲಕ ಸಂಚಾರಕ್ಕೆ ಯತ್ನಿಸುವುದಾಗಿ ರಷ್ಯಾ ಹೇಳಿಕೊಂಡಿದೆ.

ಟರ್ಕಿಶ್ ಏರ್ಲೈನ್ಸ್ ಲೆಬನಾನ್, ಸಿರಿಯಾ, ಇರಾಕ್, ಇರಾನ್ ಮತ್ತು ಜೋರ್ಡಾನ್ ತೆರಳುವ ವಿಮಾನಗಳನ್ನು ಮಾರ್ಚ್ 2ರ ವರೆಗೆ ನಿರ್ಬಂಧಿಸಿದೆ. ಬಲ್ಗೇರಿಯಾ ಏರ್ಲೈನ್ಸ್ ಕೂಡ ಮಧ್ಯ ಪ್ರಾಚ್ಯಕ್ಕೆ ಸಂಚಾರ ರದ್ದುಪಡಿಸಿದೆ. ಜಪಾನ್ ಏರ್ಲೈನ್ಸ್ ಟೋಕ್ಯೋ- ದೋಹಾ ನಡುವಿನ ಸಂಚಾರವನ್ನು ರದ್ದುಪಡಿಸಿದೆ. ಸ್ವಿಸ್ ಇಂಟರ್ನ್ಯಾಶನಲ್ ಏರ್ಲೈನ್ಸ್ ಕಡೆಯಿಂದ ಮಾರ್ಚ್ 7ರ ವರೆಗೆ ವಿಮಾನ ಸಂಚಾರ ರದ್ದುಪಡಿಸಿದೆ.
ಏರ್ಪೋರ್ಟ್ ಗಳಲ್ಲಿ ಸಿಕ್ಕಿಬಿದ್ದ ಪ್ರಯಾಣಿಕರು:
ಇದೇ ವೇಳೆ, ಯುಎಇ, ಬೆಹ್ರೈನ್, ಟರ್ಕಿ, ಒಮಾನ್, ಸೌದಿ ಅರೇಬಿಯಾ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿ ಸಾವಿರಾರು ಪ್ರಯಾಣಿಕರು ಏರ್ಪೋರ್ಟ್ ನಲ್ಲಿ ಸೇರಿದ್ದು, ವಿಮಾನಗಳ ರದ್ದತಿಯಿಂದಾಗಿ ಸಂಕಷ್ಟಕ್ಕೀಡಾಗಿದ್ದಾರೆ. ಗಲ್ಫ್ ದೇಶಗಳು ತಮ್ಮ ವಾಯು ಪ್ರದೇಶವನ್ನು ನಿಷೇಧಿಸಿರುವುದರಿಂದ ಬೇರೆ ಬೇರೆ ದೇಶಗಳ ಜನರು ತಮ್ಮ ನಿಗದಿತ ಪ್ರಯಾಣದಿಂದ ವಂಚಿತರಾಗಿದ್ದಾರೆ. ಅಂದಾಜು ಪ್ರಕಾರ, 346 ವಿಮಾನಗಳ ಸಂಚಾರವನ್ನು ರದ್ದುಪಡಿಸಿದ್ದರೆ, 525 ವಿಮಾನಗಳ ಸಂಚಾರವನ್ನು ವಿಳಂಬಿಸಲಾಗಿದೆ.

ಕೇರಳದ ಏರ್ಪೋರ್ಟ್ ಗಳಲ್ಲಿ ಎಫೆಕ್ಟ್:
ಕರ್ನಾಟಕದ ಮಂಗಳೂರು, ಕೇರಳದ ಕಣ್ಣೂರು, ಕ್ಯಾಲಿಕಟ್, ತಿರುವನಂತಪುರಂ, ಕೊಚ್ಚಿನ್ ಏರ್ಪೋರ್ಟ್ ನಿಂದ ಗಲ್ಫ್ ರಾಷ್ಟ್ರಗಳಿಗೆ ಹೋಗಿ ಬರುವ ವಿಮಾನಗಳು ಅತಿ ಹೆಚ್ಚು ಇರುವುದರಿಂದ ಆಯಾ ವಿಮಾನ ನಿಲ್ದಾಣಗಳಿಂದ ವಿಮಾನ ರದ್ದತಿ ಬಗ್ಗೆ ಸೂಚನೆಗಳನ್ನು ನೀಡಲಾಗಿದೆ. ಇದರಿಂದಾಗಿ ಸಾವಿರಾರು ಪ್ರಯಾಣಿಕರು ಸಂಕಷ್ಟಕ್ಕೆ ಒಳಗಾಗಿದ್ದಾರೆ. ವಿದೇಶದಿಂದ ಬರುವ ಮತ್ತು ಇಲ್ಲಿಂದ ತೆರಳುವ ವಿಮಾನಗಳ ಸಂಚಾರ ವ್ಯತ್ಯಯವಾಗಿದ್ದು, ತಮ್ಮ ಸಂಚಾರ ಸಾಧ್ಯವಾಗದೆ ಪ್ರಯಾಣಿಕರು ಗೊಂದಲಕ್ಕೆ ಈಡಾಗಿದ್ದಾರೆ.
29-05-26 10:41 pm
HK News Staffer
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಿದ್ದರಾ...
28-05-26 06:18 pm
CM Siddaramaiah, Supporters crying, Kaveri: ಸ...
28-05-26 05:31 pm
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am