ಬ್ರೇಕಿಂಗ್ ನ್ಯೂಸ್
28-02-26 10:54 pm HK News Desk ದೇಶ - ವಿದೇಶ
ನವದೆಹಲಿ, ಫೆ.28: ಇರಾನ್ – ಇಸ್ರೇಲ್ – ಅಮೆರಿಕ ಸಂಘರ್ಷ ಹಿನ್ನೆಲೆಯಲ್ಲಿ ದುಬೈನತ್ತಲೂ ಮಿಸೈಲ್ ದಾಳಿ ಆಗುತ್ತಿರುವುದರಿಂದ ಜಗತ್ತಿನ ಅತಿ ಎತ್ತರದ ಕಟ್ಟಡ ಬುರ್ಜ್ ಖಲೀಫಾದಲ್ಲಿ ಎಲ್ಲ ಜನರು ತೆರವಾಗುವಂತೆ ಸೂಚಿಸಲಾಗಿದೆ.
ಇರಾನ್ ಪಡೆಗಳು ಅಲ್ ದಫ್ರಾದಲ್ಲಿರುವ ಅಮೆರಿಕದ ಮಿಲಿಟರಿ ಬೇಸನ್ನು ಗುರಿಯಾಗಿಸಿ ದಾಳಿ ನಡೆಸುತ್ತಿದ್ದು, ಅಬುಧಾಬಿ ಮತ್ತು ದುಬೈನಲ್ಲೂ ಸ್ಫೋಟದ ಘಟನೆಗಳು ನಡೆದಿವೆ. ದುಬೈನ ಬುರ್ಜ್ ಖಲೀಫಾ ಕಟ್ಟಡದ ಬಳಿಯಲ್ಲೂ ಸ್ಫೋಟದ ಸದ್ದು ಕೇಳಿದ್ದು ಜನರು ಆತಂಕಗೊಂಡಿದ್ದಾರೆ. ದುಬೈನಲ್ಲಿ ಕೇರಳ, ಕರ್ನಾಟಕದ ಅತಿ ಹೆಚ್ಚು ಜನರಿದ್ದಾರೆ. ಯುಎಇ ರಾಜಧಾನಿ ಅಬುಧಾಬಿಯಲ್ಲಿ ಸ್ಫೋಟದ ಸದ್ದು ಕೇಳಿದ್ದು ಹೊಗೆ ಎದ್ದಿರುವ ದೃಶ್ಯವನ್ನು ಸಿಎನ್ಎನ್ ಟಿವಿ ವರದಿ ಮಾಡಿದೆ.
ಅಬುಧಾಬಿಯ ವಸತಿ ಪ್ರದೇಶಕ್ಕೂ ಇರಾನ್ ಕ್ಷಿಪಣಿ ದಾಳಿಯಾಗಿದ್ದರಿಂದ ಅಲ್ಲಿನ ಪ್ರಜೆಯೊಬ್ಬರು ಸಾವನ್ನಪ್ಪಿದ್ದಾರೆ. ಇದರ ನಂತರ, ದುಬೈನಲ್ಲಿ ವಿಮಾನ ಸಂಚಾರ ರದ್ದುಪಡಿಸಿದ್ದು ಏರ್ ಡಿಫೆನ್ಸ್ ಸಿಸ್ಟಮ್ ಸಿದ್ಧವಾಗಿಸಲಾಗಿದೆ. ಇರಾನ್ ದಾಳಿಯನ್ನು ಯುಎಇ ಸಚಿವಾಲಯ, ಹೇಡಿತನದ್ದು ಮತ್ತು ಅಪಾಯಕಾರಿ ನಡೆ ಎಂದು ಹೇಳಿದೆ. ದುಬೈ ಬಳಿಯ ಪ್ರಸಿದ್ಧ ಪ್ರವಾಸಿ ತಾಣ ಪಾಮ್ ಐಲ್ಯಾಂಡ್ ಬಳಿಯೂ ಬೆಂಕಿ ಮತ್ತು ಹೊಗೆ ಎದ್ದಿದ್ದು ಕ್ಷಿಪಣಿ ದಾಳಿಯಾದ ಬಗ್ಗೆ ಹೇಳಲಾಗುತ್ತಿದೆ.
ಅಮೆರಿಕ ಮತ್ತು ಇಸ್ರೇಲಿ ಪಡೆಗಳ ದಾಳಿಯು ಇರಾನ್ ನಾಯಕ ಅಲಿ ಖಮೇನಿ ಮತ್ತು ಅಧ್ಯಕ್ಷ ಮಸೂದ್ ಪಜೆಶ್ಕಿಯಾನ್ ಅವರನ್ನು ಗುರಿಯಾಗಿಸಿದ್ದು ಇರಾನ್ ದೇಶದ ಉತ್ತರ ದಕ್ಷಿಣವೆಂದು ಎಲ್ಲ ಕಡೆಯೂ ದಾಳಿಯಾಗಿದೆ. ಬಾಲಕಿಯರ ಶಾಲೆಗೂ ಬಾಂಬ್ ದಾಳಿಯಾಗಿದ್ದು, ಅಲ್ಲಿ 57 ಮಂದಿ ಸಾವನ್ನಪ್ಪಿದ್ದಾರೆಂದು ಹೇಳಲಾಗಿದೆ. ಒಟ್ಟು 85 ಮಂದಿ ಇರಾನ್ ಕಡೆಯಲ್ಲಿ ಸಾವು ಸಂಭವಿಸಿದೆ ಎನ್ನಲಾಗುತ್ತಿದೆ. ಶನಿವಾರದ ಇಸ್ರೇಲ್ ದಾಳಿಯಿಂದ ಅಲಿ ಖಮೇನಿ ಸಾವಾಗಿದೆ ಎಂದು ಹೇಳಲಾಗುತ್ತಿದ್ದರೂ ಇರಾನ್ ಇದನ್ನು ದೃಢಪಡಿಸಿಲ್ಲ. ಇರಾನ್ ವಿದೇಶ ಮಂತ್ರಿ ಅಬ್ಬಾಸ್ ಅರಾಗ್ಚಿ, ಖಮೇನಿ ಇನ್ನೂ ಜೀವಂತ ಇದ್ದಾರೆ ಎಂದಿದ್ದಾರೆ. ಇರಾನ್ ಮೇಲಿನ ದಾಳಿಯನ್ನು ರಷ್ಯಾ ಮತ್ತು ಚೀನಾ ಖಂಡಿಸಿವೆ.
29-05-26 10:41 pm
HK News Staffer
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಿದ್ದರಾ...
28-05-26 06:18 pm
CM Siddaramaiah, Supporters crying, Kaveri: ಸ...
28-05-26 05:31 pm
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am