ಬ್ರೇಕಿಂಗ್ ನ್ಯೂಸ್
01-03-26 09:52 am HK News Staffer ದೇಶ - ವಿದೇಶ
ಟೆಹ್ರಾನ್, ಮಾ.1: ಅಮೆರಿಕ- ಇಸ್ರೇಲ್ ಏರ್ ಸ್ಟ್ರೈಕ್ ನಲ್ಲಿ ಇರಾನ್ ಪರಮೋಚ್ಚ ನಾಯಕ ಅಯತೊಲ್ಲಾ ಅಲ್ ಖಮೇನಿ ಅವರು ಹತ್ಯೆಗೀಡಾಗಿದ್ದಾರೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಖಮೇನಿ ಹತ್ಯೆ ಮಾಡಿದ್ದಾಗಿ ತಮ್ಮ ಸೋಶಿಯಲ್ ಮೀಡಿಯಾ ಪೋಸ್ಟ್ ನಲ್ಲಿ ತಿಳಿಸಿದ್ದಾರೆ.
ಅಯತೊಲ್ಲಾ ಖಮೇನಿ ಜೊತೆಗೆ ಅವರ ಪುತ್ರಿ, ಮೊಮ್ಮಗು, ಅಳಿಯ, ಸೊಸೆಯೂ ಹತ್ಯೆಗೀಡಾಗಿದ್ದಾರೆ. ಖಮೇನಿ ಅವರು ಆಡಳಿತವನ್ನು ಪ್ರಧಾನಿಗೆ ಒಪ್ಪಿಸಿ ಒಂದು ವಾರದಿಂದ ಅಡಗು ತಾಣಕ್ಕೆ ತೆರಳಿದ್ದರು. ಆದರೆ ಇಸ್ರೇಲಿನ ಗುಪ್ತಚರ ಪಡೆ ಮೊಸಾದ್, ಖಮೇನಿ ಅಡಗಿದ್ದ ಸ್ಥಳವನ್ನು ಪತ್ತೆಹಚ್ಚಿ ಗುರಿಯಿಟ್ಟು ಬಾಂಬ್ ಹಾಕಿ ಇಡೀ ಕುಟುಂಬವನ್ನು ಹತ್ಯೆ ಮಾಡಿದೆ. ಖಮೇನಿ ಶನಿವಾರ ಬೆಳಗ್ಗೆ ಇಸ್ರೇಲ್ ನಡೆಸಿದ ದಾಳಿಯಲ್ಲಿ ಹತ್ಯೆಗೀಡಾಗಿದ್ದಾರೆ ಎಂದು ಇರಾನ್ ಮಾಧ್ಯಮ ಐಆರ್ ಎನ್ ನ್ಯೂಸ್ ವರದಿ ಮಾಡಿದೆ.
ಖಮೇನಿ ಗೌರವಾರ್ಥ ಇರಾನ್ ದೇಶದಲ್ಲಿ 40 ದಿನಗಳ ಶೋಕಾಚರಣೆ ಘೋಷಿಸಲಾಗಿದೆ. ಅಲ್ಲದೆ, ಏಳು ದಿನಗಳ ರಾಷ್ಟ್ರ ವ್ಯಾಪಿ ಸರ್ಕಾರಿ ರಜಾ ದಿನ ಘೋಷಣೆ ಮಾಡಲಾಗಿದೆ. ಖಮೇನಿ ಹತ್ಯೆಯ ಬಗ್ಗೆ ವಿಶ್ವಸಂಸ್ಥೆ ಯಾವುದೇ ರೀತಿಯ ಹೇಳಿಕೆ ಬಿಡುಗಡೆ ಮಾಡಿಲ್ಲ. 86 ವರ್ಷದ ಖಮೇನಿ ಇರಾನ್ ದೇಶವನ್ನು 1989ರಿಂದ ಆಡಳಿತದಲ್ಲಿದ್ದರು. ರೆವೊಲ್ಯುಶನರಿ ಗಾರ್ಡ್ ಎನ್ನುವ ಪ್ರಭಾವಿ ಪಡೆಯನ್ನು ಕಟ್ಟಿದ್ದರು. ಅಮೆರಿಕದ ಬೆದರಿಕೆ ನಡುವೆಯೂ ಅಣು ಬಾಂಬ್ ತಯಾರಿಸುತ್ತಿದ್ದಾರೆ ಎನ್ನುವುದು ಖಮೇನಿ ಮೇಲಿನ ಆರೋಪವಾಗಿತ್ತು. ಅಣು ಶಸ್ತ್ರ ಹೊಂದಬಾರದು ಎಂಬ ನಿರಂತರ ಬೆದರಿಕೆ ಬಳಿಕ ಇಸ್ರೇಲ್- ಅಮೆರಿಕ ಜಂಟಿಯಾಗಿ ಇರಾನ್ ಮೇಲೆ ಮುಗಿಬಿದ್ದು ಹತ್ಯೆ ಮಾಡಿದೆ.
ತನ್ನ ಮೇಲಿನ ದಾಳಿಗೆದುರಾಗಿ ಇರಾನ್ ಪಡೆಗಳು ಅಮೆರಿಕದ ಮಿಲಿಟರಿ ಬೇಸ್ ಇರುವ ಯುಎಇ, ಕತಾರ್, ಬೆಹ್ರೈನ್ ಮೇಲೆ ದಾಳಿ ನಡೆಸಿತ್ತು.

ಜಾಗತಿಕ ಭಯೋತ್ಪಾದನೆಯ ಸೂತ್ರಧಾರನ ಸಾವು :
ಜಾಗತಿಕ ಭಯೋತ್ಪಾದನೆಯ ಅತಿದೊಡ್ಡ ಪ್ರತಿಪಾದಕ, ಸೂತ್ರಧಾರ ಕಡೆಗೂ ಸಾವನ್ನಪ್ಪಿದ್ದಾನೆ ಎಂದು ಅಮೆರಿಕ ಹೇಳಿಕೆ ಬಿಡುಗಡೆ ಮಾಡಿದೆ. ಎಕ್ಸ್ ನಲ್ಲಿ ಹೌಸ್ ಆಫ್ ರೆಪ್ರೆಸೆಂಟೇಟಿವ್ಸ್ ಕಡೆಯಿಂದ ಹೇಳಿಕೆ ನೀಡಲಾಗಿದ್ದು ದಶಕಗಳ ಕಾಲದಿಂದ ನಡೆಸುತ್ತಿದ್ದ ಭಯೋತ್ಪಾದನಾ ಯುಗದ ಅಂತ್ಯವಾಗಿದೆ. ಅಲಿ ಖಮೇನಿ ಹತ್ಯೆಯಿಂದ ಜಗತ್ತು ಸುರಕ್ಷತೆಯತ್ತ ಮರಳಿದೆ ಎಂದು ಹೇಳಿದೆ.
29-05-26 10:41 pm
HK News Staffer
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಿದ್ದರಾ...
28-05-26 06:18 pm
CM Siddaramaiah, Supporters crying, Kaveri: ಸ...
28-05-26 05:31 pm
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am