ಬ್ರೇಕಿಂಗ್ ನ್ಯೂಸ್
02-03-26 02:26 pm HK News Staffer ದೇಶ - ವಿದೇಶ
ನವದೆಹಲಿ, ಮಾರ್ಚ್ 2: ಇರಾನ್ ಮೇಲಿನ ಅಮೆರಿಕ ದಾಳಿಯ ಹಿನ್ನೆಲೆಯಲ್ಲಿ ಭಾರತದಲ್ಲಿ ಉಂಟಾಗಿರುವ ಕ್ಷೋಭೆಯ ವಾತಾವರಣ, ಪ್ರತಿಭಟನೆ ಹಿನ್ನೆಲೆಯಲ್ಲಿ ಹಿಂಸಾಚಾರ ಸಾಧ್ಯತೆಗಳಿದ್ದು ಇದರ ಬಗ್ಗೆ ತುರ್ತು ಕ್ರಮ ತೆಗೆದುಕೊಳ್ಳಬೇಕು ಎಂದು ಕೇಂದ್ರ ಗೃಹ ಇಲಾಖೆಯಿಂದ ಎಲ್ಲಾ ರಾಜ್ಯ ಸರ್ಕಾರಗಳಿಗೆ ಎಚ್ಚರಿಕೆ ರವಾನಿಸಲಾಗಿದೆ.
ಕರ್ನಾಟಕ, ಜಮ್ಮು ಮತ್ತು ಕಾಶೀರ, ಉತ್ತರ ಪ್ರದೇಶ ಸೇರಿದಂತೆ ದೇಶದ ಕೆಲವು ಕಡೆ ಇರಾನ್ ನಾಯಕ ಆಲಿ ಖಮೇನಿಯನ್ನು ಹತ್ಯೆ ಮಾಡಿದ ನಂತರ ಶಿಯಾ ಮುಸ್ಲಿಮರು ಭಾರೀ ಪ್ರತಿಭಟನೆ ನಡೆಸಿದ್ದಾರೆ. ಮುಂದಿನ ದಿನಗಳಲ್ಲಿ ಇದು ವ್ಯಾಪಕ ಹಿಂಸಾಚಾರಕ್ಕೆ ಎಡೆಮಾಡುವ ಸಾಧ್ಯತೆ ಇದ್ದು ಕೂಡಲೇ ಬಿಗಿಯಾದ ಕ್ರಮಗಳನ್ನು ತೆಗೆದುಕೊಳ್ಳುವಂತೆ ರಾಜ್ಯಗಳಿಗೆ ಬರೆದ ಪತ್ರದಲ್ಲಿ ಸೂಚಿಸಲಾಗಿದೆ.
ಗೃಹ ಇಲಾಖೆಯಿಂದ ಎಲ್ಲಾ ರಾಜ್ಯಗಳಿಗೆ ಸುತ್ತೋಲೆ ಕಳುಹಿಸಿದ್ದು, ಭದ್ರತಾ ಸಂಸ್ಥೆಗಳು ಜಾಗರೂಕರಾಗಿರಬೇಕು. ಮತ್ತು ಅಶಾಂತಿಯನ್ನು ಪ್ರಚೋದಿಸುವ ಪ್ರಚೋದನಕಾರಿ ಸಂದೇಶಗಳನ್ನು ನೀಡುವ ಇರಾನ್ ಪರವಾಗಿರುವ ಬೋಧಕರನ್ನು ಗುರುತಿಸುವಂತೆ ರಾಜ್ಯ ಪೊಲೀಸರಿಗೆ ಸೂಚಿಸಿದೆ. ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ಹೆಚ್ಚಿರುವ ಉದ್ವಿಗ್ನತೆ ಮತ್ತು ಪ್ರತೀಕಾರದ ದಾಳಿಗಳ ನಂತರ ಸಂಭಾವ್ಯ ಘಟನೆಗಳನ್ನು ತಪ್ಪಿಸಲು ಮುಂಜಾಗ್ರತಾ ಕ್ರಮಕ್ಕಾಗಿ ಈ ಸೂಚನೆ ನೀಡಲಾಗಿದೆ.
ವಿದೇಶಗಳ ಬೆಳವಣಿಗೆಗಳು, ಧಾರ್ಮಿಕ ಸಭೆಗಳಲ್ಲಿ ಉದ್ರೇಕಕಾರಿ ಭಾಷಣದಿಂದ ದೇಶೀಯವಾಗಿ ದುಷ್ಪರಿಣಾಮ ಬೀರಬಹುದು ಎಂದು ಎಚ್ಚರಿಸಲಾಗಿದೆ. ಅಶಾಂತಿ ಅಥವಾ ಕೋಮು ಉದ್ವಿಗ್ನತೆಯನ್ನು ಉಂಟುಮಾಡುವ ಪ್ರಚೋದನಕಾರಿ ಧರ್ಮೋಪದೇಶಗಳನ್ನು ನೀಡುವವರ ಬಗ್ಗೆ ನಿಗಾ ಇಡುವಂತೆ ಎಲ್ಲಾ ರಾಜ್ಯಗಳಿಗೆ ಸೂಚಿಸಿದೆ. ಕಾನೂನು ಮತ್ತು ಸುವ್ಯವಸ್ಥೆ ಪರಿಸ್ಥಿತಿ ಉಲ್ಲಂಘನೆಗೆ ಕಾರಣವಾಗುವುದನ್ನು ತಡೆಯಲು ತುರ್ತು ಕ್ರಮಗಳ ಅಗತ್ಯವನ್ನು ಪತ್ರದ ಮೂಲಕ ಕೇಂದ್ರ ಸರ್ಕಾರ ಹೇಳಿದೆ. ಪ್ರಧಾನಿ ಮೋದಿ ನೇತೃತ್ವದಲ್ಲಿ ಭಾನುವಾರ ರಾಷ್ಟ್ರೀಯ ಭದ್ರತೆ ವಿಚಾರದಲ್ಲಿ ಕ್ಯಾಬಿನೆಟ್ ಮೀಟಿಂಗ್ ನಡೆದಿತ್ತು. ಇದರ ಬೆನ್ನಲ್ಲೇ ಮುಂಜಾಗ್ರತಾ ಕ್ರಮಕ್ಕೆ ಸೂಚನೆ ನೀಡಲಾಗಿದೆ.
11-03-26 07:16 pm
HK News Staffer
ಪರಿಷತ್ ಚುನಾವಣೆಗೆ ಸಿಗದ ಟಿಕೆಟ್ ; ಬಿಜೆಪಿ ರಾಜ್ಯ ಶ...
11-03-26 06:14 pm
ಲಕ್ಕುಂಡಿಯಲ್ಲಿ ಸಿಕ್ಕ ನಿಧಿ 500 ರಿಂದ 600 ವರ್ಷ ಹಳ...
11-03-26 12:57 pm
ಶಿಕ್ಷಕರಿಗೆ ಬೀದಿ ನಾಯಿ ನಿಯಂತ್ರಣ ಜವಾಬ್ದಾರಿ ಕೊಟ್ಟ...
11-03-26 11:48 am
LPG ಸಿಲಿಂಡರ್ ಪೂರೈಕೆ ಸ್ಥಗಿತ ; ಬೆಂಗಳೂರಿನಲ್ಲಿ ಹಲ...
10-03-26 01:47 pm
10-03-26 09:46 pm
HK News Desk
ಹರ್ಮುಜ್ ಜಲಸಂಧಿಯಲ್ಲಿ ತೈಲ ಹಡಗು ಬಂಧಿ ; ಜಗತ್ತಿಗೆ...
10-03-26 04:30 pm
ಕಚ್ಚಾ ತೈಲ ದರ ಏರಿಕೆ ; ಪಾಕಿಸ್ತಾನದಲ್ಲಿ ಅಲ್ಲೋಲಕಲ್...
10-03-26 01:31 pm
ಇರಾನ್ ನೂತನ ಸರ್ವೋಚ್ಚ ನಾಯಕನಾಗಿ ಆಯತುಲ್ಲಾ ಮೊಜ್ತಬ...
09-03-26 01:44 pm
ಇರಾನ್ ಮೇಲೆ ಮತ್ತೊಂದು ಭಾರಿ ದಾಳಿಗೆ ಟ್ರಂಪ್ ಸಿದ್ಧ...
07-03-26 11:58 am
11-03-26 09:15 pm
Mangalore Correspondent
ಬಾಡಿಗೆ ಮನೆಯಲ್ಲಿ ಡ್ರಗ್ಸ್ ಮಾರಾಟ ; ಬಂಟ್ವಾಳದ ನೇರಳ...
11-03-26 07:22 pm
ಗ್ಯಾಸ್ ಬಿಕ್ಕಟ್ಟು ; ಕುಕ್ಕೆ ಸುಬ್ರಹ್ಮಣ್ಯಕ್ಕೆ ತಟ್...
11-03-26 06:26 pm
ಕುತ್ತಾರಿನಲ್ಲಿ ಹಿಟ್ ಆಂಡ್ ರನ್ ಪ್ರಕರಣ ; ಬೈಕ್ ಧಾ...
11-03-26 03:25 pm
ಕಂಬಳಕ್ಕೆ ಪ್ರದೇಶದ ಗಡಿ ಇಲ್ಲ ; ಕರಾವಳಿ ಸಂಸ್ಕೃತಿ ಬ...
11-03-26 11:54 am
11-03-26 10:58 am
HK News Staffer
ಕೇರಳ ಚುನಾವಣೆ ಹಿನ್ನೆಲೆ ; ರೈಲಿನಲ್ಲಿ ತಪಾಸಣೆ ಬಿಗಿ...
10-03-26 08:32 pm
ಉಪ್ಪಿನಂಗಡಿ ; ಖಾಸಗಿ ವ್ಯಕ್ತಿ ಮನೆಯಲ್ಲಿ ಅಕ್ರಮ ಶೇಖ...
10-03-26 07:01 pm
ಬಾಗಲಕೋಟೆಯಲ್ಲಿ ಹೋಳಿ ಆಚರಣೆ ವೇಳೆ ಕಿರಿಕ್ ; 19 ವರ...
10-03-26 01:49 pm
Vexon fraud Company, FIR: ಬ್ಲೇಡ್ ಕಂಪನಿ ವೆಕ್ಸನ...
28-02-26 11:12 am