ಬ್ರೇಕಿಂಗ್ ನ್ಯೂಸ್
02-03-26 03:10 pm HK News Staffer ದೇಶ - ವಿದೇಶ
ನವದೆಹಲಿ, ಮಾರ್ಚ್ 2: ಇರಾನ್ ನಾಯಕ ಅಯತೊಲ್ಲಾ ಅಲ್ ಖಮೇನಿ ಹತ್ಯೆ ಖಂಡಿಸಿ ಕಾಶ್ಮೀರದಲ್ಲಿ ಶಿಯಾ ಮುಸ್ಲಿಮರು ಭಾರೀ ಸಂಖ್ಯೆಯಲ್ಲಿ ಬೀದಿಗಿಳಿದು ಪ್ರತಿಭಟನೆ ನಡೆಸಿದ್ದಾರೆ. ಇದರ ಬೆನ್ನಲ್ಲೇ ಪೊಲೀಸರು ಬಂದೋಬಸ್ತ್ ಏರ್ಪಡಿಸಿದ್ದು ಪ್ರತಿಭಟನೆಗೆ ನಿರ್ಬಂಧ ವಿಧಿಸಿದ್ದಾರೆ. ಜಮ್ಮು ಕಾಶ್ಮೀರದಲ್ಲಿ 15 ಲಕ್ಷಕ್ಕೂ ಹೆಚ್ಚು ಶಿಯಾ ಮುಸ್ಲಿಮರಿದ್ದಾರೆ.
ಕಾಶ್ಮೀರದಲ್ಲಿ ಹಲವು ಕಡೆ ಪ್ರತಿಭಟನೆಗೆ ನಿರ್ಬಂಧ ಹೇಳಲಾಗಿದೆ. ಅಲ್ಲದೆ,ಭಾರೀ ಪ್ರತಿಭಟನೆಗೆ ಸಾಕ್ಷಿಯಾಗಿದ್ದ ಘಂಟಾ ಘರ್ ನಲ್ಲಿ ಪೊಲೀಸರು ರಸ್ತೆಗೆ ಅಲ್ಲಲ್ಲಿ ತಡೆಬೇಲಿ ಹಾಕಿದ್ದಾರೆ. ನಗರದಲ್ಲಿ ಪ್ರತಿಭಟನೆ ತಪ್ಪಿಸಲು ಪೊಲೀಸ್ ಮತ್ತು ಸಿಆರ್ ಪಿಎಫ್ ನಿಯೋಜಿಸಲಾಗಿದೆ. ಖಮೇನಿ ಹತ್ಯೆ ಬಳಿಕ ಕಾಶ್ಮೀರದ ಅನಂತನಾಗ್, ಬುದ್ಗಾಂವ್, ಸೈದಾ ಕಡಲ್, ಲಾಲ್ ಚೌಕ, ಬಂಡೀಪುರ್, ಪುಲ್ವಾಮಾದಲ್ಲಿ ಭಾರೀ ಪ್ರತಿಭಟನೆ ನಡೆದಿದ್ದವು.

ಪ್ರತಿಭಟನೆಗಿಳಿದ ಜನರು ತಮ್ಮ ಎದೆಗೆ ಚಾಟಿಯಿಂದ ಹೊಡೆಯುತ್ತ ಇಸ್ರೇಲ್- ಅಮೆರಿಕ ವಿರುದ್ಧ ಘೋಷಣೆ ಕೂಗಿದ್ದಾರೆ. ಇದೀಗ ಶಿಯಾ ಪ್ರಾಬಲ್ಯ ಇರುವಲ್ಲಿ ಪೊಲೀಸರು ಬ್ಯಾರಿಕೇಡ್ ಹಾಕಿ ಸಂಚಾರಕ್ಕೆ ನಿರ್ಬಂಧ ವಿಧಿಸಿದ್ದಾರೆ. ಲಾಲ್ ಚೌಕ್ ನಗರವನ್ನು ಪೊಲೀಸರು ಸೀಜ್ ಮಾಡಿದ್ದಾರೆ. ಅಲ್ಲದೆ, ಕಾಶ್ಮೀರ ಕಣಿವೆಯಲ್ಲಿ ಮೊಬೈಲ್ ಇಂಟರ್ನೆಟ್ ವೇಗಕ್ಕೆ ನಿಯಂತ್ರಣ ಹೇರಲಾಗಿದ್ದು ವೈರಲ್ ವಿಡಿಯೋಗಳಿಂದ ಜನರು ಉದ್ರೇಕಗೊಳ್ಳದಂತೆ ತಡೆಯುವ ಕೆಲಸ ಮಾಡಿದ್ದಾರೆ. ಶ್ರೀನಗರದಲ್ಲಿಯೂ ನಿರ್ಬಂಧ ಹೇರಲಾಗಿದೆ. ಇದೇ ವೇಳೆ, ಜಮ್ಮು ಕಾಶ್ಮೀರ ಸಿಎಂ ಒಮರ್ ಅಬ್ದುಲ್ಲಾ ಅವರು ಕಾಶ್ಮೀರಿ ಜನರಿಗೆ ತಮ್ಮ ಶೋಕಾಚರಣೆ ಮಾಡಿಕೊಳ್ಳಲು ಅವಕಾಶ ನೀಡಬೇಕೆಂದು ಹೇಳಿದ್ದಾರೆ.
ಮುತಾಹಿದ್ ಮಜ್ಲಿಸ್ ಉಲಮಾ ಸಂಘಟನೆ, ಮೆಹಬೂಬ ಮುಫ್ತಿ ಅವರ ಪಿಡಿಪಿ ಮುಷ್ಕರಕ್ಕೆ ಕರೆಕೊಟ್ಟ ಹಿನ್ನೆಲೆಯಲ್ಲಿ ಪೊಲೀಸರು ನಿರ್ಬಂಧಗಳನ್ನು ವಿಧಿಸಿದ್ದಾರೆ.
11-03-26 07:16 pm
HK News Staffer
ಪರಿಷತ್ ಚುನಾವಣೆಗೆ ಸಿಗದ ಟಿಕೆಟ್ ; ಬಿಜೆಪಿ ರಾಜ್ಯ ಶ...
11-03-26 06:14 pm
ಲಕ್ಕುಂಡಿಯಲ್ಲಿ ಸಿಕ್ಕ ನಿಧಿ 500 ರಿಂದ 600 ವರ್ಷ ಹಳ...
11-03-26 12:57 pm
ಶಿಕ್ಷಕರಿಗೆ ಬೀದಿ ನಾಯಿ ನಿಯಂತ್ರಣ ಜವಾಬ್ದಾರಿ ಕೊಟ್ಟ...
11-03-26 11:48 am
LPG ಸಿಲಿಂಡರ್ ಪೂರೈಕೆ ಸ್ಥಗಿತ ; ಬೆಂಗಳೂರಿನಲ್ಲಿ ಹಲ...
10-03-26 01:47 pm
10-03-26 09:46 pm
HK News Desk
ಹರ್ಮುಜ್ ಜಲಸಂಧಿಯಲ್ಲಿ ತೈಲ ಹಡಗು ಬಂಧಿ ; ಜಗತ್ತಿಗೆ...
10-03-26 04:30 pm
ಕಚ್ಚಾ ತೈಲ ದರ ಏರಿಕೆ ; ಪಾಕಿಸ್ತಾನದಲ್ಲಿ ಅಲ್ಲೋಲಕಲ್...
10-03-26 01:31 pm
ಇರಾನ್ ನೂತನ ಸರ್ವೋಚ್ಚ ನಾಯಕನಾಗಿ ಆಯತುಲ್ಲಾ ಮೊಜ್ತಬ...
09-03-26 01:44 pm
ಇರಾನ್ ಮೇಲೆ ಮತ್ತೊಂದು ಭಾರಿ ದಾಳಿಗೆ ಟ್ರಂಪ್ ಸಿದ್ಧ...
07-03-26 11:58 am
11-03-26 09:15 pm
Mangalore Correspondent
ಬಾಡಿಗೆ ಮನೆಯಲ್ಲಿ ಡ್ರಗ್ಸ್ ಮಾರಾಟ ; ಬಂಟ್ವಾಳದ ನೇರಳ...
11-03-26 07:22 pm
ಗ್ಯಾಸ್ ಬಿಕ್ಕಟ್ಟು ; ಕುಕ್ಕೆ ಸುಬ್ರಹ್ಮಣ್ಯಕ್ಕೆ ತಟ್...
11-03-26 06:26 pm
ಕುತ್ತಾರಿನಲ್ಲಿ ಹಿಟ್ ಆಂಡ್ ರನ್ ಪ್ರಕರಣ ; ಬೈಕ್ ಧಾ...
11-03-26 03:25 pm
ಕಂಬಳಕ್ಕೆ ಪ್ರದೇಶದ ಗಡಿ ಇಲ್ಲ ; ಕರಾವಳಿ ಸಂಸ್ಕೃತಿ ಬ...
11-03-26 11:54 am
11-03-26 10:58 am
HK News Staffer
ಕೇರಳ ಚುನಾವಣೆ ಹಿನ್ನೆಲೆ ; ರೈಲಿನಲ್ಲಿ ತಪಾಸಣೆ ಬಿಗಿ...
10-03-26 08:32 pm
ಉಪ್ಪಿನಂಗಡಿ ; ಖಾಸಗಿ ವ್ಯಕ್ತಿ ಮನೆಯಲ್ಲಿ ಅಕ್ರಮ ಶೇಖ...
10-03-26 07:01 pm
ಬಾಗಲಕೋಟೆಯಲ್ಲಿ ಹೋಳಿ ಆಚರಣೆ ವೇಳೆ ಕಿರಿಕ್ ; 19 ವರ...
10-03-26 01:49 pm
Vexon fraud Company, FIR: ಬ್ಲೇಡ್ ಕಂಪನಿ ವೆಕ್ಸನ...
28-02-26 11:12 am