ಬ್ರೇಕಿಂಗ್ ನ್ಯೂಸ್
02-03-26 06:51 pm HK News Staffer ದೇಶ - ವಿದೇಶ
ನವದೆಹಲಿ, ಮಾರ್ಚ್ 2: ಇರಾನ್- ಇಸ್ರೇಲ್ ಸಂಘರ್ಷ ಜೋರಾಗಿದ್ದು ಎರಡು ಕಡೆಗಳಿಂದಲೂ ಪರಸ್ಪರ ಮಿಸೈಲ್ ದಾಳಿಯಾಗುತ್ತಿದೆ. ಈ ನಡುವೆ, ಇರಾನ್ ನಲ್ಲಿ ಹೊಸತಾಗಿ ಸುಪ್ರೀಂ ಲೀಡರ್ ಆಗಿ ನೇಮಿಸಲ್ಪಟ್ಟ ಅಲಿರೆಝಾ ಅರಾಫಿ ಅವರನ್ನೂ ಮಿಸೈಲ್ ದಾಳಿಯಿಂದ ಹತ್ಯೆ ಮಾಡಲಾಗಿದೆ ಎನ್ನುವ ಸುದ್ದಿ ಬಂದಿದೆ. ಈವರೆಗಿನ ದಾಳಿಯಲ್ಲಿ ಇರಾನಿನಲ್ಲಿ 500ಕ್ಕೂ ಹೆಚ್ಚು ಜನರು ಸಾವಿಗೀಡಾಗಿದ್ದಾರೆ.
ಹಂಗಾಮಿ ಸರ್ವೋಚ್ಛ ನಾಯಕನಾಗಿ ಅಧಿಕಾರ ಸ್ವೀಕರಿಸಿದ ಕೆಲವೇ ಗಂಟೆಗಳಲ್ಲಿ ಅವರನ್ನು ಹತ್ಯೆ ಮಾಡಲಾಗಿದೆ ಎನ್ನುವ ಸುದ್ದಿ ಹರಿದಾಡಿದೆ. ಆದರೆ ಈ ಸುದ್ದಿಯನ್ನು ಅಂತಾರಾಷ್ಟ್ರೀಯ ಮಟ್ಟದ ಮಾಧ್ಯಮಗಳು ದೃಢಪಡಿಸಿಲ್ಲ. ಇರಾನ್ ಅಥವಾ ಇಸ್ರೇಲ್ ಕಡೆಯಿಂದಲೂ ಈ ಸುದ್ದಿಯನ್ನು ಪುಷ್ಟೀಕರಿಸಿಲ್ಲ. ಆದರೆ ಅರಾಫಿ ಅವರನ್ನು ಹತ್ಯೆ ಮಾಡಲಾಗಿದೆ ಎಂಬ ಸುದ್ದಿ ಜೋರಾಗಿಯೇ ಸದ್ದು ಮಾಡಿದೆ.
ಮೊನ್ನೆ ಫೆ.28ರಂದು ಹಠಾತ್ತಾಗಿ ಇರಾನ್ ಮೇಲೆ ದಾಳಿ ನಡೆಸಿದ ಇಸ್ರೇಲ್ ಮಿಸೈಲ್ ಗಳು ಇರಾನ್ ಸರ್ವೋಚ್ಛ ನಾಯಕ ಅಯತೊಲ್ಲಾ ಅಲಿ ಖಮೇನಿಯವರನ್ನು ಹತ್ಯೆ ಮಾಡಿತ್ತು. ಆದರೆ ಹತ್ಯೆಯಾದ ಸುದ್ದಿ ಮೊದಲು ದೃಢಪಡಿಸಿರಲಿಲ್ಲ. ಇಸ್ರೇಲ್ ಗುಪ್ತಚರ ಪಡೆಗಳು ಖಚಿತಪಡಿಸಿದ ಬಳಿಕವೇ ಇರಾನ್ ಮಾಧ್ಯಮಗಳು ಕೂಡ ಖಮೇನಿ ಸಾವಾಗಿದ್ದನ್ನು ಹೇಳಿದ್ದವು. ಅಲಿ ಖಮೇನಿ ಹತ್ಯೆ ಬೆನ್ನಲ್ಲೇ ಹಿರಿಯ ಧರ್ಮಗುರು ಮತ್ತು ಖಮೇನಿ ಆಪ್ತರಾಗಿದ್ದ ಅಲಿರೆಝಾ ಅರಾಫಿ ಅವರನ್ನು ಪರಮೋಚ್ಛ ನಾಯಕರನ್ನಾಗಿ ನೇಮಿಸಲಾಗಿತ್ತು.
ಮುಂದಿನ ಸರ್ವೋಚ್ಛ ನಾಯಕನ ಆಯ್ಕೆ ಆಗುವ ವರೆಗೂ ಅರಾಫಿ ಅವರೇ ದೇಶವನ್ನು ಮುನ್ನಡೆಸಲಿದ್ದಾರೆ ಎನ್ನುವ ಸಂದೇಶ ಬಂದಿತ್ತು. ಅಲಿ ಖಮೇನಿ 1989ರಿಂದ ಇರಾನ್ ದೇಶದ ಸರ್ವೋಚ್ಛ ನಾಯಕರಾಗಿ ಅಧಿಕಾರದಲ್ಲಿದ್ದರು.
ಈ ವೇಳೆ, ಸರ್ವಾಧಿಕಾರಿ ಧೋರಣೆ ಹೊಂದಿದ್ದರು, ಹಲವರ ಹತ್ಯೆಗೆ ಕಾರಣವಾಗಿದ್ದರು ಎನ್ನುವ ಆರೋಪಗಳಿದ್ದವು. ಖಮೇನಿ ಅವರು ಅಧಿಕಾರ ತ್ಯಜಿಸಬೇಕೆಂದು ಅಲ್ಲಿನದ್ದೇ ಜನರು ಹಲವು ತಿಂಗಳುಗಳಿಂದ ಪ್ರತಿಭಟನೆಯನ್ನೂ ನಡೆಸಿದ್ದರು. ಇದೀಗ ಖಮೇನಿ ಅವರನ್ನು ಅಮೆರಿಕ- ಇಸ್ರೇಲ್ ಜಂಟಿ ದಾಳಿಯಲ್ಲಿ ಹತ್ಯೆ ಮಾಡಲಾಗಿದೆ.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 12:01 pm
HK News Staffer
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm