ಬ್ರೇಕಿಂಗ್ ನ್ಯೂಸ್
02-03-26 06:51 pm HK News Staffer ದೇಶ - ವಿದೇಶ
ನವದೆಹಲಿ, ಮಾರ್ಚ್ 2: ಇರಾನ್- ಇಸ್ರೇಲ್ ಸಂಘರ್ಷ ಜೋರಾಗಿದ್ದು ಎರಡು ಕಡೆಗಳಿಂದಲೂ ಪರಸ್ಪರ ಮಿಸೈಲ್ ದಾಳಿಯಾಗುತ್ತಿದೆ. ಈ ನಡುವೆ, ಇರಾನ್ ನಲ್ಲಿ ಹೊಸತಾಗಿ ಸುಪ್ರೀಂ ಲೀಡರ್ ಆಗಿ ನೇಮಿಸಲ್ಪಟ್ಟ ಅಲಿರೆಝಾ ಅರಾಫಿ ಅವರನ್ನೂ ಮಿಸೈಲ್ ದಾಳಿಯಿಂದ ಹತ್ಯೆ ಮಾಡಲಾಗಿದೆ ಎನ್ನುವ ಸುದ್ದಿ ಬಂದಿದೆ. ಈವರೆಗಿನ ದಾಳಿಯಲ್ಲಿ ಇರಾನಿನಲ್ಲಿ 500ಕ್ಕೂ ಹೆಚ್ಚು ಜನರು ಸಾವಿಗೀಡಾಗಿದ್ದಾರೆ.
ಹಂಗಾಮಿ ಸರ್ವೋಚ್ಛ ನಾಯಕನಾಗಿ ಅಧಿಕಾರ ಸ್ವೀಕರಿಸಿದ ಕೆಲವೇ ಗಂಟೆಗಳಲ್ಲಿ ಅವರನ್ನು ಹತ್ಯೆ ಮಾಡಲಾಗಿದೆ ಎನ್ನುವ ಸುದ್ದಿ ಹರಿದಾಡಿದೆ. ಆದರೆ ಈ ಸುದ್ದಿಯನ್ನು ಅಂತಾರಾಷ್ಟ್ರೀಯ ಮಟ್ಟದ ಮಾಧ್ಯಮಗಳು ದೃಢಪಡಿಸಿಲ್ಲ. ಇರಾನ್ ಅಥವಾ ಇಸ್ರೇಲ್ ಕಡೆಯಿಂದಲೂ ಈ ಸುದ್ದಿಯನ್ನು ಪುಷ್ಟೀಕರಿಸಿಲ್ಲ. ಆದರೆ ಅರಾಫಿ ಅವರನ್ನು ಹತ್ಯೆ ಮಾಡಲಾಗಿದೆ ಎಂಬ ಸುದ್ದಿ ಜೋರಾಗಿಯೇ ಸದ್ದು ಮಾಡಿದೆ.
ಮೊನ್ನೆ ಫೆ.28ರಂದು ಹಠಾತ್ತಾಗಿ ಇರಾನ್ ಮೇಲೆ ದಾಳಿ ನಡೆಸಿದ ಇಸ್ರೇಲ್ ಮಿಸೈಲ್ ಗಳು ಇರಾನ್ ಸರ್ವೋಚ್ಛ ನಾಯಕ ಅಯತೊಲ್ಲಾ ಅಲಿ ಖಮೇನಿಯವರನ್ನು ಹತ್ಯೆ ಮಾಡಿತ್ತು. ಆದರೆ ಹತ್ಯೆಯಾದ ಸುದ್ದಿ ಮೊದಲು ದೃಢಪಡಿಸಿರಲಿಲ್ಲ. ಇಸ್ರೇಲ್ ಗುಪ್ತಚರ ಪಡೆಗಳು ಖಚಿತಪಡಿಸಿದ ಬಳಿಕವೇ ಇರಾನ್ ಮಾಧ್ಯಮಗಳು ಕೂಡ ಖಮೇನಿ ಸಾವಾಗಿದ್ದನ್ನು ಹೇಳಿದ್ದವು. ಅಲಿ ಖಮೇನಿ ಹತ್ಯೆ ಬೆನ್ನಲ್ಲೇ ಹಿರಿಯ ಧರ್ಮಗುರು ಮತ್ತು ಖಮೇನಿ ಆಪ್ತರಾಗಿದ್ದ ಅಲಿರೆಝಾ ಅರಾಫಿ ಅವರನ್ನು ಪರಮೋಚ್ಛ ನಾಯಕರನ್ನಾಗಿ ನೇಮಿಸಲಾಗಿತ್ತು.
ಮುಂದಿನ ಸರ್ವೋಚ್ಛ ನಾಯಕನ ಆಯ್ಕೆ ಆಗುವ ವರೆಗೂ ಅರಾಫಿ ಅವರೇ ದೇಶವನ್ನು ಮುನ್ನಡೆಸಲಿದ್ದಾರೆ ಎನ್ನುವ ಸಂದೇಶ ಬಂದಿತ್ತು. ಅಲಿ ಖಮೇನಿ 1989ರಿಂದ ಇರಾನ್ ದೇಶದ ಸರ್ವೋಚ್ಛ ನಾಯಕರಾಗಿ ಅಧಿಕಾರದಲ್ಲಿದ್ದರು.
ಈ ವೇಳೆ, ಸರ್ವಾಧಿಕಾರಿ ಧೋರಣೆ ಹೊಂದಿದ್ದರು, ಹಲವರ ಹತ್ಯೆಗೆ ಕಾರಣವಾಗಿದ್ದರು ಎನ್ನುವ ಆರೋಪಗಳಿದ್ದವು. ಖಮೇನಿ ಅವರು ಅಧಿಕಾರ ತ್ಯಜಿಸಬೇಕೆಂದು ಅಲ್ಲಿನದ್ದೇ ಜನರು ಹಲವು ತಿಂಗಳುಗಳಿಂದ ಪ್ರತಿಭಟನೆಯನ್ನೂ ನಡೆಸಿದ್ದರು. ಇದೀಗ ಖಮೇನಿ ಅವರನ್ನು ಅಮೆರಿಕ- ಇಸ್ರೇಲ್ ಜಂಟಿ ದಾಳಿಯಲ್ಲಿ ಹತ್ಯೆ ಮಾಡಲಾಗಿದೆ.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
27-07-26 01:09 pm
HK News Staffer
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm