ಬ್ರೇಕಿಂಗ್ ನ್ಯೂಸ್
02-03-26 09:23 pm HK News Staffer ದೇಶ - ವಿದೇಶ
ನವದೆಹಲಿ, ಮಾರ್ಚ್ 2: ಪಶ್ಚಿಮ ಏಷ್ಯಾದಲ್ಲಿ ಉಲ್ಬಣಗೊಂಡ ಯುದ್ಧ ಸ್ಥಿತಿಯ ಪರಿಣಾಮ ಅಂತಾರಾಷ್ಟ್ರೀಯ ಕಚ್ಚಾ ತೈಲ ಮಾರುಕಟ್ಟೆಯಲ್ಲಿ ಭಾರೀ ಸಂಚಲನ ಉಂಟಾಗಿದೆ. ಬ್ರೆಂಟ್ ಕಚ್ಚಾ ತೈಲದ ಬೆಲೆ ಬ್ಯಾರಲ್ಗೆ 80 ಡಾಲರ್ ದಾಟಿದ್ದು, ಹಲವು ತಿಂಗಳ ಬಳಿಕ ಗರಿಷ್ಠ ಮಟ್ಟ ತಲುಪಿದೆ.
ಭಾರತ ತನ್ನ ಅಗತ್ಯದ ಬಹುಪಾಲು ಕಚ್ಚಾ ತೈಲವನ್ನು ಆಮದು ಮಾಡಿಕೊಳ್ಳುತ್ತದೆ. ಇರಾನ್ ಹಾಗೂ ಕೊಲ್ಲಿ ರಾಷ್ಟ್ರಗಳು ಪ್ರಮುಖ ಪೂರೈಕೆದಾರರು. ದೇಶದ ಒಟ್ಟಾರೆ ಆಮದುಗಳಲ್ಲಿ ತೈಲ ಮತ್ತು ಚಿನ್ನದ ಪಾಲು ಹೆಚ್ಚಿರುವುದರಿಂದ ಕರೆಂಟ್ ಅಕೌಂಟ್ ಡೆಫಿಸಿಟ್ ಈಗಾಗಲೇ ಉನ್ನತ ಮಟ್ಟದಲ್ಲಿದೆ. ಕಚ್ಚಾ ತೈಲದ ಬೆಲೆ ಏರಿಕೆಯಿಂದ ಆಮದು ವೆಚ್ಚವೂ ಏರಿಕೆಯಾಗಿದ್ದು, ಸಿಎಡಿ ಇನ್ನಷ್ಟು ವಿಸ್ತರಿಸುವ ಸಾಧ್ಯತೆ ಇದೆ.
ತಜ್ಞರ ಪ್ರಕಾರ, ಒಂದು ಬ್ಯಾರಲ್ ಕಚ್ಚಾ ತೈಲದ ಬೆಲೆಯಲ್ಲಿ 1 ಡಾಲರ್ ಏರಿದರೆ ಭಾರತಕ್ಕೆ ವಾರ್ಷಿಕವಾಗಿ ಸುಮಾರು 2 ಬಿಲಿಯನ್ ಡಾಲರ್ ಹೆಚ್ಚುವರಿ ಹೊರೆ ಬೀಳುತ್ತದೆ. ಇದು ಭಾರತೀಯ ಕರೆನ್ಸಿಯಲ್ಲಿ ಅಂದಾಜು 19,000 ಕೋಟಿ ರೂಪಾಯಿಗೆ ಸಮವಾಗಿದೆ.
ಹಾರ್ಮುಜ್ ಜಲಸಂಧಿ ಮಹತ್ವ
ಭಾರತ ತನ್ನ ತೈಲ ಅಗತ್ಯದ ಶೇ.50ಕ್ಕೂ ಹೆಚ್ಚು ಭಾಗವನ್ನು ಇರಾನ್ ಹಾಗೂ ಕೊಲ್ಲಿ ರಾಷ್ಟ್ರಗಳಿಂದ ಪಡೆಯುತ್ತದೆ. ಶೇ.35ರಿಂದ 50ರಷ್ಟು ತೈಲವು ಮಧ್ಯಪ್ರಾಚ್ಯದ ಹಾರ್ಮುಜ್ ಜಲಸಂಧಿ ಮೂಲಕ ಬರುತ್ತದೆ. ಈ ಮಾರ್ಗದಲ್ಲಿ ಯಾವುದೇ ವ್ಯತ್ಯಯ ಉಂಟಾದರೆ ಪೂರೈಕೆ ತೊಂದರೆಗೊಳಗಾಗಿ ಬೆಲೆಗಳು ಮತ್ತಷ್ಟು ಏರುತ್ತದೆ.
ರಷ್ಯಾ ಮತ್ತು ಅಮೆರಿಕದಿಂದಲೂ ಭಾರತ ತೈಲ ಪೂರೈಕೆ ಪಡೆಯುತ್ತಿದ್ದು ದೊಡ್ಡ ಆತಂಕ ಉಂಟಾಗದು. ಆದರೂ ಒಟ್ಟು ಅಂದಾಜು ಪ್ರಕಾರ, ಪ್ರಸ್ತುತ 80 ಡಾಲರ್ ಮಟ್ಟದಲ್ಲಿರುವ ಬ್ರೆಂಟ್ ಬೆಲೆ ಮುಂದಿನ ದಿನಗಳಲ್ಲಿ 100 ರಿಂದ 110 ಡಾಲರ್ ಗಡಿಗೂ ಏರಬಹುದೆಂಬ ನಿರೀಕ್ಷೆ ವ್ಯಕ್ತವಾಗಿದೆ.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
27-07-26 01:09 pm
HK News Staffer
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm