ಬ್ರೇಕಿಂಗ್ ನ್ಯೂಸ್
02-03-26 09:23 pm HK News Staffer ದೇಶ - ವಿದೇಶ
ನವದೆಹಲಿ, ಮಾರ್ಚ್ 2: ಪಶ್ಚಿಮ ಏಷ್ಯಾದಲ್ಲಿ ಉಲ್ಬಣಗೊಂಡ ಯುದ್ಧ ಸ್ಥಿತಿಯ ಪರಿಣಾಮ ಅಂತಾರಾಷ್ಟ್ರೀಯ ಕಚ್ಚಾ ತೈಲ ಮಾರುಕಟ್ಟೆಯಲ್ಲಿ ಭಾರೀ ಸಂಚಲನ ಉಂಟಾಗಿದೆ. ಬ್ರೆಂಟ್ ಕಚ್ಚಾ ತೈಲದ ಬೆಲೆ ಬ್ಯಾರಲ್ಗೆ 80 ಡಾಲರ್ ದಾಟಿದ್ದು, ಹಲವು ತಿಂಗಳ ಬಳಿಕ ಗರಿಷ್ಠ ಮಟ್ಟ ತಲುಪಿದೆ.
ಭಾರತ ತನ್ನ ಅಗತ್ಯದ ಬಹುಪಾಲು ಕಚ್ಚಾ ತೈಲವನ್ನು ಆಮದು ಮಾಡಿಕೊಳ್ಳುತ್ತದೆ. ಇರಾನ್ ಹಾಗೂ ಕೊಲ್ಲಿ ರಾಷ್ಟ್ರಗಳು ಪ್ರಮುಖ ಪೂರೈಕೆದಾರರು. ದೇಶದ ಒಟ್ಟಾರೆ ಆಮದುಗಳಲ್ಲಿ ತೈಲ ಮತ್ತು ಚಿನ್ನದ ಪಾಲು ಹೆಚ್ಚಿರುವುದರಿಂದ ಕರೆಂಟ್ ಅಕೌಂಟ್ ಡೆಫಿಸಿಟ್ ಈಗಾಗಲೇ ಉನ್ನತ ಮಟ್ಟದಲ್ಲಿದೆ. ಕಚ್ಚಾ ತೈಲದ ಬೆಲೆ ಏರಿಕೆಯಿಂದ ಆಮದು ವೆಚ್ಚವೂ ಏರಿಕೆಯಾಗಿದ್ದು, ಸಿಎಡಿ ಇನ್ನಷ್ಟು ವಿಸ್ತರಿಸುವ ಸಾಧ್ಯತೆ ಇದೆ.
ತಜ್ಞರ ಪ್ರಕಾರ, ಒಂದು ಬ್ಯಾರಲ್ ಕಚ್ಚಾ ತೈಲದ ಬೆಲೆಯಲ್ಲಿ 1 ಡಾಲರ್ ಏರಿದರೆ ಭಾರತಕ್ಕೆ ವಾರ್ಷಿಕವಾಗಿ ಸುಮಾರು 2 ಬಿಲಿಯನ್ ಡಾಲರ್ ಹೆಚ್ಚುವರಿ ಹೊರೆ ಬೀಳುತ್ತದೆ. ಇದು ಭಾರತೀಯ ಕರೆನ್ಸಿಯಲ್ಲಿ ಅಂದಾಜು 19,000 ಕೋಟಿ ರೂಪಾಯಿಗೆ ಸಮವಾಗಿದೆ.
ಹಾರ್ಮುಜ್ ಜಲಸಂಧಿ ಮಹತ್ವ
ಭಾರತ ತನ್ನ ತೈಲ ಅಗತ್ಯದ ಶೇ.50ಕ್ಕೂ ಹೆಚ್ಚು ಭಾಗವನ್ನು ಇರಾನ್ ಹಾಗೂ ಕೊಲ್ಲಿ ರಾಷ್ಟ್ರಗಳಿಂದ ಪಡೆಯುತ್ತದೆ. ಶೇ.35ರಿಂದ 50ರಷ್ಟು ತೈಲವು ಮಧ್ಯಪ್ರಾಚ್ಯದ ಹಾರ್ಮುಜ್ ಜಲಸಂಧಿ ಮೂಲಕ ಬರುತ್ತದೆ. ಈ ಮಾರ್ಗದಲ್ಲಿ ಯಾವುದೇ ವ್ಯತ್ಯಯ ಉಂಟಾದರೆ ಪೂರೈಕೆ ತೊಂದರೆಗೊಳಗಾಗಿ ಬೆಲೆಗಳು ಮತ್ತಷ್ಟು ಏರುತ್ತದೆ.
ರಷ್ಯಾ ಮತ್ತು ಅಮೆರಿಕದಿಂದಲೂ ಭಾರತ ತೈಲ ಪೂರೈಕೆ ಪಡೆಯುತ್ತಿದ್ದು ದೊಡ್ಡ ಆತಂಕ ಉಂಟಾಗದು. ಆದರೂ ಒಟ್ಟು ಅಂದಾಜು ಪ್ರಕಾರ, ಪ್ರಸ್ತುತ 80 ಡಾಲರ್ ಮಟ್ಟದಲ್ಲಿರುವ ಬ್ರೆಂಟ್ ಬೆಲೆ ಮುಂದಿನ ದಿನಗಳಲ್ಲಿ 100 ರಿಂದ 110 ಡಾಲರ್ ಗಡಿಗೂ ಏರಬಹುದೆಂಬ ನಿರೀಕ್ಷೆ ವ್ಯಕ್ತವಾಗಿದೆ.
29-05-26 10:41 pm
HK News Staffer
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಿದ್ದರಾ...
28-05-26 06:18 pm
CM Siddaramaiah, Supporters crying, Kaveri: ಸ...
28-05-26 05:31 pm
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am