ಬ್ರೇಕಿಂಗ್ ನ್ಯೂಸ್
04-03-26 12:58 pm HK News Staffer ದೇಶ - ವಿದೇಶ
ಟೆಹ್ರಾನ್, ಮಾರ್ಚ್ 4: ಇರಾನ್ ಪರಮೋಚ್ಛ ನಾಯಕರಾಗಿದ್ದ ಅಯತೊಲ್ಲಾ ಅಲಿ ಖಮೇನಿಯವರ ಬಳಿಕ ದೇಶವನ್ನು ಮುನ್ನಡೆಸಲು ಅವರ ಪುತ್ರ ಮೊಜ್ತಾಬಾ ಹೊಸೇನಿ ಖಮೇನಿ ಅವರನ್ನು ಮುಂದಿನ ಸರ್ವೋಚ್ಚ ನಾಯಕರನ್ನಾಗಿ ಆಯ್ಕೆ ಮಾಡಲಾಗಿದೆ. ಹಂಗಾಮಿ ಮುಖ್ಯಸ್ಥರ ಸಭೆಯಲ್ಲಿ ಹೊಸೇನಿ ಅವರನ್ನು ಖಮೇನಿ ಉತ್ತರಾಧಿಕಾರಿಯಾಗಿ ಆಯ್ಕೆ ಮಾಡಲಾಗಿದೆ ಎಂದು ವರದಿಗಳು ತಿಳಿಸಿವೆ.
ಖಮೇನಿ ಅವರನ್ನು ಗುರಿಯಾಗಿಸಿ ಅಮೆರಿಕ- ಇಸ್ರೇಲ್ ದಾಳಿ ನಡೆಸಿ ಅವರನ್ನು ವಾರದ ಹಿಂದೆ ಹತ್ಯೆ ಮಾಡಿತ್ತು. ಇದರಿಂದ ಖಾಲಿಯಾದ ಸರ್ವೋಚ್ಚ ನಾಯಕನ ಸ್ಥಾನಕ್ಕೆ ರೆವೊಲ್ಯುಶನರಿ ಗಾರ್ಡ್ ಒತ್ತಾಯದಂತೆ, ಪುತ್ರ ಮೊಜ್ತಬಾ ಹೊಸೇನಿ ಖಮೇನಿ ಅವರನ್ನು ಮುಂದಿನ ಸರ್ವೋಚ್ಚ ನಾಯಕನಾಗಿ ಆಯ್ಕೆ ಮಾಡಲಾಗಿದೆ. ಆದರೆ ಈ ಮಾಹಿತಿ ಬಗ್ಗೆ ಅಧಿಕೃತ ದೃಢೀಕರಣ ಲಭ್ಯವಾಗಿಲ್ಲ.
ಖಮೇನಿ ಅವರನ್ನು ಪವಿತ್ರ ನಗರವಾದ ಮಶಾದ್ನಲ್ಲಿ ಸಮಾಧಿ ಮಾಡಲಾಗುವುದು ಮತ್ತು ಟೆಹ್ರಾನ್ನಲ್ಲಿ “ದೊಡ್ಡ ವಿದಾಯ ಸಮಾರಂಭ” ನಡೆಸಲಾಗುವುದು ಎಂದು ಅವರ ಪರವಾಗಿರುವ ರೆವೊಲ್ಯುಶನರಿ ಗಾರ್ಡ್ಗಳು ಟೆಲಿಗ್ರಾಮ್ ಪೋಸ್ಟ್ನಲ್ಲಿ ತಿಳಿಸಿವೆ.
ಖಮೇನಿ ಅವರಿಗೆ ಯಾವುದೇ ನಿಯೋಜಿತ ಉತ್ತರಾಧಿಕಾರಿ ಇರಲಿಲ್ಲ. ಅಯತೊಲ್ಲಾ ಅಲಿರೆಜಾ ಅರಾಫಿ, ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಮತ್ತು ಮುಖ್ಯ ನ್ಯಾಯಮೂರ್ತಿ ಘೋಲಮ್ಹೊಸೇನ್ ಮೊಹ್ಸೆನಿ ಎಜೈ ಅವರನ್ನು ಒಳಗೊಂಡ ಮೂವರು ಸದಸ್ಯರ ಇರಾನ್ನ ಮಧ್ಯಂತರ ನಾಯಕತ್ವ ಮಂಡಳಿಯು ಮುಂದಿನ ಉತ್ತರಾಧಿಕಾರಿಯನ್ನು ಆಯ್ಕೆ ಮಾಡುವ ವರೆಗೆ ಸುಪ್ರೀಂ ನಾಯಕನ ಜವಾಬ್ದಾರಿಗಳನ್ನು ವಹಿಸಿಕೊಂಡಿತ್ತು.
ಮೊಜ್ತಬಾ ರೆವೊಲ್ಯುಶನರಿ ಗಾರ್ಡ್ ನಲ್ಲಿ ಸೇವೆ ಸಲ್ಲಿಸಿದ ಅನುಭವ ಹೊಂದಿದ್ದಾರಾದರೂ, ಸರ್ಕಾರದಲ್ಲಿ ಯಾವುದೇ ಅಧಿಕೃತ ಹುದ್ದೆಗಳನ್ನು ನಿರ್ವಹಿಸಿದವರಲ್ಲ. ತಂದೆಯ ಜೊತೆಗೆ ಪ್ರಮುಖ ಸಲಹೆಗಾರರಾಗಿ ಇದ್ದರು. ಮಿಲಿಟರಿ ಮತ್ತು ಅರೆಸೈನಿಕ ಪಡೆಗಳೊಂದಿಗೆ ಉತ್ತಮ ಸಂಬಂಧ ಹೊಂದಿದ್ದರು.
ಇರಾನ್ನ ಶಿಯಾ ದೇವಪ್ರಭುತ್ವ ವ್ಯವಸ್ಥೆಯಲ್ಲಿ ಸರ್ವೋಚ್ಚ ನಾಯಕ ಅತ್ಯಂತ ಶಕ್ತಿಶಾಲಿ ಸ್ಥಾನವಾಗಿದ್ದು, ದೇಶದ ಸಶಸ್ತ್ರ ಪಡೆಗಳ ಕಮಾಂಡರ್ ಇನ್-ಚೀಫ್ ಆಗಿರುತ್ತಾರೆ. ರಾಜಕೀಯ, ಮಿಲಿಟರಿ ಹಾಗೂ ತಂತ್ರಾತ್ಮಕ ನಿರ್ಧಾರಗಳ ಮೇಲೆ ಅಂತಿಮ ಅಧಿಕಾರ ಹೊಂದಿರುವ ಈ ಹುದ್ದೆಗೆ ಮೊಜ್ತಬಾ ಖಮೇನಿ ನೇಮಕಗೊಂಡಿರುವುದು ದೇಶದ ನೀತಿಗಳಲ್ಲಿ ದೊಡ್ಡ ಬದಲಾವಣೆಗಳಾಗುವ ಸಾಧ್ಯತೆ ಕಡಿಮೆ ಎನ್ನಲಾಗುತ್ತದೆ.
ಆದರೆ ಮೊಜ್ತಬಾ ಖಮೇನಿ ಆಯ್ಕೆ ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ. 2009ರ ಪ್ರತಿಭಟನೆಗಳ ಸಂದರ್ಭದಲ್ಲಿ ಅವರ ಪಾತ್ರದ ಬಗ್ಗೆ ಟೀಕೆಗಳು ಕೇಳಿಬಂದಿದ್ದವು. ಈಗ ವಂಶಾವಳಿ ಆಧಾರಿತ ಅಧಿಕಾರ ವರ್ಗಾವಣೆಯ ಕುರಿತು ವಿರೋಧ ವ್ಯಕ್ತವಾಗಿದೆ. ಈಗಾಗಲೇ ಇಸ್ರೇಲ್ ಇರಾನ್ ಪಾಲಿಬಯ ಹೊಸ ನಾಯಕರನ್ನು ಟಾರ್ಗೆಟ್ ಮಾಡಿರುವುದು ಮತ್ತು ಇರಾನ್ ಒಳಗಡೆ ಜನಸಾಮಾನ್ಯರು ಖಮೇನಿ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದುದರಿಂದ ಹೊಸ ನಾಯಕನನ್ನು ಒಪ್ಪಿಕೊಳ್ಳುತ್ತಾರಾ ಎನ್ನುವ ಪ್ರಶ್ನೆ ಇದೆ.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am