ಬ್ರೇಕಿಂಗ್ ನ್ಯೂಸ್
04-03-26 10:03 pm HK News Staffer ದೇಶ - ವಿದೇಶ
ಟೆಹ್ರಾನ್, ಮಾರ್ಚ್ 4: ಇರಾನ್ ಮತ್ತು ಅಮೆರಿಕ ನಡುವಿನ ಸಂಘರ್ಷ ಐದನೇ ದಿನಕ್ಕೆ ಕಾಲಿಟ್ಟಿದ್ದು, ಪರಿಸ್ಥಿತಿ ವಿಕೋಪಕ್ಕೆ ಹೋಗಿದೆ. ಶ್ರೀಲಂಕಾ ಬಳಿ ತನ್ನ ನೌಕೆಯ ಮೇಲಿನ ದಾಳಿ ಬೆನ್ನಲ್ಲೇ ಹಿಂದೂ ಮಹಾಸಾಗರದಲ್ಲಿ ತನ್ನ ಕರಾವಳಿಯಿಂದ ಸುಮಾರು 650 ಕಿಮೀ ದೂರದಲ್ಲಿದ್ದ ಅಮೆರಿಕದ ಯುದ್ಧನೌಕೆಯ ಮೇಲೆ ಕ್ಷಿಪಣಿ ದಾಳಿ ನಡೆಸಿರುವುದಾಗಿ ಇರಾನ್ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಹೇಳಿಕೊಂಡಿದೆ. ಆದರೆ ಇದರ ಬಗ್ಗೆ ಅಮೆರಿಕ ಯಾವುದೇ ಮಾಹಿತಿ ನೀಡಿಲ್ಲ.
ಶ್ರೀಲಂಕಾ ಕರಾವಳಿಯಲ್ಲಿ ಇರಾನಿನ ಹಡಗಿನ ಮೇಲೆ ಬುಧವಾರ ಬೆಳಗ್ಗೆ ಜಲಾಂತರ್ಗಾಮಿ ಮೂಲಕ ದಾಳಿ ನಡೆಸಲಾಗಿದ್ದು, ಅದರಲ್ಲಿದ್ದ ಕನಿಷ್ಠ 101 ಯೋಧರು ಕಾಣೆಯಾಗಿದ್ದಾರೆ. 78 ಜನ ಗಾಯಗೊಂಡಿದ್ದು ಅವರನ್ನು ರಕ್ಷಣೆ ಮಾಡಲಾಗಿದೆ. ಇರಾನಿನ ಐರಿಸ್ ದೇನಾ ಹೆಸರಿನ ನೌಕಾಪಡೆಯ ಯುದ್ಧನೌಕೆ ಇದಾಗಿದ್ದು, ಫೆಬ್ರವರಿ ಮಧ್ಯದಲ್ಲಿ ವಿಶಾಖಪಟ್ಟಣದಲ್ಲಿ ನಡೆದ ಭಾರತೀಯ ನೌಕಾಪಡೆಯ ಅಂತರರಾಷ್ಟ್ರೀಯ ಫ್ಲೀಟ್ ರಿವ್ಯೂ(IFR) ಮತ್ತು ಬಹುರಾಷ್ಟ್ರೀಯ ಕಾರ್ಯಾಚರಣೆ ಮಿಲನ್ನಲ್ಲಿ ಭಾಗವಹಿಸಿತ್ತು. ಭಾರತ ಆಯೋಜಿಸಿದ್ದ ನೌಕಾ ಕಾರ್ಯಾಚರಣೆಗಳಲ್ಲಿ ಭಾಗವಹಿಸಿದ ನಂತರ ಇರಾನ್ಗೆ ಹಿಂದಿರುಗುತ್ತಿದ್ದ ವೇಳೆ ಅಮೆರಿಕ ದಾಳಿ ನಡೆಸಿದೆ. ಅದರಲ್ಲಿದ್ದ ಹಲವರನ್ನು ಶ್ರೀಲಂಕಾ ಸೇನೆ ರಕ್ಷಣೆ ಮಾಡಿದೆ.
ಇದೇ ವೇಳೆ, ಅಮೆರಿಕದೊಂದಿಗೆ ಮಾತುಕತೆ ನಡೆಸುವ ಯಾವುದೇ ಉದ್ದೇಶವನ್ನು ನಾವು ಹೊಂದಿಲ್ಲ. ಸಾಧ್ಯವಿರುವಷ್ಟು ಕಾಲ ಯುದ್ಧವನ್ನು ಮುಂದುವರಿಸುತ್ತೇವೆ ಎಂದು ದಿವಂಗತ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಹಿರಿಯ ಸಹಾಯಕ ಮೊಹಮ್ಮದ್ ಮೊಖ್ಬರ್ ತಿಳಿಸಿದ್ದಾರೆ. "ಅಮೆರಿಕನ್ನರ ಮೇಲೆ ನಮಗೆ ನಂಬಿಕೆ ಇಲ್ಲ. ಅವರೊಂದಿಗೆ ಯಾವುದೇ ಮಾತುಕತೆ ನಡೆಸುವುದಿಲ್ಲ. ನಾವು ಬಯಸಿದಷ್ಟು ಕಾಲ ಯುದ್ಧವನ್ನು ಮುಂದುವರಿಸಬಹುದು" ಎಂದು ಅವರು ಹೇಳಿದ್ದಾರೆ.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
27-07-26 01:09 pm
HK News Staffer
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm