ಬ್ರೇಕಿಂಗ್ ನ್ಯೂಸ್
05-03-26 05:02 pm HK News Staffer ದೇಶ - ವಿದೇಶ
ಕೊಲಂಬೊ, ಮಾರ್ಚ್ 4: ಕಳೆದ ಐದು ದಿನಗಳಿಂದ ಮಧ್ಯಪ್ರಾಚ್ಯವನ್ನು ಉದ್ವಿಗ್ನಗೊಳಿಸಿದ್ದ ಅಮೆರಿಕ–ಇಸ್ರೇಲ್ ಹಾಗೂ ಇರಾನ್ ನಡುವಿನ ಸಂಘರ್ಷ ಇದೀಗ ಭಾರತದ ಸಮೀಪದ ಸಮುದ್ರ ಪ್ರದೇಶಗಳಿಗೂ ವ್ಯಾಪಿಸಿರುವ ಬೆಳವಣಿಗೆ ನಡೆದಿದೆ. ಶ್ರೀಲಂಕಾ ಕರಾವಳಿ ಸಮೀಪ ಇರಾನ್ನ ಯುದ್ಧನೌಕೆ ಮೇಲೆ ಅಮೆರಿಕ ದಾಳಿ ನಡೆಸಿದ ಪರಿಣಾಮ ಕನಿಷ್ಠ 87 ಮಂದಿ ಮೃತಪಟ್ಟಿದ್ದು, ಹಲವರು ನಾಪತ್ತೆಯಾಗಿರುವುದಾಗಿ ವರದಿಯಾಗಿದೆ.
ದಾಳಿಗೆ ಗುರಿಯಾದ ನೌಕೆಯನ್ನು ಇರಾನ್ ನೌಕಾಪಡೆಯ ಐಆರ್ಐಎಸ್ ಡೆನಾ ಎಂದು ಗುರುತಿಸಲಾಗಿದೆ. ಅಮೆರಿಕದ ಸಬ್ಮರೀನ್ನಿಂದ ಹಾರಿಸಲಾದ ಟಾರ್ಪೆಡೋ ಕ್ಷಿಪಣಿಯಿಂದ ಈ ನೌಕೆಯನ್ನು ಹೊಡೆದುರುಳಿಸಲಾಗಿದೆ ಎಂದು ಅಮೆರಿಕ ರಕ್ಷಣಾ ಇಲಾಖೆ ಹೇಳಿಕೆ ನೀಡಿದೆ.
ದಾಳಿಯ ತೀವ್ರತೆಗೆ ನೌಕೆ ಸಂಪೂರ್ಣವಾಗಿ ಮುಳುಗಿದ್ದು, ಅದರಲ್ಲಿದ್ದ ಸಿಬ್ಬಂದಿಯಲ್ಲಿ 32 ಮಂದಿಯನ್ನು ಮಾತ್ರ ರಕ್ಷಿಸಲಾಗಿದೆ. ಸುಮಾರು 61 ಮಂದಿ ನಾಪತ್ತೆಯಾಗಿದ್ದು, ಅವರು ಸಾವಿಗೀಡಾಗಿರುವ ಶಂಕೆ ವ್ಯಕ್ತವಾಗಿದೆ. ಈಗಾಗಲೇ 87ಕ್ಕೂ ಹೆಚ್ಚು ಮೃತದೇಹಗಳನ್ನು ಪತ್ತೆಹಚ್ಚಲಾಗಿದೆ ಎಂದು ಶ್ರೀಲಂಕಾ ಅಧಿಕಾರಿಗಳು ತಿಳಿಸಿದ್ದಾರೆ.
ಈ ಘಟನೆ ಎರಡನೇ ವಿಶ್ವಯುದ್ಧದ ನಂತರ ಅಮೆರಿಕ ಸಬ್ಮರೀನ್ನಿಂದ ಶತ್ರು ರಾಷ್ಟ್ರದ ನೌಕೆಯನ್ನು ಟಾರ್ಪೆಡೋ ಮೂಲಕ ಹೊಡೆದುರುಳಿಸಿದ ಅಪರೂಪದ ಘಟನೆ ಎನ್ನಲಾಗಿದೆ.
ಇತ್ತೀಚೆಗೆ ವಿಶಾಖಪಟ್ಟಣಂನಲ್ಲಿ ಭಾರತ ಮತ್ತು ಇರಾನ್ ನೌಕಾಪಡೆಗಳ ಜಂಟಿ ಸಮರಾಭ್ಯಾಸ ನಡೆದಿತ್ತು. ಫೆಬ್ರವರಿ 18ರಿಂದ 25ರವರೆಗೆ ನಡೆದ ಈ ಕಸರತ್ತಿನಲ್ಲಿ ಪಾಲ್ಗೊಳ್ಳಲು ಐಆರ್ಐಎಸ್ ಡೆನಾ ನೌಕೆ ಭಾರತಕ್ಕೆ ಆಗಮಿಸಿತ್ತು. ಸಮರಾಭ್ಯಾಸ ಮುಗಿದ ನಂತರ ನೌಕೆ ಸಿಂಗಾಪುರಗೆ ತೆರಳಿ ಅಲ್ಲಿ ದುರಸ್ತಿ ಕಾರ್ಯಗಳನ್ನು ಪೂರ್ಣಗೊಳಿಸಿ ಇರಾನ್ಗೆ ವಾಪಸ್ಸಾಗುತ್ತಿತ್ತು.
ಬುಧವಾರ ಬೆಳಗಿನ ಜಾವ ಶ್ರೀಲಂಕಾದ ದಕ್ಷಿಣ ಕರಾವಳಿ ನಗರ ಗಾಲೆ ಸಮೀಪ ಸುಮಾರು 40 ನಾಟಿಕಲ್ ಮೈಲು ದೂರದ ಅಂತಾರಾಷ್ಟ್ರೀಯ ಸಮುದ್ರ ವಲಯದಲ್ಲಿ ಸಾಗುತ್ತಿದ್ದ ವೇಳೆ ನೌಕೆ ಮೇಲೆ ದಾಳಿ ನಡೆದಿದೆ.
ನೌಕೆಯಿಂದ ಬಂದ ತುರ್ತು ಸಂದೇಶದ ಹಿನ್ನೆಲೆಯಲ್ಲಿ ಶ್ರೀಲಂಕಾ ನೌಕಾಪಡೆ ತಕ್ಷಣ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿತು. ಈ ವೇಳೆ ಬದುಕುಳಿದ ಕೆಲ ಸಿಬ್ಬಂದಿಯನ್ನು ರಕ್ಷಿಸಿ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಕುರಿತು ಪ್ರತಿಕ್ರಿಯೆ ನೀಡಿರುವ ಪೀಟ್ ಹೆಗ್ಸೆತ್ ಅವರು, “ಶ್ರೀಲಂಕಾದ ದಕ್ಷಿಣ ಕರಾವಳಿಯ ಬಳಿ ಇರಾನ್ ನೌಕೆಯನ್ನು ನಾವು ಟಾರ್ಪೆಡೋ ಮೂಲಕ ಧ್ವಂಸಗೊಳಿಸಿದ್ದೇವೆ. ಎರಡನೇ ವಿಶ್ವಯುದ್ಧದ ನಂತರ ಇಂತಹ ದಾಳಿ ಇದೇ ಮೊದಲ ಬಾರಿ” ಎಂದು ಹೇಳಿದ್ದಾರೆ.
ಈ ದಾಳಿಯಿಂದ ಮಧ್ಯಪ್ರಾಚ್ಯ ಸಂಘರ್ಷವು ಸಮುದ್ರದಲ್ಲಿಯೂ ತೀವ್ರಗೊಂಡಿದ್ದು, ಜಾಗತಿಕ ಮಟ್ಟದಲ್ಲಿ ಹೊಸ ಭದ್ರತಾ ಆತಂಕಗಳು ಮೂಡಿವೆ.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
27-07-26 01:09 pm
HK News Staffer
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm