ಬ್ರೇಕಿಂಗ್ ನ್ಯೂಸ್
06-03-26 10:58 pm HK News Desk ದೇಶ - ವಿದೇಶ
ಮುಂಬೈ, ಮಾರ್ಚ್ 6: ಮಹಾರಾಷ್ಟ್ರ ಸರ್ಕಾರವು ಲವ್ ಜಿಹಾದ್ ನಿಯಂತ್ರಣದ ಉದ್ದೇಶದಿಂದ ಉತ್ತರ ಪ್ರದೇಶ ಮಾದರಿಯಲ್ಲಿ ಮತಾಂತರ ವಿರೋಧಿ ಮಸೂದೆಯನ್ನು ರಚಿಸಿದ್ದು ಕರಡು ರೂಪಕ್ಕೆ ಸಚಿವ ಸಂಪುಟವು ಅನುಮೋದನೆ ನೀಡಿದೆ.
ಮತಾಂತರಗೊಳ್ಳಲು ಇಚ್ಛಿಸುವ ಯಾವುದೇ ವ್ಯಕ್ತಿ 60 ದಿನಗಳ ಮೊದಲು ಸಂಬಂಧಪಟ್ಟ ಪ್ರಾಧಿಕಾರದಿಂದ ಅನುಮತಿ ಪಡೆಯುವುದು ಮತ್ತು ಅದಕ್ಕಾಗಿ ನೋಟಿಸ್ ನೀಡುವುದು ಕಡ್ಡಾಯವಾಗಿದೆ. ಮತಾಂತರದ ನಂತರ 25 ದಿನಗಳ ಒಳಗಾಗಿ ಅದನ್ನು ಅಧಿಕೃತವಾಗಿ ನೋಂದಣಿ ಮಾಡಿಸಬೇಕು. ಇಲ್ಲದಿದ್ದರೆ, ಅಂತಹ ಮತಾಂತರವನ್ನು ಅಸಿಂಧು ಎಂದು ಪರಿಗಣಿಸಲಾಗುತ್ತದೆ. ಮತಾಂತರಗೊಳ್ಳುವ ವ್ಯಕ್ತಿಯ ರಕ್ತ ಸಂಬಂಧಿಗಳು ಆ ಮತಾಂತರ ಕೃತ್ಯವು ಕಾನೂನುಬಾಹಿರ ಎಂದು ದೂರು ನೀಡಿದರೆ, ಪೊಲೀಸರು ಎಫ್ಐಆರ್ ದಾಖಲಿಸಿ ತನಿಖೆ ನಡೆಸಬೇಕು.
ಬಲವಂತದ ಮತಾಂತರಕ್ಕೆ ನಿಷೇಧ
ಧಾರ್ಮಿಕ ಸ್ವಾತಂತ್ರ್ಯದ ಹಕ್ಕು ಎಂದರೆ ಬಲವಂತವಾಗಿ, ವಂಚನೆಯಿಂದ ಅಥವಾ ಆಮಿಷವೊಡ್ಡಿ ಮತಾಂತರ ಮಾಡುವುದಲ್ಲ. ಬದಲಾಗಿ, ಇಂತಹ ಕಾನೂನುಬಾಹಿರ ಚಟುವಟಿಕೆಗಳಿಂದ ರಕ್ಷಣೆ ಪಡೆಯುವ ಹಕ್ಕನ್ನು ಇದು ಒಳಗೊಂಡಿದೆ ಎಂದು ಮಸೂದೆಯಲ್ಲಿ ಉಲ್ಲೇಖಿಸಲಾಗಿದೆ. ಮಹಾರಾಷ್ಟ್ರ ಸಚಿವ ಮತ್ತು ಬಿಜೆಪಿ ನಾಯಕ ನಿತೀಶ್ ರಾಣೆ ಮಾತನಾಡಿ, "ಸಚಿವ ಸಂಪುಟವು ಪ್ರಬಲವಾದ ಮತಾಂತರ ವಿರೋಧಿ ಕಾಯ್ದೆಯನ್ನು ಅನುಮೋದಿಸಿದೆ. ಈ ಮೂಲಕ ಅಸೆಂಬ್ಲಿ ಚುನಾವಣೆಯ ಮೊದಲು ಬಿಜೆಪಿ ನೀಡಿದ್ದ ಭರವಸೆಯನ್ನು ಈಡೇರಿಸಲಾಗಿದೆ ಎಂದು ತಿಳಿಸಿದ್ದಾರೆ.
ಶಿಕ್ಷೆ ಮತ್ತು ದಂಡದ ವಿವರಗಳು
ಬಲವಂತ ಅಥವಾ ಆಮಿಷದ ಮೂಲಕ ಮತಾಂತರ ಮಾಡಿದರೆ 1 ರಿಂದ 5 ವರ್ಷಗಳ ವರೆಗೆ ಜೈಲು ಶಿಕ್ಷೆ ಮತ್ತು ಕನಿಷ್ಠ 25,000 ರೂ. ದಂಡ ವಿಧಿಸಲು ಅವಕಾಶವಿದೆ. ಅಪ್ರಾಪ್ತರು, ಮಹಿಳೆಯರು ಅಥವಾ ಎಸ್ಸಿ/ಎಸ್ಟಿ (SC/ST) ಸಮುದಾಯಕ್ಕೆ ಸೇರಿದವರನ್ನು ಅಕ್ರಮವಾಗಿ ಮತಾಂತರ ಮಾಡಿದರೆ ಶಿಕ್ಷೆ ಹೆಚ್ಚು ಕಠಿಣವಾಗಿರುತ್ತದೆ. ಇದರಲ್ಲಿ 3 ರಿಂದ 10 ವರ್ಷಗಳ ವರೆಗೆ ಜೈಲು ಶಿಕ್ಷೆ ಮತ್ತು 50,000 ರೂ. ದಂಡ ವಿಧಿಸಬಹುದು.
ಸಮೂಹ ಮತಾಂತರ ಹೆಚ್ಚಿನ ಶಿಕ್ಷೆ
ಒಂದೇ ಸಮಯದಲ್ಲಿ ದೊಡ್ಡ ಮಟ್ಟದಲ್ಲಿ ಜನರನ್ನು ಮತಾಂತರ ಮಾಡಿದರೆ, ಭಾಗಿಯಾದವರಿಗೆ 5 ರಿಂದ 10 ವರ್ಷಗಳ ವರೆಗೆ ಜೈಲು ಶಿಕ್ಷೆ ಮತ್ತು 1 ಲಕ್ಷ ರೂ. ವರೆಗೆ ದಂಡ ವಿಧಿಸುವ ನಿಬಂಧನೆ ಇದೆ.
ಮದುವೆಗಾಗಿ ಮತಾಂತರ ಅಸಿಂಧು
ಕೇವಲ ಮದುವೆಯ ಉದ್ದೇಶಕ್ಕಾಗಿ ಧರ್ಮವನ್ನು ಮರೆಮಾಚಿ ಅಥವಾ ಮೋಸದಿಂದ ಮತಾಂತರ ಮಾಡಿದರೆ ಅಂತಹ ಮದುವೆಯನ್ನು ಈ ಕಾಯ್ದೆಯಡಿ ಅಸಿಂಧು ಎಂದು ಘೋಷಿಸುವ ಅಧಿಕಾರ ನ್ಯಾಯಾಲಯಕ್ಕೆ ಇರುತ್ತದೆ.
04-04-26 07:33 pm
HK News Staffer
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ ಕುಮಾರಸ್ವಾಮಿ- ಎಡಿಜ...
02-04-26 09:31 pm
ನಾನು ಮುಖ್ಯಮಂತ್ರಿಯಾಗಿ ಮುಸ್ಲಿಂ ಅಲ್ಪಸಂಖ್ಯಾತ ಮೀಸಲ...
02-04-26 08:07 pm
03-04-26 07:52 pm
HK News Staffer
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
ಇರಾನ್ ಕದನವಿರಾಮ ಕೇಳುತ್ತಿದೆ, ಒಪ್ಪದಿದ್ದರೆ ಶಿಲಾಯು...
01-04-26 11:03 pm
ಇರಾನ್ ಮೇಲೆ ಅಣ್ವಸ್ತ್ರ ದಾಳಿಗೆ ಅಮೆರಿಕ ಸಿದ್ಧತೆ; ವ...
01-04-26 12:46 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
04-04-26 05:42 pm
HK News Staffer
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am
ಮೂರನೇ ಮಗುವೂ ಹೆಣ್ಣಾಗುತ್ತದೆಂದು ಗರ್ಭಿಣಿ ಪತ್ನಿ, ಇ...
03-04-26 11:00 pm