ಬ್ರೇಕಿಂಗ್ ನ್ಯೂಸ್
10-03-26 01:31 pm HK News Staffer ದೇಶ - ವಿದೇಶ
ಇಸ್ಲಮಾಬಾದ್, ಮಾರ್ಚ್ 10: ಇರಾನ್- ಇಸ್ರೇಲ್ ಯುದ್ಧದ ಪರಿಣಾಮ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲದ ಬೆಲೆ 100 ಡಾಲರ್ ದಾಟಿದ ಬೆನ್ನಲ್ಲೇ ಪಾಕಿಸ್ತಾನದಲ್ಲಿ ಅಲ್ಲೋಲ ಕಲ್ಲೋಲ ಆಗಿದೆ. ತೈಲ ದರ ವಿಪರೀತ ಏರಿಕೆಯಾಗಿದ್ದು ಪಾಕ್ ಸರ್ಕಾರ ದೇಶಾದ್ಯಂತ ಶಾಲೆಗಳಿಗೆ ಎರಡು ವಾರಗಳ ಕಾಲ ರಜೆ ಘೋಷಣೆ ಮಾಡಿದೆ. ಸರ್ಕಾರಿ ಕಚೇರಿಗಳು ವಾರದಲ್ಲಿ ನಾಲ್ಕು ದಿನಗಳ ಕಾಲ ಕಾರ್ಯ ನಿರ್ವಹಿಸುವಂತೆ ಮತ್ತು ವಾಹನಗಳನ್ನು ಅರ್ಧಕ್ಕರ್ಧ ಬಳಕೆ ಕಡಿಮೆ ಮಾಡುವಂತೆ ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಷರೀಫ್ ಜನರಿಗೆ ಕರೆ ನೀಡಿದ್ದಾರೆ.
ದೇಶವನ್ನುದ್ದೇಶಿಸಿ ಮಾತನಾಡಿದ ಅವರು, ತುರ್ತಾಗಿ ಇಂಧನ ಉಳಿತಾಯ ಕ್ರಮಗಳನ್ನು ಘೋಷಿಸಿದರು. ಇದರ ಭಾಗವಾಗಿ, ಶಾಲೆಗಳನ್ನು ಹದಿನೈದು ದಿನಗಳ ಕಾಲ ಮುಚ್ಚಲಾಗುತ್ತದೆ. ಇಂಧನವನ್ನು ಉಳಿಸಲು ಸರ್ಕಾರಿ ಕಚೇರಿಗಳು ವಾರದಲ್ಲಿ ನಾಲ್ಕು ದಿನಕ್ಕೆ ಸೀಮಿತ ಮಾಡಲಾಗುತ್ತದೆ. ಇದಲ್ಲದೆ ಇಂಧನವನ್ನು ಉಳಿಸಲು ಉನ್ನತ ಶಿಕ್ಷಣ ಸಂಸ್ಥೆಗಳು ಕಾಲೇಜು ಮುಚ್ಚಿ ತಕ್ಷಣವೇ ಆನ್ಲೈನ್ ಕ್ಲಾಸ್ ನಡೆಸಬೇಕು ಎಂದು ಸೂಚನೆ ನೀಡಿದರು.
ಸರ್ಕಾರದ ವೆಚ್ಚವನ್ನು ಕಡಿಮೆ ಮಾಡಲು ಮತ್ತು ಇಂಧನ ಉಳಿಸಲು ಮುಂದಿನ ಎರಡು ತಿಂಗಳ ಕಾಲ ಸರ್ಕಾರಿ ಇಲಾಖೆಗಳ ಇಂಧನ ಭತ್ಯೆಯಲ್ಲಿ ಶೇ. 50ರಷ್ಟು ಕಡಿತ ಮಾಡಲಾಗುವುದು ಎಂದು ಶರೀಫ್ ತಿಳಿಸಿದ್ದಾರೆ.
ವಾಹನಗಳ ಬಳಕೆಗೆ ಬ್ರೇಕ್:
ಸದ್ಯಕ್ಕೆ ಸಾರ್ವಜನಿಕ ಸಾರಿಗೆ ಬಸ್ಗಳು ಮತ್ತು ಆಂಬ್ಯುಲೆನ್ಸ್ಗಳನ್ನು ಹೊರತುಪಡಿಸಿ, ಶೇ. 60ರಷ್ಟು ಅಧಿಕೃತ ಸರ್ಕಾರಿ ವಾಹನಗಳನ್ನು ಚಾಲನೆಯಿಂದ ಹಿಂತೆಗೆದುಕೊಳ್ಳಲು ನಿರ್ಧರಿಸಲಾಗಿದೆ. ಇಂಧನ ಉಳಿತಾಯದ ಭಾಗವಾಗಿ ಕೇವಲ ಶೇ. 50ರಷ್ಟು ಸಿಬ್ಬಂದಿ ಮಾತ್ರ ಕಚೇರಿಗಳಲ್ಲಿ ಕೆಲಸ ಮಾಡಲಿದ್ದಾರೆ. ಉಳಿದವರು ಮನೆಯಿಂದಲೇ ಕೆಲಸ ಮಾಡಲು ಸೂಚಿಸಲಾಗಿದೆ. ಪಾಕಿಸ್ತಾನದಲ್ಲಿ ಲೀಟರ್ ಪೆಟ್ರೋಲ್ ಬೆಲೆ 325 ಪಾಕಿಸ್ತಾನ ರುಪಾಯಿ ಆಗಿದೆ. ಡಾಲರ್ ಎದುರಲ್ಲಿ ಪಾಕಿಸ್ತಾನದ ರುಪಾಯಿ 279ಕ್ಕೆ ಕುಸಿದಿದೆ. ಕಚ್ಚಾ ತೈಲ ದರ ಏರಿಕೆ ಹಿನ್ನೆಲೆಯಲ್ಲಿ ಪೆಟ್ರೋಲ್, ಡೀಸೆಲ್ ಮೇಲೆ ಒಮ್ಮೆಗೆ 55 ಪಿಕೆಆರ್ ಹೆಚ್ಚಿಸಿರುವುದು ದೇಶದಲ್ಲಿ ಭಾರೀ ತಳಮಳಕ್ಕೆ ಕಾರಣವಾಗಿದೆ.
29-05-26 10:41 pm
HK News Staffer
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಿದ್ದರಾ...
28-05-26 06:18 pm
CM Siddaramaiah, Supporters crying, Kaveri: ಸ...
28-05-26 05:31 pm
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am