ಬ್ರೇಕಿಂಗ್ ನ್ಯೂಸ್
10-03-26 01:31 pm HK News Staffer ದೇಶ - ವಿದೇಶ
ಇಸ್ಲಮಾಬಾದ್, ಮಾರ್ಚ್ 10: ಇರಾನ್- ಇಸ್ರೇಲ್ ಯುದ್ಧದ ಪರಿಣಾಮ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲದ ಬೆಲೆ 100 ಡಾಲರ್ ದಾಟಿದ ಬೆನ್ನಲ್ಲೇ ಪಾಕಿಸ್ತಾನದಲ್ಲಿ ಅಲ್ಲೋಲ ಕಲ್ಲೋಲ ಆಗಿದೆ. ತೈಲ ದರ ವಿಪರೀತ ಏರಿಕೆಯಾಗಿದ್ದು ಪಾಕ್ ಸರ್ಕಾರ ದೇಶಾದ್ಯಂತ ಶಾಲೆಗಳಿಗೆ ಎರಡು ವಾರಗಳ ಕಾಲ ರಜೆ ಘೋಷಣೆ ಮಾಡಿದೆ. ಸರ್ಕಾರಿ ಕಚೇರಿಗಳು ವಾರದಲ್ಲಿ ನಾಲ್ಕು ದಿನಗಳ ಕಾಲ ಕಾರ್ಯ ನಿರ್ವಹಿಸುವಂತೆ ಮತ್ತು ವಾಹನಗಳನ್ನು ಅರ್ಧಕ್ಕರ್ಧ ಬಳಕೆ ಕಡಿಮೆ ಮಾಡುವಂತೆ ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಷರೀಫ್ ಜನರಿಗೆ ಕರೆ ನೀಡಿದ್ದಾರೆ.
ದೇಶವನ್ನುದ್ದೇಶಿಸಿ ಮಾತನಾಡಿದ ಅವರು, ತುರ್ತಾಗಿ ಇಂಧನ ಉಳಿತಾಯ ಕ್ರಮಗಳನ್ನು ಘೋಷಿಸಿದರು. ಇದರ ಭಾಗವಾಗಿ, ಶಾಲೆಗಳನ್ನು ಹದಿನೈದು ದಿನಗಳ ಕಾಲ ಮುಚ್ಚಲಾಗುತ್ತದೆ. ಇಂಧನವನ್ನು ಉಳಿಸಲು ಸರ್ಕಾರಿ ಕಚೇರಿಗಳು ವಾರದಲ್ಲಿ ನಾಲ್ಕು ದಿನಕ್ಕೆ ಸೀಮಿತ ಮಾಡಲಾಗುತ್ತದೆ. ಇದಲ್ಲದೆ ಇಂಧನವನ್ನು ಉಳಿಸಲು ಉನ್ನತ ಶಿಕ್ಷಣ ಸಂಸ್ಥೆಗಳು ಕಾಲೇಜು ಮುಚ್ಚಿ ತಕ್ಷಣವೇ ಆನ್ಲೈನ್ ಕ್ಲಾಸ್ ನಡೆಸಬೇಕು ಎಂದು ಸೂಚನೆ ನೀಡಿದರು.
ಸರ್ಕಾರದ ವೆಚ್ಚವನ್ನು ಕಡಿಮೆ ಮಾಡಲು ಮತ್ತು ಇಂಧನ ಉಳಿಸಲು ಮುಂದಿನ ಎರಡು ತಿಂಗಳ ಕಾಲ ಸರ್ಕಾರಿ ಇಲಾಖೆಗಳ ಇಂಧನ ಭತ್ಯೆಯಲ್ಲಿ ಶೇ. 50ರಷ್ಟು ಕಡಿತ ಮಾಡಲಾಗುವುದು ಎಂದು ಶರೀಫ್ ತಿಳಿಸಿದ್ದಾರೆ.
ವಾಹನಗಳ ಬಳಕೆಗೆ ಬ್ರೇಕ್:
ಸದ್ಯಕ್ಕೆ ಸಾರ್ವಜನಿಕ ಸಾರಿಗೆ ಬಸ್ಗಳು ಮತ್ತು ಆಂಬ್ಯುಲೆನ್ಸ್ಗಳನ್ನು ಹೊರತುಪಡಿಸಿ, ಶೇ. 60ರಷ್ಟು ಅಧಿಕೃತ ಸರ್ಕಾರಿ ವಾಹನಗಳನ್ನು ಚಾಲನೆಯಿಂದ ಹಿಂತೆಗೆದುಕೊಳ್ಳಲು ನಿರ್ಧರಿಸಲಾಗಿದೆ. ಇಂಧನ ಉಳಿತಾಯದ ಭಾಗವಾಗಿ ಕೇವಲ ಶೇ. 50ರಷ್ಟು ಸಿಬ್ಬಂದಿ ಮಾತ್ರ ಕಚೇರಿಗಳಲ್ಲಿ ಕೆಲಸ ಮಾಡಲಿದ್ದಾರೆ. ಉಳಿದವರು ಮನೆಯಿಂದಲೇ ಕೆಲಸ ಮಾಡಲು ಸೂಚಿಸಲಾಗಿದೆ. ಪಾಕಿಸ್ತಾನದಲ್ಲಿ ಲೀಟರ್ ಪೆಟ್ರೋಲ್ ಬೆಲೆ 325 ಪಾಕಿಸ್ತಾನ ರುಪಾಯಿ ಆಗಿದೆ. ಡಾಲರ್ ಎದುರಲ್ಲಿ ಪಾಕಿಸ್ತಾನದ ರುಪಾಯಿ 279ಕ್ಕೆ ಕುಸಿದಿದೆ. ಕಚ್ಚಾ ತೈಲ ದರ ಏರಿಕೆ ಹಿನ್ನೆಲೆಯಲ್ಲಿ ಪೆಟ್ರೋಲ್, ಡೀಸೆಲ್ ಮೇಲೆ ಒಮ್ಮೆಗೆ 55 ಪಿಕೆಆರ್ ಹೆಚ್ಚಿಸಿರುವುದು ದೇಶದಲ್ಲಿ ಭಾರೀ ತಳಮಳಕ್ಕೆ ಕಾರಣವಾಗಿದೆ.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm