ಬ್ರೇಕಿಂಗ್ ನ್ಯೂಸ್
10-03-26 04:30 pm Giridhar Shetty, ಗಿರಿಧರ್ ಶೆಟ್ಟಿ ದೇಶ - ವಿದೇಶ
ನವದೆಹಲಿ, ಮಾರ್ಚ್ 10: ಯುದ್ಧ ಬಿಕ್ಕಟ್ಟಿನಿಂದಾಗಿ ತೈಲ ದರ ನಾಗಾಲೋಟದಲ್ಲಿದ್ದರೆ, ಅಮೆರಿಕ ಮತ್ತು ಇರಾನ್ ಮುಯ್ಯಿಗೆ ಮುಯ್ಯಿ, ನೀ ಕೊಡೆ ನಾ ಬಿಡೆ ಅನ್ನುವಷ್ಟರ ಮಟ್ಟಿಗೆ ಎದುರುಬದುರಾಗಿದೆ. ಅಮೆರಿಕ- ಇಸ್ರೇಲ್ ದಾಳಿ ನಿಲ್ಲಿಸದಿದ್ದರೆ ಹರ್ಮುಜ್ ಜಲಸಂಧಿಯಿಂದ ತೈಲ ಹೊತ್ತ ಹಡಗನ್ನು ಹೋಗಲು ಬಿಡುವುದಿಲ್ಲ ಎಂದು ಇರಾನ್ ರೆವೊಲ್ಯುಶನರಿ ಗಾರ್ಡ್ಸ್ ಹೇಳಿದರೆ, ಆ ರೀತಿ ಮಾಡಿದರೆ ಈಗ ಮಾಡಿದ್ದಕ್ಕಿಂತ 20 ಪಟ್ಟು ಹೆಚ್ಚಿನ ದಾಳಿಯನ್ನು ಮಾಡುತ್ತೇವೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಗುಡುಗಿದ್ದಾರೆ.
ಒಂದೆಡೆ ಜಾಗತಿಕ ಮಾರುಕಟ್ಟೆಗೆ ಸೌದಿ ಅರೇಬಿಯಾ ಸೇರಿದಂತೆ ಗಲ್ಫ್ ರಾಷ್ಟ್ರಗಳ ತೈಲ ಪೂರೈಕೆ ವ್ಯತ್ಯಯ ಆಗಿರುವುದರಿಂದ ಕಚ್ಛಾ ಪೆಟ್ರೋಲಿಯಂ ಬೆಲೆಯು ಬ್ಯಾರೆಲ್ ಗೆ 110 ಡಾಲರ್ ಮುಟ್ಟಿದೆ. ಈ ಹಿಂದೆ 2022ರಲ್ಲಿ ಇದೇ ರೀತಿ ಆಗಿದ್ದರೂ, ಆನಂತರ ಅದು ಕೆಲ ತಿಂಗಳಲ್ಲಿ ಸರಿ ಹೋಗಿತ್ತು. ಇದೀಗ ಯುದ್ಧದ ಅನಿಶ್ಚಿತತೆ ಎಷ್ಟು ದಿನ ಆಗಬಹುದೆಂಬ ಅಂದಾಜಿಲ್ಲದಿರುವುದರಿಂದ ರಾಕೆಟ್ ವೇಗದಲ್ಲಿ ತೈಲ ದರವು ಏರತೊಡಗಿದೆ. ಇದರ ಪರಿಣಾಮ ಜನಸಾಮಾನ್ಯನ ಮೇಲೆ ನೇರವಾಗಿ ತಟ್ಟತೊಡಗಿದೆ.
ಪ್ರಮುಖವಾಗಿ ಏಶ್ಯನ್ ರಾಷ್ಟ್ರಗಳಲ್ಲಿ ತೀವ್ರ ಅಲ್ಲೋಲ ಕಲ್ಲೋಲ ಸೃಷ್ಟಿಯಾಗಿದೆ. ಚೀನಾವು ಯುದ್ಧದ ಸನ್ನಿವೇಶ ಎದುರಾಗಬಹುದು ಎನ್ನುವ ನಿಟ್ಟಿನಲ್ಲಿ ಎರಡು ವರ್ಷಗಳ ಹಿಂದೆಯೇ ತೈಲ ಶೇಖರಣೆ ಮಾಡಲು ತೊಡಗಿತ್ತು. ಇದರಿಂದಾಗಿ ಈಗ ದರ ಹೆಚ್ಚಿದೊಡನೆ ಜಾಗತಿಕ ಮಾರುಕಟ್ಟೆಯಿಂದ ತೈಲ ಖರೀದಿಸುವುದನ್ನು ನಿಲ್ಲಿಸಿದೆ. ಭಾರತದಲ್ಲಿ ಒಂದು ತಿಂಗಳಿಗೆ ಆಗುವಷ್ಟು ತೈಲ ಶೇಖರಣೆ ಇದೆಯೆಂದು ಸರ್ಕಾರ ಹೇಳುತ್ತಿದ್ದರೂ, ಎಲ್ ಪಿಜಿ ದರವನ್ನು ಏರಿಸಿದೆ. ಇದರ ಬೆನ್ನಲ್ಲೇ ಪ್ರಮುಖ ನಗರಗಳಲ್ಲಿ ಎಲ್ ಪಿಜಿ ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯ ಆಗಿದೆ.
ಧಾರ್ಮಿಕರ ಆಡಳಿತ ಕೊನೆ ಮಾಡ್ತೀವಿ
ಇದೇ ವೇಳೆ, ಧರ್ಮಗುರುಗಳ ಆಡಳಿತವನ್ನು ಕೊನೆಗಾಣಿಸುವುದೇ ಇಸ್ರೇಲ್ ಗುರಿ ಎಂದು ಪ್ರಧಾನಿ ನೆತನ್ಯಾಹು ಹೇಳಿದ್ದಾರೆ. ಯುದ್ಧದ ಕೊನೆಯನ್ನು ಇರಾನ್ ಜನರೇ ನಿರ್ಧರಿಸಬೇಕು. ಅಲ್ಲಿನ ಜನರಿಗೆ ಒಳ್ಳೆಯ ಆಡಳಿತ, ಧಾರ್ಮಿಕ ಮೂಲಭೂತವಾದ ಹೊರತಾದ ಆಡಳಿತವನ್ನು ಕೊಡುವುದು ನಮ್ಮ ಗುರಿಯಾಗಿದೆ. ಅಂತಹ ಆಡಳಿತ ಬರೋ ವರೆಗೂ ಅಲ್ಲಿ ಆಡಳಿತ ವಹಿಸಿಕೊಂಡವರ ಮೂಳೆಗಳನ್ನು ಮುರಿಯುತ್ತಲೇ ಇರುತ್ತೇವೆ. ನಮ್ಮ ಕೈಗಳು ಇನ್ನಷ್ಟು ವಿಸ್ತಾರ ಆಗುತ್ತಲೇ ಇರುತ್ತವೆ. ಯುದ್ಧ ನಿಂತರೆ ಅದರಿಂದ ಇರಾನ್ ಜನರಿಗೇ ಒಳಿತಾಗುತ್ತದೆ ಎಂದು ಹೇಳಿದ್ದಾರೆ.
ಇದೇ ವೇಳೆ, ಟ್ರುತ್ ಮೀಡಿಯಾದಲ್ಲಿ ಡೊನಾಲ್ಡ್ ಟ್ರಂಪ್ ಹೇಳಿಕೆ ಪ್ರಕಟಿಸಿದ್ದು ತೈಲದ ಹಡಗುಗಳನ್ನು ಹೋಗಲು ಬಿಡದಿದ್ದರೆ ನಮ್ಮ ದಾಳಿಯು ಇನ್ನಷ್ಟು ಕಠಿಣವಾಗುತ್ತದೆ. ಅವರಿಗೆ ಜಗತ್ತಿನ ಬೇರಾವುದೇ ಶಕ್ತಿಗಳು ಬೆಂಬಲ ನೀಡಿದರೂ ಅದನ್ನು ಎದುರಿಸಲು ಅಥವಾ ತಡೆಯಲು ಸಾಧ್ಯವಾಗಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ. ಇದಕ್ಕೆದುರಾಗಿ ಇರಾನ್ ವಕ್ತಾರರು ಹೇಳಿಕೆ ಬಿಡುಗಡೆ ಮಾಡಿದ್ದು, ಯುದ್ಧ ನಿಲ್ಲಿಸುವುದನ್ನು ನಿರ್ಧರಿಸುವುದು ನಾವೇ ಆಗಿರುತ್ತೇವೆ. ಟ್ರಂಪ್ ಹೇಳಿಕೆಯು ಮೂರ್ಖತನದ್ದು ಎಂದು ಹೇಳಿದ್ದಾರೆ.
10-03-26 01:47 pm
HK News Staffer
ಗುರುಗ್ರಾಮ್ನಲ್ಲಿ ನಿರ್ಮಾಣ ಹಂತದ ಗೋಡೆ ಕುಸಿತ ; 7...
10-03-26 11:04 am
ಸ್ತ್ರೀ–ಪುರುಷರ ನಗ್ನ ಫೋಟೋಗಳು, ಕೊಳೆತ ಟೊಮೆಟೋ ; ಬೆ...
10-03-26 10:49 am
ಕಲಬುರಗಿ ಜಾತ್ರೆಯಲ್ಲಿ ಭೀಕರ ದುರಂತ; ರಥದ ಚಕ್ರಕ್ಕೆ...
09-03-26 09:51 pm
ಕೊಡಗು ; ಹತ್ತು ದಿನ ಅಂತರದಲ್ಲಿ ಕಾಡಾನೆಗೆ ಎರಡನೇ ಬಲ...
09-03-26 08:07 pm
10-03-26 04:30 pm
Giridhar Shetty, ಗಿರಿಧರ್ ಶೆಟ್ಟಿ
ಕಚ್ಚಾ ತೈಲ ದರ ಏರಿಕೆ ; ಪಾಕಿಸ್ತಾನದಲ್ಲಿ ಅಲ್ಲೋಲಕಲ್...
10-03-26 01:31 pm
ಇರಾನ್ ನೂತನ ಸರ್ವೋಚ್ಚ ನಾಯಕನಾಗಿ ಆಯತುಲ್ಲಾ ಮೊಜ್ತಬ...
09-03-26 01:44 pm
ಇರಾನ್ ಮೇಲೆ ಮತ್ತೊಂದು ಭಾರಿ ದಾಳಿಗೆ ಟ್ರಂಪ್ ಸಿದ್ಧ...
07-03-26 11:58 am
ರಾಜಧಾನಿ ಟೆಹ್ರಾನಲ್ಲಿದ್ದ ಅಯತೊಲ್ಲಾ ಖಮೇನಿಗೆ ಸೇರಿದ...
06-03-26 11:04 pm
10-03-26 05:00 pm
HK News Staffer
ಬಿಸಿಲಿಗೆ ತತ್ತರಿಸಿದ ಅಳಿಲಿನ ದಣಿವು ನೀಗಿಸಿದ ಟ್ರಾಫ...
09-03-26 09:52 pm
ಗಲ್ಫ್ ಯುದ್ಧ ; ಮಂಗಳೂರಿನಿಂದ ದುಬೈ, ಜೆದ್ದಾ ಸೇರಿ ಹ...
09-03-26 07:29 pm
ತಲಪಾಡಿಯ ಯುವಕ ಬೆಂಗಳೂರಿನಲ್ಲಿ ಕಟ್ಟಡದಿಂದ ಬಿದ್ದು ಸ...
09-03-26 02:53 pm
ಬೇರೆ ರಾಷ್ಟ್ರಗಳಿಂದ ಬಂದವರಿಗೆ ಮಸೀದಿ, ಚರ್ಚ್ ಕಟ್ಟಲ...
09-03-26 12:50 pm
10-03-26 01:49 pm
HK News Staffer
Vexon fraud Company, FIR: ಬ್ಲೇಡ್ ಕಂಪನಿ ವೆಕ್ಸನ...
28-02-26 11:12 am
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm