ಬ್ರೇಕಿಂಗ್ ನ್ಯೂಸ್
12-03-26 09:01 pm HK News Staffer ದೇಶ - ವಿದೇಶ
ಟೆಹ್ರಾನ್, ಮಾರ್ಚ್ 12: ಮಧ್ಯಪ್ರಾಚ್ಯದಲ್ಲಿ ಅಮೆರಿಕ ಮತ್ತು ಇಸ್ರೇಲ್ ನಡುವಿನ ಸಂಘರ್ಷ 13ನೇ ದಿನಕ್ಕೆ ಕಾಲಿಟ್ಟಿದ್ದು, ಈ ನಡುವೆ ಇರಾನ್ ಯುದ್ಧ ಕೊನೆಗೊಳಿಸಲು ಅಮೆರಿಕಕ್ಕೆ ಷರತ್ತುಗಳನ್ನು ವಿಧಿಸಿದೆ. ಯುದ್ಧ ನಿಲ್ಲಬೇಕಾದರೆ ನಮ್ಮ ಮೂರು ಷರತ್ತನ್ನುಗಳನ್ನು ಒಪ್ಪಿಕೊಳ್ಳಬೇಕು. ಶಾಂತಿ ಸ್ಥಾಪನೆಗಾಗಿ ಮೂರು ಪ್ರಮುಖ ಷರತ್ತುಗಳನ್ನು ಜಾರಿಗೆ ತರಬೇಕೆಂದು ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಹೇಳಿದ್ದಾರೆ.
ಅಮೆರಿಕವು ಇರಾನ್ ದೇಶದ ಕಾನೂನುಬದ್ಧ ಹಕ್ಕುಗಳನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಬೇಕು ಮತ್ತು ಇತ್ತೀಚಿನ ಸಂಘರ್ಷದಿಂದ ಉಂಟಾದ ನಷ್ಟಗಳಿಗೆ ಪರಿಹಾರ ನೀಡಬೇಕು. ಹಾಗೂ ಭವಿಷ್ಯದಲ್ಲಿ ಇರಾನ್ ಮೇಲೆ ಯಾವುದೇ ದಾಳಿ ನಡೆಯಬಾರದು ಎಂಬ ಸ್ಪಷ್ಟ ಅಂತಾರಾಷ್ಟ್ರೀಯ ಮಟ್ಟದಲ್ಲಿ ಭರವಸೆ ನೀಡಬೇಕು. ಈ ಷರತ್ತುಗಳನ್ನು ಒಪ್ಪಿದರೆ ಮಾತ್ರ ಯುದ್ಧ ನಿಲ್ಲುತ್ತದೆ ಎಂದು ಇರಾನ್ ಅಧ್ಯಕ್ಷರು ಹೇಳಿದ್ದು ಅಮೆರಿಕ ಮತ್ತು ಇಸ್ರೇಲ್ ಮೇಲೆ ಒತ್ತಡ ಹೆಚ್ಚಿಸಿದೆ.
ರಷ್ಯಾ ಮತ್ತು ಪಾಕಿಸ್ತಾನದ ನಾಯಕರೊಂದಿಗೆ ಚರ್ಚೆ ನಡೆಸಿದ ಬಳಿಕ ಪೆಜೆಶ್ಲಿಯಾನ್, ಈ ಷರತ್ತುಗಳನ್ನು ಹಾಕಿದ್ದಾರೆ. ಮಧ್ಯಪ್ರಾಚ್ಯದಲ್ಲಿ ಶಾಂತಿ ಸ್ಥಾಪನೆಗೆ ತಮ್ಮ ದೇಶ ಬದ್ಧವಾಗಿದೆ ಎಂದೂ ಪೆಜೆಶ್ಕಿಯಾನ್ ಪುನರುಚ್ಚರಿಸಿದ್ದಾರೆ. ಎಕ್ಸ್ ಖಾತೆಯಲ್ಲಿ ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವ ಮಸೌದ್ ಪೆಜೆಶ್ಕಿಯನ್, ರಷ್ಯಾ ಮತ್ತು ಪಾಕಿಸ್ತಾನದ ಮುಖ್ಯಸ್ಥರ ಜೊತೆ ಮಾತುಕತೆ ನಡೆಸಿದೆ. ಮಧ್ಯ ಪ್ರಾಚ್ಯದಲ್ಲಿ ಶಾಂತಿಗಾಗಿ ಇರಾನ್ನ ಬದ್ಧತೆಯನ್ನು ಪುನರುಚ್ಚರಿಸಿದ್ದೇನೆ ಎಂದಿದ್ದಾರೆ.
ಇಸ್ರೇಲ್ ಖಡಕ್ ಪ್ರತಿಕ್ರಿಯೆ:
ಯುದ್ಧ ನಿಲ್ಲಲು ಇರಾನ್ ಷರತ್ತು ವಿಧಿಸಿದ್ದಕ್ಕೆ ಇಸ್ರೇಲ್ ಖಡಕ್ ಪ್ರತಿಕ್ರಿಯೆ ನೀಡಿದೆ. "ಅಗತ್ಯ ಇರುವ ವರೆಗೆ ಇರಾನ್ನೊಂದಿಗೆ ಯುದ್ಧ ಮುಂದುವರಿಸಲು ನಾವು ಸಿದ್ಧರಿದ್ದೇವೆ" ಎಂದು ಇಸ್ರೇಲ್ನ ಸೇನಾ ವಕ್ತಾರರು ಹೇಳಿದ್ದಾರೆ. ಇತ್ತೀಚೆಗಷ್ಟೇ ದಾಳಿ ನಡೆಸಿದ್ದ ಇಸ್ರೇಲ್ ಪಡೆಗಳು ಸಮುದ್ರದಲ್ಲಿ ಬಾಂಬ್ ಇಡುತ್ತಿದ್ದ ಇರಾನ್ನ 16 ಹಡಗುಗಳನ್ನು ಧ್ವಂಸ ಮಾಡಿದೆ. ಇದಕ್ಕೆ ಪ್ರತಿಯಾಗಿ ಇರಾನ್ ಅಮೆರಿಕದ ತೈಲ ಟ್ಯಾಂಕರ್ ಮೇಲೆ ದಾಳಿ ನಡೆಸಿ ತೀವ್ರ ಹಾನಿ ಉಂಟು ಮಾಡಿದೆ. ಈ ದಾಳಿಯಲ್ಲಿ ಭಾರತೀಯ ಪ್ರಜೆಯೊಬ್ಬರು ಸಾವಿಗೀಡಾಗಿದ್ದಾರೆ.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
27-07-26 01:09 pm
HK News Staffer
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm