ಬ್ರೇಕಿಂಗ್ ನ್ಯೂಸ್
14-03-26 07:38 pm HK News Staffer ದೇಶ - ವಿದೇಶ
ನವದೆಹಲಿ, ಮಾರ್ಚ್ 14: ಇರಾನ್–ಇಸ್ರೇಲ್ ಮತ್ತು ಅಮೆರಿಕ ನಡುವಿನ ಉದ್ವಿಗ್ನ ಪರಿಸ್ಥಿತಿ ಇದೀಗ ವಿಮಾನಯಾನ ಕ್ಷೇತ್ರಕ್ಕೂ ತಟ್ಟಿದೆ. ಭಾರತದ ಅತಿದೊಡ್ಡ ವಿಮಾನಯಾನ ಸಂಸ್ಥೆ ಇಂಡಿಗೋ ತನ್ನ ವಿಮಾನ ಟಿಕೆಟ್ಗಳ ಮೇಲೆ ಇಂಧನ ಸರ್ಚಾರ್ಜ್ ವಿಧಿಸುವುದಾಗಿ ಘೋಷಿಸಿದೆ.
ಯುದ್ಧ ಪರಿಸ್ಥಿತಿಯಿಂದಾಗಿ ವಿಮಾನ ಯಾನ ಟರ್ಬೈನ್ ಇಂಧನ (ಎಟಿಎಫ್) ಬೆಲೆಗಳು ಏರಿಕೆಯಾಗಿದ್ದು, ಇದರಿಂದ ವಿಮಾನಯಾನ ಸಂಸ್ಥೆಗಳ ಕಾರ್ಯಾಚರಣಾ ವೆಚ್ಚ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಇಂಡಿಗೋ ಇಂದಿನಿಂದ ಅಂದರೆ ಮಾ.14ರಿಂದ ಟಿಕೆಟ್ಗಳ ಮೇಲೆ ಹೆಚ್ಚುವರಿ ಇಂಧನ ಶುಲ್ಕವನ್ನು ವಿಧಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದೆ.
ಹೊಸ ದರಗಳ ಪ್ರಕಾರ, ಭಾರತ ಒಳನಾಡು ವಿಮಾನ ಪ್ರಯಾಣಕ್ಕೆ 425 ರೂ. ಇಂಧನ ಸರ್ಚಾರ್ಜ್ ವಿಧಿಸಲಾಗುತ್ತದೆ. ಮಧ್ಯಪ್ರಾಚ್ಯ ದೇಶಗಳಿಗೆ ಪ್ರಯಾಣಿಸುವವರಿಗೆ 900 ರೂ. ಶುಲ್ಕ ನಿಗದಿಪಡಿಸಲಾಗಿದೆ. ದಕ್ಷಿಣ–ಪೂರ್ವ ಏಷ್ಯಾ ಮತ್ತು ಚೀನಾ ಮಾರ್ಗಗಳಿಗೆ 1,800 ರೂ. ಇಂಧನ ಶುಲ್ಕ ಇರಲಿದೆ. ಯೂರೋಪ್ ದೇಶಗಳಿಗೆ ಪ್ರಯಾಣಿಸುವವರಿಗೆ 2,300 ರೂ. ಸರ್ಚಾರ್ಜ್ ವಿಧಿಸಲಾಗುತ್ತದೆ. ಈ ನೂತನ ದರಗಳು ಇಂದಿನಿಂದಲೇ ಜಾರಿಗೆ ಬರಲಿವೆ.
ಇಂಧನ ಸರಬರಾಜಿನ ಅನಿಶ್ಚಿತತೆ ಹಾಗೂ ಕೆಲವು ವಾಯು ಮಾರ್ಗಗಳಲ್ಲಿ ಉಂಟಾದ ಅಡಚಣೆಗಳಿಂದಾಗಿ ವಿಮಾನಯಾನ ವೆಚ್ಚ ಹೆಚ್ಚಾಗಿದೆ. ವಿಮಾನಯಾನ ಟರ್ಬೈನ್ ಇಂಧನವು ವಿಮಾನಯಾನ ಸಂಸ್ಥೆಗಳ ಒಟ್ಟು ನಿರ್ವಹಣಾ ವೆಚ್ಚದ ಪ್ರಮುಖ ಭಾಗವಾಗಿದ್ದು, ಸಾಮಾನ್ಯವಾಗಿ 35 ರಿಂದ 40 ಶೇಕಡಾ ವೆಚ್ಚವನ್ನು ಇದುವೇ ಹೊಂದಿದೆ ಎಂದು ಉದ್ಯಮ ವಲಯದ ಅಧಿಕಾರಿಗಳು ತಿಳಿಸಿದ್ದಾರೆ.
ಇಂಧನ ಸರ್ಚಾರ್ಜ್ ದೇಶೀಯ ಮತ್ತು ಅಂತರರಾಷ್ಟ್ರೀಯ ಟಿಕೆಟ್ಗಳಿಗೂ ಅನ್ವಯವಾಗಲಿದೆ. ಮಾರ್ಗದ ದೂರ ಹಾಗೂ ಟಿಕೆಟ್ ದರ ವರ್ಗವನ್ನು ಅವಲಂಬಿಸಿ ಶುಲ್ಕದಲ್ಲಿ ವ್ಯತ್ಯಾಸ ಕಂಡುಬರುವ ಸಾಧ್ಯತೆ ಇದೆ. ಇಂಧನ ಬೆಲೆ ಏರಿಕೆ ಮತ್ತು ವಾಯುಪ್ರದೇಶದ ನಿರ್ಬಂಧಗಳಿಂದ ವಿಮಾನ ಕಾರ್ಯಾಚರಣೆಗಳು ಹೆಚ್ಚು ಸವಾಲಿನದ್ದಾಗಿವೆ ಎಂದು ತಜ್ಞರು ತಿಳಿಸಿದ್ದಾರೆ.
29-05-26 10:41 pm
HK News Staffer
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಿದ್ದರಾ...
28-05-26 06:18 pm
CM Siddaramaiah, Supporters crying, Kaveri: ಸ...
28-05-26 05:31 pm
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am