ಬ್ರೇಕಿಂಗ್ ನ್ಯೂಸ್
14-03-26 07:38 pm HK News Staffer ದೇಶ - ವಿದೇಶ
ನವದೆಹಲಿ, ಮಾರ್ಚ್ 14: ಇರಾನ್–ಇಸ್ರೇಲ್ ಮತ್ತು ಅಮೆರಿಕ ನಡುವಿನ ಉದ್ವಿಗ್ನ ಪರಿಸ್ಥಿತಿ ಇದೀಗ ವಿಮಾನಯಾನ ಕ್ಷೇತ್ರಕ್ಕೂ ತಟ್ಟಿದೆ. ಭಾರತದ ಅತಿದೊಡ್ಡ ವಿಮಾನಯಾನ ಸಂಸ್ಥೆ ಇಂಡಿಗೋ ತನ್ನ ವಿಮಾನ ಟಿಕೆಟ್ಗಳ ಮೇಲೆ ಇಂಧನ ಸರ್ಚಾರ್ಜ್ ವಿಧಿಸುವುದಾಗಿ ಘೋಷಿಸಿದೆ.
ಯುದ್ಧ ಪರಿಸ್ಥಿತಿಯಿಂದಾಗಿ ವಿಮಾನ ಯಾನ ಟರ್ಬೈನ್ ಇಂಧನ (ಎಟಿಎಫ್) ಬೆಲೆಗಳು ಏರಿಕೆಯಾಗಿದ್ದು, ಇದರಿಂದ ವಿಮಾನಯಾನ ಸಂಸ್ಥೆಗಳ ಕಾರ್ಯಾಚರಣಾ ವೆಚ್ಚ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಇಂಡಿಗೋ ಇಂದಿನಿಂದ ಅಂದರೆ ಮಾ.14ರಿಂದ ಟಿಕೆಟ್ಗಳ ಮೇಲೆ ಹೆಚ್ಚುವರಿ ಇಂಧನ ಶುಲ್ಕವನ್ನು ವಿಧಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದೆ.
ಹೊಸ ದರಗಳ ಪ್ರಕಾರ, ಭಾರತ ಒಳನಾಡು ವಿಮಾನ ಪ್ರಯಾಣಕ್ಕೆ 425 ರೂ. ಇಂಧನ ಸರ್ಚಾರ್ಜ್ ವಿಧಿಸಲಾಗುತ್ತದೆ. ಮಧ್ಯಪ್ರಾಚ್ಯ ದೇಶಗಳಿಗೆ ಪ್ರಯಾಣಿಸುವವರಿಗೆ 900 ರೂ. ಶುಲ್ಕ ನಿಗದಿಪಡಿಸಲಾಗಿದೆ. ದಕ್ಷಿಣ–ಪೂರ್ವ ಏಷ್ಯಾ ಮತ್ತು ಚೀನಾ ಮಾರ್ಗಗಳಿಗೆ 1,800 ರೂ. ಇಂಧನ ಶುಲ್ಕ ಇರಲಿದೆ. ಯೂರೋಪ್ ದೇಶಗಳಿಗೆ ಪ್ರಯಾಣಿಸುವವರಿಗೆ 2,300 ರೂ. ಸರ್ಚಾರ್ಜ್ ವಿಧಿಸಲಾಗುತ್ತದೆ. ಈ ನೂತನ ದರಗಳು ಇಂದಿನಿಂದಲೇ ಜಾರಿಗೆ ಬರಲಿವೆ.
ಇಂಧನ ಸರಬರಾಜಿನ ಅನಿಶ್ಚಿತತೆ ಹಾಗೂ ಕೆಲವು ವಾಯು ಮಾರ್ಗಗಳಲ್ಲಿ ಉಂಟಾದ ಅಡಚಣೆಗಳಿಂದಾಗಿ ವಿಮಾನಯಾನ ವೆಚ್ಚ ಹೆಚ್ಚಾಗಿದೆ. ವಿಮಾನಯಾನ ಟರ್ಬೈನ್ ಇಂಧನವು ವಿಮಾನಯಾನ ಸಂಸ್ಥೆಗಳ ಒಟ್ಟು ನಿರ್ವಹಣಾ ವೆಚ್ಚದ ಪ್ರಮುಖ ಭಾಗವಾಗಿದ್ದು, ಸಾಮಾನ್ಯವಾಗಿ 35 ರಿಂದ 40 ಶೇಕಡಾ ವೆಚ್ಚವನ್ನು ಇದುವೇ ಹೊಂದಿದೆ ಎಂದು ಉದ್ಯಮ ವಲಯದ ಅಧಿಕಾರಿಗಳು ತಿಳಿಸಿದ್ದಾರೆ.
ಇಂಧನ ಸರ್ಚಾರ್ಜ್ ದೇಶೀಯ ಮತ್ತು ಅಂತರರಾಷ್ಟ್ರೀಯ ಟಿಕೆಟ್ಗಳಿಗೂ ಅನ್ವಯವಾಗಲಿದೆ. ಮಾರ್ಗದ ದೂರ ಹಾಗೂ ಟಿಕೆಟ್ ದರ ವರ್ಗವನ್ನು ಅವಲಂಬಿಸಿ ಶುಲ್ಕದಲ್ಲಿ ವ್ಯತ್ಯಾಸ ಕಂಡುಬರುವ ಸಾಧ್ಯತೆ ಇದೆ. ಇಂಧನ ಬೆಲೆ ಏರಿಕೆ ಮತ್ತು ವಾಯುಪ್ರದೇಶದ ನಿರ್ಬಂಧಗಳಿಂದ ವಿಮಾನ ಕಾರ್ಯಾಚರಣೆಗಳು ಹೆಚ್ಚು ಸವಾಲಿನದ್ದಾಗಿವೆ ಎಂದು ತಜ್ಞರು ತಿಳಿಸಿದ್ದಾರೆ.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
27-07-26 01:09 pm
HK News Staffer
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm