ಬ್ರೇಕಿಂಗ್ ನ್ಯೂಸ್
16-03-26 12:38 pm HK News Staffer ದೇಶ - ವಿದೇಶ
ಪಾಟ್ನಾ, ಮಾರ್ಚ್ 10: ಬಿಹಾರದ ಶೇಖ್ ಪುರ ಜಿಲ್ಲೆಯಲ್ಲಿ ಇತ್ತೀಚೆಗೆ ಒಂದು ವಿಲಕ್ಷಣ ಘಟನೆ ನಡೆದಿದೆ. ಯುಪಿಎಸ್ಸಿ ಪರೀಕ್ಷೆಯಲ್ಲಿ ತೇರ್ಗಡೆಯಾಗಿ ಐಎಎಸ್ ಅಧಿಕಾರಿಯಾಗಿದ್ದಾನೆ ಎಂದು ನಂಬಿ ಇಡೀ ಗ್ರಾಮವೇ ಒಬ್ಬ ಯುವಕನಿಗಾಗಿ ಅದ್ಧೂರಿ ಪಾರ್ಟಿ ಆಯೋಜಿಸಿತ್ತು. ಆದರೆ ನಂತರ ಆ ರ್ಯಾಂಕ್ ಆತನದ್ದಲ್ಲ, ಬೇರೆಯವರದ್ದು ಎಂದು ತಿಳಿದುಬಂದಿದೆ.
ಫತೇಪುರ್ ಜಿಲ್ಲೆಯ ಮೂಲದ ಯುವಕ ರಂಜಿತ್ ಕುಮಾರ್ ಎಂಬ ಯುವಕ ತಾನು 2025ರ ಯುಪಿಎಸ್ಸಿ ಪರೀಕ್ಷೆಯಲ್ಲಿ ತೇರ್ಗಡೆಯಾಗಿದ್ದು ಐಎಎಸ್ ಅಧಿಕಾರಿಯಾಗಲಿದ್ದೇನೆ ಎಂದು ಹೇಳಿಕೊಂಡಿದ್ದ. ಈ ಸುದ್ದಿ ಕೇಳಿ ಸಂತಸಗೊಂಡ ಗ್ರಾಮಸ್ಥರು ಆತನನ್ನು ಹೂಮಾಲೆ ಹಾಕಿ, ಮೆರವಣಿಗೆ ಮಾಡಿ, ಸಿಹಿ ಹಂಚಿ ಸಡಗರ ಮಾಡಿದ್ದರು. ಆರ್ಜೆಡಿ ಪಕ್ಷದ ಮಾಜಿ ಶಾಸಕ ವಿಜಯ್ ಸಾಮ್ರಾಟ್ ತನ್ನ ಬೆಂಬಲಿಗರೊಂದಿಗೆ ರಂಜಿತ್ ಕುಮಾರ್ ಮನೆಗೆ ಬಂದು ಸನ್ಮಾನಿಸಿ ಗಿಫ್ಟ್ ಕೊಟ್ಟು ಹೋಗಿದ್ದರು.


ಸಂಭ್ರಮಾಚರಣೆಯ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದವು. ವಿಡಿಯೋದಲ್ಲಿ ಗ್ರಾಮಸ್ಥರು ಯುವಕನನ್ನು ಹೆಗಲ ಮೇಲೆ ಹೊತ್ತು ಸಂಭ್ರಮಿಸುತ್ತಿರುವುದು ಕಂಡುಬಂದಿತ್ತು. ಸಂಭ್ರಮ ಮುಗಿದ ಕೆಲವೇ ದಿನಗಳಲ್ಲಿ ಅಸಲಿ ವಿಷಯ ಹೊರಬಂದಿದೆ. ಯುವಕ ಹೇಳಿಕೊಂಡಿದ್ದ ರ್ಯಾಂಕ್ ಸಂಖ್ಯೆ ಮತ್ತು ಹೆಸರು ವಾಸ್ತವವಾಗಿ ಬೇರೆ ರಾಜ್ಯದ ಮತ್ತೊಬ್ಬ ಅಭ್ಯರ್ಥಿಗೆ ಸೇರಿತ್ತು. ಕೇವಲ ಹೆಸರಿನ ಸಾಮ್ಯತೆಯನ್ನು ಬಳಸಿಕೊಂಡು, ಉದ್ದೇಶಪೂರ್ವಕ ಈ ಯುವಕ ಸುಳ್ಳು ಹೇಳಿದ್ದ ಎಂಬುದು ಪತ್ತೆಯಾಗಿದೆ.
ಯುಪಿಎಸ್ಸಿ ರ್ಯಾಂಕ್ ಲಿಸ್ಟ್ ಪರಿಶೀಲಿಸಿದಾಗ, ಆತ ಹೇಳಿದ್ದ 440 ನೇ ಲಿಸ್ಟ್ ಕರ್ನಾಟಕದ ಚಿಕ್ಕಬಳ್ಳಾಪುರ ಜಿಲ್ಲೆಯ ರಂಜಿತ್ ಕುಮಾರ್ ಆರ್. ಎಂದು ಉಲ್ಲೇಖ ಆಗಿತ್ತು. ಫತೇಪುರ್ ಜಿಲ್ಲೆಯ ರಂಜಿತ್ ಕುಮಾರ್ ಎಂದು ನಮೂದು ಇರಲಿಲ್ಲ. ಅದನ್ನೇ ನೆಪವಾಗಿಸಿ ಕೆಲವು ಗ್ರಾಮಸ್ಥರನ್ನು ನಂಬಿಸಿ ಪ್ರಚಾರಕ್ಕಾಗಿ ಛೂ ಬಿಟ್ಟಿದ್ದ. ಸತ್ಯ ತಿಳಿಯುತ್ತಿದ್ದಂತೆ ಅದ್ದೂರಿ ಪಾರ್ಟಿ ಮಾಡಿದ್ದ ಗ್ರಾಮಸ್ಥರು ತೀವ್ರ ಮುಜುಗರಕ್ಕೆ ಒಳಗಾಗಿದ್ದಾರೆ. ಯುವಕನ ಈ ವಂಚನೆಯ ಬಗ್ಗೆ ಪೊಲೀಸರು ಫೋನ್ ಮಾಡಿ ಕರೆದಿದ್ದು ದಾಖಲೆ ಪತ್ರಗಳನ್ನು ನೀಡುವಂತೆ ಹೇಳಿದಾಗ ಯಾರಿಗೂ ಹೇಳದೆ ದೆಹಲಿಗೆ ಪರಾರಿಯಾಗಿದ್ದಾನೆ. ಘಟನೆ ಬಗ್ಗೆ ಈಗ ಎಲ್ಲೆಡೆ ಚರ್ಚೆಯಾಗುತ್ತಿದೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.
15-03-26 04:27 pm
HK News Staffer
ಲಿವರ್ ಸಿರೋಸಿಸ್ ಕಾಯಿಲೆಗೆ ತುತ್ತಾಗಿದ್ದ ತಂದೆ ; ತನ...
14-03-26 10:14 pm
ಮಲೆನಾಡಿಗೆ ಇಂಡಿಗೋ ಆಘಾತ ; ವಿಮಾನ ದುರಂತ ಹಿನ್ನೆಲೆ,...
13-03-26 12:09 pm
ಮಂತ್ರಾಲಯದಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿ...
13-03-26 09:44 am
ಮಗಳಿಗೆ ಮದುವೆಯಾಗದ ಚಿಂತೆಯಲ್ಲಿ ಆಟೋ ಚಾಲಕ ಆತ್ಮಹತ್ಯ...
12-03-26 02:48 pm
16-03-26 12:38 pm
HK News Staffer
ಒಡಿಶಾದ ಕಟಕ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ ; I...
16-03-26 12:34 pm
ಇರಾನ್ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ರಷ್ಯಾಕ್ಕೆ ;...
15-03-26 05:37 pm
ಎಪ್ರಿಲ್ 9 ಮತ್ತು 23 ; ಕೇರಳ, ತಮಿಳುನಾಡಿನಲ್ಲಿ ಒಂದ...
15-03-26 05:08 pm
ಅಮೆರಿಕ ವಿರುದ್ಧ ಯುದ್ಧಕ್ಕೆ ಹೌತಿಗಳು ಸಜ್ಜು ; ಹರ್ಮ...
15-03-26 04:57 pm
15-03-26 09:10 pm
Mangalurur Staffer
Udupi Accident: ತಾಯಿ-ಮಗ ತೆರಳುತ್ತಿದ್ದ ಸ್ಕೂಟರ್...
14-03-26 09:26 pm
ಕಂದಾಯ- ಅರಣ್ಯ ಭೂಮಿ ಗುರುತಿಸಲು ಜಿಲ್ಲಾ ಮಟ್ಟದಲ್ಲಿ...
14-03-26 08:31 pm
ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ಬಂಟ್ವಾಳದ ಯುವ ಛಾಯಾ...
14-03-26 06:07 pm
‘ಕ್ರಿಶ್ಚಿಯನ್ ಯುವಕ’ನಿಂದ ದೈವ ನರ್ತನ ಸೇವೆ ; ಪಂಬದ...
14-03-26 05:19 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am