ಬ್ರೇಕಿಂಗ್ ನ್ಯೂಸ್
16-03-26 02:44 pm HK News Staffer ದೇಶ - ವಿದೇಶ
ಅಬುಧಾಬಿ, ಮಾರ್ಚ್ 16: ಇರಾನ್ ಯುದ್ಧದ ಕುರಿತು ಸುಳ್ಳು ಮಾಹಿತಿ ಹರಡಿದ ಆರೋಪದ ಮೇಲೆ 19 ಭಾರತೀಯರು ಸೇರಿದಂತೆ ಒಟ್ಟು 35 ಮಂದಿಯನ್ನು ಬಂಧಿಸಲು ಯುಎಇ ಸರ್ಕಾರ ಆದೇಶ ಹೊರಡಿಸಿದ್ದು, ಈ ವಿಚಾರವನ್ನು ಯುಎಇ ಅಧಿಕಾರಿಗಳು ಅಧಿಕೃತವಾಗಿ ತಿಳಿಸಿದ್ದಾರೆ.
ತನಿಖೆ ವೇಳೆ ಆರೋಪಿಗಳು ಡಿಜಿಟಲ್ ಪ್ಲಾಟ್ಫಾರ್ಮ್ಗಳ ಮೂಲಕ ಪ್ರಾದೇಶಿಕ ಉದ್ವಿಗ್ನತೆಗೆ ಸಂಬಂಧಿಸಿದ ದೃಶ್ಯಾವಳಿಗಳು ಹಾಗೂ ತಪ್ಪು ನಿರೂಪಣೆಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರ ಮಾಡಿರುವುದು ಪತ್ತೆಯಾಗಿದೆ. ಜನರಲ್ಲಿ ಗೊಂದಲ ಹಾಗೂ ಪ್ರಚೋದನೆ ಉಂಟುಮಾಡುವ ಉದ್ದೇಶದಿಂದ ಈ ರೀತಿಯ ಸುಳ್ಳು ಮಾಹಿತಿಯನ್ನು ಹರಡಲಾಗಿದೆ ಎಂದು ಆರೋಪಿಸಲಾಗಿದೆ.
ಈ ಕುರಿತು ಮಾಹಿತಿ ನೀಡಿರುವ ಯುಎಇ ಅಟಾರ್ನಿ ಜನರಲ್ ಡಾ. ಹಮದ್ ಸೈಫ್ ಅಲ್ ಶಮ್ಸ್, ಡಿಜಿಟಲ್ ಪ್ಲಾಟ್ಫಾರ್ಮ್ಗಳ ಮೇಲ್ವಿಚಾರಣೆ ನಡೆಸಿದ ಬಳಿಕ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ. ಜೊತೆಗೆ ಆರೋಪಿಗಳು ತ್ವರಿತ ನ್ಯಾಯಾಲಯದಿಂದ ವಿಚಾರಣೆಯನ್ನು ಎದುರಿಸಬೇಕಾಗುತ್ತದೆ ಎಂದು ತಿಳಿಸಿದ್ದಾರೆ.

ಬಂಧನಕ್ಕೆ ಒಳಪಟ್ಟವರನ್ನು ಮೂರು ಗುಂಪುಗಳಾಗಿ ಪಟ್ಟಿ ಮಾಡಲಾಗಿದೆ. ಮೊದಲ ಗುಂಪಿನಲ್ಲಿ ಐವರು ಭಾರತೀಯರು, ಒಬ್ಬ ಪಾಕಿಸ್ತಾನಿ, ಒಬ್ಬ ನೇಪಾಳಿ, ಇಬ್ಬರು ಫಿಲಿಪಿನೋಗಳು ಹಾಗೂ ಒಬ್ಬ ಈಜಿಪ್ಟ್ ಮೂಲದ ವ್ಯಕ್ತಿ ಸೇರಿದ್ದಾರೆ. ಎರಡನೇ ಗುಂಪಿನಲ್ಲಿ ಐವರು ಭಾರತೀಯರು ಹಾಗೂ ನೇಪಾಳ ಮತ್ತು ಬಾಂಗ್ಲಾದೇಶದ ತಲಾ ಇಬ್ಬರು ಆರೋಪಿಗಳು ಇದ್ದಾರೆ. ಮೂರನೇ ಗುಂಪಿನಲ್ಲಿ ಐವರು ಭಾರತೀಯರು ಮತ್ತು ಒಬ್ಬ ಪಾಕಿಸ್ತಾನಿ ಇದ್ದಾರೆ. ಇದೇ ರೀತಿಯ ಅಪರಾಧ ಪ್ರಕರಣದಲ್ಲಿ ಮತ್ತಿಬ್ಬರು ಭಾರತೀಯರು ಸಹ ಆರೋಪಗಳನ್ನು ಎದುರಿಸುತ್ತಿದ್ದಾರೆ ಎನ್ನಲಾಗಿದೆ.
ಶನಿವಾರ 10 ಆರೋಪಿಗಳನ್ನು ವಿಚಾರಣೆ ನಡೆಸಿದ ಬಳಿಕ ಸಾರ್ವಜನಿಕ ವಿಚಾರಣೆ ಪ್ರಾರಂಭಿಸಲಾಗಿದೆ. ಅವರನ್ನು ನ್ಯಾಯಾಲಯದ ಆದೇಶದಂತೆ ಕಸ್ಟಡಿಯಲ್ಲಿ ಇರಿಸಲಾಗಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.
ಆರೋಪಿಗಳು ಯುಎಇಯ ವಿವಿಧ ಪ್ರದೇಶಗಳಲ್ಲಿ ಸ್ಫೋಟಗಳು ಹಾಗೂ ಪ್ರಮುಖ ಕಟ್ಟಡಗಳ ಮೇಲೆ ದಾಳಿಗಳು ನಡೆದಂತೆ ತೋರಿಸುವ ಕೃತಕ ಬುದ್ಧಿಮತ್ತೆ (AI) ಬಳಸಿ ತಯಾರಿಸಿದ ವಿಡಿಯೋಗಳು ಮತ್ತು ಚಿತ್ರಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಯುಎಇ ಕಾನೂನು ಪ್ರಕಾರ ಇಂತಹ ಅಪರಾಧಗಳಿಗೆ ಕನಿಷ್ಠ ಒಂದು ವರ್ಷ ಜೈಲು ಶಿಕ್ಷೆ ಹಾಗೂ ಕನಿಷ್ಠ 1,00,000 ದಿರ್ಹಮ್ (ಸುಮಾರು 25 ಲಕ್ಷ ರೂಪಾಯಿ) ದಂಡ ವಿಧಿಸುವ ವ್ಯವಸ್ಥೆ ಇದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am