ಬ್ರೇಕಿಂಗ್ ನ್ಯೂಸ್
16-03-26 02:44 pm HK News Staffer ದೇಶ - ವಿದೇಶ
ಅಬುಧಾಬಿ, ಮಾರ್ಚ್ 16: ಇರಾನ್ ಯುದ್ಧದ ಕುರಿತು ಸುಳ್ಳು ಮಾಹಿತಿ ಹರಡಿದ ಆರೋಪದ ಮೇಲೆ 19 ಭಾರತೀಯರು ಸೇರಿದಂತೆ ಒಟ್ಟು 35 ಮಂದಿಯನ್ನು ಬಂಧಿಸಲು ಯುಎಇ ಸರ್ಕಾರ ಆದೇಶ ಹೊರಡಿಸಿದ್ದು, ಈ ವಿಚಾರವನ್ನು ಯುಎಇ ಅಧಿಕಾರಿಗಳು ಅಧಿಕೃತವಾಗಿ ತಿಳಿಸಿದ್ದಾರೆ.
ತನಿಖೆ ವೇಳೆ ಆರೋಪಿಗಳು ಡಿಜಿಟಲ್ ಪ್ಲಾಟ್ಫಾರ್ಮ್ಗಳ ಮೂಲಕ ಪ್ರಾದೇಶಿಕ ಉದ್ವಿಗ್ನತೆಗೆ ಸಂಬಂಧಿಸಿದ ದೃಶ್ಯಾವಳಿಗಳು ಹಾಗೂ ತಪ್ಪು ನಿರೂಪಣೆಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರ ಮಾಡಿರುವುದು ಪತ್ತೆಯಾಗಿದೆ. ಜನರಲ್ಲಿ ಗೊಂದಲ ಹಾಗೂ ಪ್ರಚೋದನೆ ಉಂಟುಮಾಡುವ ಉದ್ದೇಶದಿಂದ ಈ ರೀತಿಯ ಸುಳ್ಳು ಮಾಹಿತಿಯನ್ನು ಹರಡಲಾಗಿದೆ ಎಂದು ಆರೋಪಿಸಲಾಗಿದೆ.
ಈ ಕುರಿತು ಮಾಹಿತಿ ನೀಡಿರುವ ಯುಎಇ ಅಟಾರ್ನಿ ಜನರಲ್ ಡಾ. ಹಮದ್ ಸೈಫ್ ಅಲ್ ಶಮ್ಸ್, ಡಿಜಿಟಲ್ ಪ್ಲಾಟ್ಫಾರ್ಮ್ಗಳ ಮೇಲ್ವಿಚಾರಣೆ ನಡೆಸಿದ ಬಳಿಕ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ. ಜೊತೆಗೆ ಆರೋಪಿಗಳು ತ್ವರಿತ ನ್ಯಾಯಾಲಯದಿಂದ ವಿಚಾರಣೆಯನ್ನು ಎದುರಿಸಬೇಕಾಗುತ್ತದೆ ಎಂದು ತಿಳಿಸಿದ್ದಾರೆ.

ಬಂಧನಕ್ಕೆ ಒಳಪಟ್ಟವರನ್ನು ಮೂರು ಗುಂಪುಗಳಾಗಿ ಪಟ್ಟಿ ಮಾಡಲಾಗಿದೆ. ಮೊದಲ ಗುಂಪಿನಲ್ಲಿ ಐವರು ಭಾರತೀಯರು, ಒಬ್ಬ ಪಾಕಿಸ್ತಾನಿ, ಒಬ್ಬ ನೇಪಾಳಿ, ಇಬ್ಬರು ಫಿಲಿಪಿನೋಗಳು ಹಾಗೂ ಒಬ್ಬ ಈಜಿಪ್ಟ್ ಮೂಲದ ವ್ಯಕ್ತಿ ಸೇರಿದ್ದಾರೆ. ಎರಡನೇ ಗುಂಪಿನಲ್ಲಿ ಐವರು ಭಾರತೀಯರು ಹಾಗೂ ನೇಪಾಳ ಮತ್ತು ಬಾಂಗ್ಲಾದೇಶದ ತಲಾ ಇಬ್ಬರು ಆರೋಪಿಗಳು ಇದ್ದಾರೆ. ಮೂರನೇ ಗುಂಪಿನಲ್ಲಿ ಐವರು ಭಾರತೀಯರು ಮತ್ತು ಒಬ್ಬ ಪಾಕಿಸ್ತಾನಿ ಇದ್ದಾರೆ. ಇದೇ ರೀತಿಯ ಅಪರಾಧ ಪ್ರಕರಣದಲ್ಲಿ ಮತ್ತಿಬ್ಬರು ಭಾರತೀಯರು ಸಹ ಆರೋಪಗಳನ್ನು ಎದುರಿಸುತ್ತಿದ್ದಾರೆ ಎನ್ನಲಾಗಿದೆ.
ಶನಿವಾರ 10 ಆರೋಪಿಗಳನ್ನು ವಿಚಾರಣೆ ನಡೆಸಿದ ಬಳಿಕ ಸಾರ್ವಜನಿಕ ವಿಚಾರಣೆ ಪ್ರಾರಂಭಿಸಲಾಗಿದೆ. ಅವರನ್ನು ನ್ಯಾಯಾಲಯದ ಆದೇಶದಂತೆ ಕಸ್ಟಡಿಯಲ್ಲಿ ಇರಿಸಲಾಗಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.
ಆರೋಪಿಗಳು ಯುಎಇಯ ವಿವಿಧ ಪ್ರದೇಶಗಳಲ್ಲಿ ಸ್ಫೋಟಗಳು ಹಾಗೂ ಪ್ರಮುಖ ಕಟ್ಟಡಗಳ ಮೇಲೆ ದಾಳಿಗಳು ನಡೆದಂತೆ ತೋರಿಸುವ ಕೃತಕ ಬುದ್ಧಿಮತ್ತೆ (AI) ಬಳಸಿ ತಯಾರಿಸಿದ ವಿಡಿಯೋಗಳು ಮತ್ತು ಚಿತ್ರಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಯುಎಇ ಕಾನೂನು ಪ್ರಕಾರ ಇಂತಹ ಅಪರಾಧಗಳಿಗೆ ಕನಿಷ್ಠ ಒಂದು ವರ್ಷ ಜೈಲು ಶಿಕ್ಷೆ ಹಾಗೂ ಕನಿಷ್ಠ 1,00,000 ದಿರ್ಹಮ್ (ಸುಮಾರು 25 ಲಕ್ಷ ರೂಪಾಯಿ) ದಂಡ ವಿಧಿಸುವ ವ್ಯವಸ್ಥೆ ಇದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
27-07-26 01:09 pm
HK News Staffer
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm