ಬ್ರೇಕಿಂಗ್ ನ್ಯೂಸ್
19-03-26 04:35 pm HK News Staffer ದೇಶ - ವಿದೇಶ
ನವದೆಹಲಿ, ಮಾರ್ಚ್ 19: ಇರಾನ್- ಅಮೆರಿಕ ಯುದ್ಧದಿಂದಾಗಿ ಹೊರ್ಮುಜ್ ಜಲಸಂಧಿಯಲ್ಲಿ ಉದ್ವಿಗ್ನ ಪರಿಸ್ಥಿತಿ ಮುಂದುವರಿದಿದ್ದು, ತೈಲ ಹೊತ್ತ ನೂರಾರು ಹಡಗುಗಳು ಅಲ್ಲಿ ಸಿಲುಕಿಕೊಂಡಿವೆ. ಭಾರತದ 22ಕ್ಕೂ ಹೆಚ್ಚು ಹಡಗುಗಳು ಪರ್ಷಿಯನ್ ಗಲ್ಫ್ ಪ್ರದೇಶದಲ್ಲಿ ಸಿಲುಕಿರುವುದಾಗಿ ಕೇಂದ್ರ ಸರ್ಕಾರದ ಶಿಪ್ಪಿಂಗ್ ಸಚಿವಾಲಯ ಮಾಹಿತಿ ನೀಡಿದೆ.
ಈಗಾಗಲೇ ‘ಶಿವಾಲಿಕ್’ ಮತ್ತು ‘ನಂದಾದೇವಿ’ ಹಡಗುಗಳು ಸೇರಿ ಸುಮಾರು 92 ಸಾವಿರ ಮೆಟ್ರಿಕ್ ಟನ್ ಎಲ್ಪಿಜಿಯನ್ನು ಭಾರತಕ್ಕೆ ತಲುಪಿಸಿವೆ. ‘ಜಗ್ ಲಾಡ್ಕಿ’ ಸೇರಿದಂತೆ ಇನ್ನೂ ಕೆಲವು ಹಡಗುಗಳು ಕಚ್ಚಾ ತೈಲವನ್ನು ಹೊತ್ತು ದೇಶ ತಲುಪುತ್ತಿದೆ. ಇದೇ ವೇಳೆ, ಅಲ್ಲಿ ಸಿಕ್ಕಿಬಿದ್ದ ಎಲ್ಲ ಹಡಗುಗಳನ್ನು ಸುರಕ್ಷಿತವಾಗಿ ಕರೆತರಲು ಭಾರತೀಯ ನೌಕಾಪಡೆ ಒಮಾನ್ ಗಲ್ಫ್ ಭಾಗದತ್ತ ಯುದ್ಧನೌಕೆಗಳನ್ನು ರವಾನಿಸಿದೆ ಎಂಬ ಮಾಹಿತಿಗಳಿವೆ.
ತೈಲ ಹಡಗುಗಳಿಗೆ ಎಸ್ಕಾರ್ಟ್ ನೀಡಲು 6ಕ್ಕೂ ಹೆಚ್ಚು ಯುದ್ಧನೌಕೆಗಳನ್ನು ನಿಯೋಜಿಸಲಾಗಿದೆ ಎಂದು ಕೆಲವು ಅಂತಾರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ. ಆದರೆ, ಈ ಕುರಿತು ಕೇಂದ್ರ ಸರ್ಕಾರ ಅಧಿಕೃತ ದೃಢೀಕರಣ ನೀಡಿಲ್ಲ. ಇದೇ ವೇಳೆ, ಹೊರ್ಮುಜ್ ಜಲಸಂಧಿ ಸಂಪೂರ್ಣವಾಗಿ ಬಂದ್ ಆಗಿಲ್ಲ ಎಂದು ಹೇಳಲಾಗುತ್ತಿದೆ. ಇರಾನ್ ಪ್ರತಿ ಹಡಗಿನ ದಾಖಲೆಗಳನ್ನು ಪರಿಶೀಲಿಸಿ ಬಳಿಕವೇ ಸಾಗಲು ಅನುಮತಿ ನೀಡುತ್ತಿದೆ. ಅಮೆರಿಕಕ್ಕೆ ಸಂಬಂಧಿಸಿದ ಹಡಗುಗಳನ್ನು ಮಾತ್ರ ತಡೆಯಲಾಗುತ್ತಿದೆ ಎಂಬ ಮಾಹಿತಿಯಿದೆ. ಭಾರತ ಸೇರಿದಂತೆ ಹಲವು ದೇಶಗಳ ಹಡಗುಗಳನ್ನು ಪರಿಶೀಲನೆ ಬಳಿಕ ಬಿಡುಗಡೆ ಮಾಡಲಾಗಿದೆ.
ಗ್ಯಾಸ್ ಕೊರತೆ ಬಗ್ಗೆ ಕೇಂದ್ರ ಸರ್ಕಾರ ಸ್ಪಷ್ಟನೆ:
ಇತ್ತ ದೇಶದಲ್ಲಿ ಗ್ಯಾಸ್ ಕೊರತೆ ಬಗ್ಗೆ ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಿದ್ದು, ಎಲ್ಪಿಜಿ ಉತ್ಪಾದನೆಯನ್ನು ಶೇಕಡಾ 40ರಷ್ಟು ಹೆಚ್ಚಿಸಲಾಗಿದೆ ಎಂದು ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯ ತಿಳಿಸಿದೆ. ಈಗಾಗಲೇ 15 ರಾಜ್ಯಗಳಲ್ಲಿ ಕಮರ್ಷಿಯಲ್ ಎಲ್ಪಿಜಿ ವಿತರಣೆ ಆರಂಭಗೊಂಡಿದ್ದು, ಸುಮಾರು 7,200 ಟನ್ ಅನಿಲವನ್ನು ಹೆಚ್ಚುವರಿಯಾಗಿ ಪೂರೈಸಲಾಗಿದೆ ಎಂದು ಇಲಾಖೆ ಜಂಟಿ ಕಾರ್ಯದರ್ಶಿ ಸುಜಾತಾ ಶರ್ಮಾ ಹೇಳಿದ್ದಾರೆ.
ಕಮರ್ಷಿಯಲ್ ಎಲ್ಪಿಜಿ ಸಿಗದೆ ಬೆಂಗಳೂರು ಸೇರಿದಂತೆ ಕರ್ನಾಟಕದ ಪ್ರಮುಖ ನಗರಗಳಲ್ಲಿ ತೀವ್ರ ಬಿಕ್ಕಟ್ಟಿನ ಸ್ಥಿತಿ ಎದುರಾಗಿದ್ದು ರೆಸ್ಟೋರೆಂಟ್, ಹೊಟೇಲುಗಳು ಬಂದ್ ಆಗಿವೆ. ರಾಜ್ಯದಲ್ಲಿ ದಿನಕ್ಕೆ ಒಂದು ಸಾವಿರ ಅಷ್ಟೇ ಕಮರ್ಷಿಯಲ್ ಗ್ಯಾಸ್ ಲಭ್ಯ ಇದೆ, ಅದನ್ನು ಯಾರಿಗಂತ ಕೊಡೋಕಾಗುತ್ತೆ. ರಾಜ್ಯದಲ್ಲಿ 40 ಸಾವಿರ ರೆಸ್ಟೋರೆಂಟ್ ಇದೆ ಎಂದು ಸಚಿವ ಮುನಿಯಪ್ಪ ಅಸಹಾಯಕತೆ ವ್ಯಕ್ತಪಡಿಸಿದ್ದಾರೆ.
19-03-26 05:01 pm
HK News Staffer
DG Ramachandra Rao, Sandesh PG: ರಕ್ಷಕರೇ ಭಕ್ಷಕ...
18-03-26 11:00 pm
Seraga Sarse Song: ಭಾರೀ ವಿವಾದಕ್ಕೀಡಾದ ಕೆಡಿ ಚಿತ...
18-03-26 09:44 pm
ಚಿಕ್ಕಮಗಳೂರು ; ಬಿಜೆಪಿ ಯುವ ಮೋರ್ಚಾದ ಜಿಲ್ಲಾಧ್ಯಕ್ಷ...
18-03-26 07:13 pm
ಸಂತ್ರಸ್ತೆ ದೂರು ಕೊಡಬೇಕಿಲ್ಲ, ಸುಮೊಟೋ ಕೇಸು ದಾಖಲಿಸ...
18-03-26 06:10 pm
19-03-26 04:51 pm
HK News Staffer
ಹೊರ್ಮುಜ್ ಜಲಸಂಧಿಯತ್ತ ಭಾರತ ನೌಕಾಪಡೆ ; ಗಲ್ಫ್ ನಲ್ಲ...
19-03-26 04:35 pm
ಖಾತೆಯಲ್ಲಿ ಕನಿಷ್ಠ ಬ್ಯಾಲೆನ್ಸ್ ಇಲ್ಲ ಎನ್ನುವುದೇ ಅಪ...
18-03-26 07:11 pm
ಎಲ್ಲರನ್ನೂ ಕ್ಷಮಿಸಿ ಬಿಡು..! ದಯಾಮರಣಕ್ಕೆ ಅನುಮತಿ ಪ...
16-03-26 11:05 pm
ಆರೆಸ್ಸೆಸ್ ಮತ್ತು ಗುಪ್ತಚರ ಸಂಸ್ಥೆ 'ರಾ' ಬ್ಯಾನ್ ಮಾ...
16-03-26 09:30 pm
19-03-26 05:27 pm
HK News Staffer
ಗ್ಯಾಸ್ ಬಿಲ್ ನಲ್ಲಿ 20 ರು. ಬಾಕಿ ಇದೆಯೆಂದು ಸೈಬರ್...
19-03-26 02:51 pm
ಮೂಡುಬಿದ್ರೆ ; ಕೋಳಿ ಅಂಕಕ್ಕೆ ಪೊಲೀಸ್ ದಾಳಿ, ಆರು ಮಂ...
19-03-26 01:05 pm
ಪಿಲಿಕುಳದಲ್ಲಿ ಏಳು ಮುದ್ದಾದ ಮಕ್ಕಳ ತಾಯಿಯಾದ 'ಗೀತಾ'...
18-03-26 10:42 pm
ಬೋಳೂರಿನಲ್ಲಿ ದೈವನರ್ತನ ಮಾಡಿದ್ದು ಕ್ರಿಸ್ತಿಯನ್ ಅಲ್...
18-03-26 03:38 pm
19-03-26 12:16 pm
HK News Staffer
Mangalore Crime: 9ರ ಹರೆಯದ ಬಾಲಕನಿಗೆ ಅಶ್ಲೀಲ ವೀಡ...
18-03-26 11:01 pm
Indian American Family Robbery: ಒಂದೇ ನಿಮಿಷದಲ್...
15-03-26 12:49 pm
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm