ಬ್ರೇಕಿಂಗ್ ನ್ಯೂಸ್
22-03-26 03:14 pm HK News Staffer ದೇಶ - ವಿದೇಶ
ಟೆಹ್ರಾನ್, ಮಾರ್ಚ್ 22: ಅಮೆರಿಕ- ಇಸ್ರೇಲ್ ದಾಳಿಯಲ್ಲಿ ತನ್ನ ನಟಾಂಜಾ ಪರಮಾಣು ಸ್ಥಾವರವನ್ನು ಗುರಿಯಾಗಿಸಿದ್ದಕ್ಕೆ ಇರಾನ್ ಕೂಡ ಇಸ್ರೇಲ್ ನ್ಯೂಕ್ಲಿಯರ್ ರಿಯಾಕ್ಟರ್ ಗುರಿಯಾಗಿಸಿ ದಾಳಿ ನಡೆಸಿದೆ. ಶನಿವಾರ ರಾತ್ರಿ ಮಿಸೈಲ್ ದಾಳಿ ನಡೆಸಿರುವ ಇರಾನ್, ಇಸ್ರೇಲ್ ನಲ್ಲಿರುವ ಪ್ರಮುಖ ಅಣು ಸ್ಥಾವರ ಡಿಮೋನಾ ಮತ್ತು ಅರಾದ್ ನಲ್ಲಿ ಭಾರೀ ನಷ್ಟ ಉಂಟು ಮಾಡಿದೆ.
ಮುಯ್ಯಿಗೆ ಮುಯ್ಯಿ ಎನ್ನುವಂತೆ ಇರಾನ್, ಡಿಮೋನಾದಲ್ಲಿರುವ ಶಿಮೋನ್ ಪೆರೇಸ್ ನೆಗೆವ್ ನ್ಯೂಕ್ಲಿಯರ್ ರೀಸರ್ಚ್ ಸೆಂಟರ್ ಮತ್ತು ಅರಾದ್ ನ್ಯೂಕ್ಲಿಯರ್ ಘಟಕದ ಮೇಲೆ ದಾಳಿ ನಡೆಸಿದೆ. ಅಲ್ಲಿರುವ ಜನವಸತಿ ಕಟ್ಟಡಗಳು ಮತ್ತು ಇತರ ಕಟ್ಟಡಗಳ ಮೇಲೆ ಎರಡು ಬ್ಯಾಲಿಸ್ಟಿಕ್ ಮಿಸೈಲ್ ಅಪ್ಪಳಿಸಿದ್ದು ನೂರಕ್ಕೂ ಹೆಚ್ಚು ಮಂದಿ ತೀವ್ರ ಗಾಯಗೊಂಡಿದ್ದಾರೆ. ಮಿಸೈಲ್ ವಿರೋಧಿ ವ್ಯವಸ್ಥೆಯ ಹೊರತಾಗಿಯೂ ಎರಡು ಕ್ಷಿಪಣಿಗಳು ಶನಿವಾರ ರಾತ್ರಿ ನೇರವಾಗಿ ಬಂದು ಬಿದ್ದಿದ್ದು ಇಸ್ರೇಲ್ ದೊಡ್ಡ ಮಟ್ಟದ ಹಾನಿ ಅನುಭವಿಸಿದೆ. ಮಾಹಿತಿ ಪ್ರಕಾರ, ಅರಾದ್ ನಲ್ಲಿ 84 ಜನ ಗಾಯಗೊಂಡಿದ್ದು, ಅದರಲ್ಲಿ 10 ಮಂದಿ ತೀವ್ರ ಗಾಯಗೊಂಡಿದ್ದಾರೆ. ಡಿಮೋನಾದಲ್ಲಿ 33 ಮಂದಿ ಗಾಯಗೊಂಡಿದ್ದಾರೆ.
ಕಟ್ಟಡ ಪೂರ್ತಿ ನಾಶಗೊಂಡಿರುವುದರಿಂದ ದೊಡ್ಡ ಮಟ್ಟದ ಹಾನಿಯಾಗಿರುವ ಬಗ್ಗೆ ಶಂಕೆಯಿದೆ. ಮಿಸೈಲ್ ದಾಳಿಯಾಗಿರುವ ವಿಡಿಯೋ ಜಾಲತಾಣದಲ್ಲಿ ವೈರಲ್ ಆಗಿದ್ದು, ಆಕಾಶದಿಂದ ಬೆಂಕಿಯುಂಡೆ ನುಗ್ಗಿ ಬಂದಿರುವಂತೆ ತೋರಿದೆ. ದಾಳಿ ಘಟನೆಯನ್ನು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು, ಈ ದಿನ ಭಾರೀ ಕಷ್ಟದ ಸಂಜೆಯಾಗಿತ್ತು ಎಂದು ಹೇಳಿದ್ದಾರೆ. ತುರ್ತು ರಕ್ಷಣಾ ಕ್ರಮಗಳನ್ನು ಕೈಗೊಂಡಿದ್ದು ಜನರು ಭದ್ರತಾ ಪಡೆಗಳ ಸೂಚನೆಯನ್ನು ಪಾಲಿಸಬೇಕೆಂದು ಸೂಚಿಸಿದ್ದಾರೆ. ಇದೇ ವೇಳೆ, ಶತ್ರುಗಳ ಮೇಲಿನ ದಾಳಿಯು ಇನ್ನಷ್ಟು ತೀವ್ರಗೊಳ್ಳಲಿದೆ ಎಂದವರು ಹೇಳಿದ್ದಾರೆ.


ಶನಿವಾರ ಇರಾನ್ ದೇಶದ ಅತಿದೊಡ್ಡ ಪರಮಾಣು ರಿಯಾಕ್ಟರ್ ಇರುವ ನಟಾಂಜ್ ಮೇಲೆ ಅಮೆರಿಕ ದಾಳಿ ನಡೆಸಿತ್ತು. ಯುದ್ಧ ಮೊದಲ್ಗೊಂಡ 22 ದಿನಗಳ ಬಳಿಕ ಮೊದಲ ಬಾರಿಗೆ ಅಮೆರಿಕ ನ್ಯೂಕ್ಲಿಯರ್ ಸ್ಥಾವರಗಳನ್ನು ಗುರಿಯಾಗಿಸಿತ್ತು. ಘಟನೆಯಲ್ಲಿ ಹಲವಾರು ಕಟ್ಟಡಗಳಿಗೆ ಹಾನಿಯಾಗಿದ್ದರೂ, ಅಣು ಸ್ಥಾವರಕ್ಕೆ ಹಾನಿಯಾಗಿಲ್ಲ, ಅದರಿಂದ ವಿಕಿರಣ ಹೊರಬಂದಿಲ್ಲ ಎಂದು ವಿಶ್ವಸಂಸ್ಥೆ ಹೇಳಿದೆ.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am