ಬ್ರೇಕಿಂಗ್ ನ್ಯೂಸ್
24-03-26 12:10 pm HK News Staffer ದೇಶ - ವಿದೇಶ
ಟೆಹ್ರಾನ್, ಮಾರ್ಚ್ 24: ಅಮೆರಿಕ ಮತ್ತು ಇಸ್ರೇಲ್ ವಿರುದ್ಧ ಇರಾನ್ ನಿಂದ ಕಠಿಣ ಬೆದರಿಕೆಗಳು ಹೊರಬಂದಿವೆ. ‘ನಮ್ಮ ವಿದ್ಯುತ್ ಘಟಕಗಳಿಗೆ ದಾಳಿ ಮಾಡಿದರೆ, ನಾವು ಸಹ ಅದನ್ನೇ ಮಾಡುತ್ತೇವೆ. ಕರಾವಳಿ ಮತ್ತು ದ್ವೀಪಗಳನ್ನು ಗುರಿಯಾಗಿಸಿದರೆ, ಪರ್ಶಿಯನ್ ಕೊಲ್ಲಿಯಲ್ಲಿ ಸಮುದ್ರ ಸ್ಫೋಟಕಗಳನ್ನು ಅಳವಡಿಸುತ್ತೇವೆ’ ಎಂದು ಇರಾನ್ ರೆವಲ್ಯೂಷನರಿ ಗಾರ್ಡ್ಸ್ ಕೋರ್ ಸ್ಪಷ್ಟಪಡಿಸಿದೆ.
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ 48 ಗಂಟೆಯೊಳಗೆ ಹೋರ್ಮುಜ್ ಜಲಸಂಧಿಯನ್ನು ಮುಕ್ತಗೊಳಿಸುವಂತೆ ಬೆದರಿಕೆ ನೀಡಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ಇರಾನ್, “ನಮ್ಮ ವಿದ್ಯುತ್ ಘಟಕಗಳಿಗೆ ಹಾನಿ ಮಾಡಿದರೆ ಪ್ರತಿದಾಳಿ ಖಚಿತ” ಎಂದು ತಿಳಿಸಿದೆ. ಇರಾನ್ ರಕ್ಷಣಾ ಮಂಡಳಿಯು ಕರಾವಳಿ ಮತ್ತು ದ್ವೀಪಗಳ ಮೇಲೆ ದಾಳಿ ಮಾಡಲು ಯತ್ನಿಸಿದರೆ, ಎಲ್ಲಾ ಪ್ರವೇಶ ಮಾರ್ಗಗಳಲ್ಲಿ ಸ್ಫೋಟಕಗಳ ಹಾನಿ ಸಂಭವಿಸಲಿದೆ ಎಂದು ಎಚ್ಚರಿಸಿದೆ.
ಇರಾನ್ ವಿದೇಶಾಂಗ ಇಲಾಖೆ ಮತ್ತು ಸಂಸತ್ತಿನ ಸ್ಪೀಕರ್ ಮೊಹಮ್ಮದ್ ಬಾಘೇರ್ ಈ ಸಂದರ್ಭ ಯಾವುದೇ ಅಮೆರಿಕ–ಇರಾನ್ ಮಾತುಕತೆ ನಡೆದಿಲ್ಲ ಎಂದು ಹೇಳಿದ್ದು, ಅಮೆರಿಕದ ಹೇಳಿಕೆ ‘ಇಂಧನ ಬೆಲೆ ನಿಯಂತ್ರಣ ತಂತ್ರ’ ಮಾತ್ರ ಎಂದು ಹೇಳಿದ್ದಾರೆ.
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ರ 5 ದಿನದ ಕದನವಿರಾಮ ಹೇಳಿಕೆಗೆ ಪ್ರತಿಕ್ರಿಯಿಸಿರುವ ಇರಾನ್ ವಿದೇಶಾಂಗ ಸಚಿವಾಲಯ, ‘ಟೆಹ್ರಾನ್ ಮತ್ತು ವಾಷಿಂಗ್ಟನ್ ನಡುವೆ ಯಾವುದೇ ಮಾತುಕತೆಗಳು ನಡೆದಿಲ್ಲ. ಟ್ರಂಪ್ ಅವರ ಹೇಳಿಕೆಯು, ಏರುತ್ತಿರುವ ಇಂಧನ ಬೆಲೆಗಳನ್ನು ಕಡಿಮೆ ಮಾಡುವ ತಂತ್ರವಾಗಿದೆ’ ಎಂದು ಸ್ಪಷ್ಟಪಡಿಸಿದೆ. ಇದಕ್ಕೂ ಮುನ್ನ, ’ಇರಾನ್ನ ಪ್ರತಿದಾಳಿ ಬೆದರಿಕೆಗೆ ಬಗ್ಗಿ ಟ್ರಂಪ್ ಕದನವಿರಾಮದ ಮಾತು ಆಡಿದ್ದಾರೆ’ ಎಂದು ಇರಾನ್ ಸರ್ಕಾರಿ ಟಿವಿ ವರದಿ ಮಾಡಿತ್ತು.
ಈ ನಡುವೆ ಭಾರತೀಯ ಧ್ವಜ ಹೊತ್ತ ಎಲ್ಪಿಜಿ ಹಡಗುಗಳು ಪರ್ಶಿಯನ್ ಕೊಲ್ಲಿಯಿಂದ ಭಾರತಕ್ಕೆ ಪ್ರಯಾಣ ಆರಂಭಿಸಿವೆ. ಲಾರ್ಕ್ ಮತ್ತು ಕೆಶ್ಮ್ ದ್ವೀಪಗಳ ಹತ್ತಿರ ಹಡಗುಗಳು ಸಾಗುತ್ತಿದ್ದು, ಹೋರ್ಮುಜ್ ದಾಟುವ ಮೊದಲು ಇರಾನಿನ ಅಧಿಕಾರಿಗಳಿಗೆ ಗುರುತಿನ ಮಾಹಿತಿ ನೀಡಲು ನಿಧಾನಿಸಬಹುದೆಂದು ತಿಳಿಯುತ್ತಿದೆ. ಶಿವಾಲಿಕ್, ನಂದಾದೇವಿ, ಜಗ್ ಲಾಡ್ಕಿ ಮತ್ತು ಜಗ್ ಪ್ರಕಾಶ್ ಹಡಗುಗಳು ಈಗಾಗಲೇ ಭಾರತದತ್ತ ಸಾಗಿವೆ.
14-04-26 02:04 pm
HK News Staffer
ಸುಳ್ಯದಲ್ಲಿ ಪಾಳು ಬಾವಿಗೆ ಬಿದ್ದ ಕಾಡಾನೆ; ಅಡ್ಡಲಾಗಿ...
13-04-26 09:49 pm
ಕುಂದಾಪುರದ 111 ವರ್ಷಗಳ ಸರ್ಕಾರಿ ಶಾಲೆಗೆ ಬಂತು ಎಐ ರ...
13-04-26 08:19 pm
ದಾವಣಗೆರೆ ದಕ್ಷಿಣದಲ್ಲಿ ಪ್ರಚಾರದಿಂದ ದೂರ; ಸಿಎಂ ರಾಜ...
13-04-26 04:20 pm
ಪಿಗ್ಮಿ ಏಜೆಂಟರು ಮಧ್ಯವರ್ತಿಗಳಲ್ಲ, ಬ್ಯಾಂಕುಗಳ ನೌಕರ...
12-04-26 07:58 pm
14-04-26 01:46 pm
HK News Staffer
ಟಿಸಿಎಸ್ ಕಂಪನಿಯಲ್ಲಿ ಹೈಫೈ ಜಿಹಾದ್; ಸೆಕ್ಸ್ ದಂಧೆ,...
13-04-26 10:35 pm
ಬಾಂಗ್ಲಾದಲ್ಲಿ ಮುಸ್ಲಿಂ ಯುವಕರಿಂದಲೇ ಇಬ್ಬರು ಧರ್ಮಗು...
13-04-26 09:07 pm
ಅಮೆರಿಕ- ಇರಾನ್ ಸಂಧಾನ ಯಶಸ್ವಿಯಾಗ್ತಿತ್ತು, ನೆತನ್ಯ...
13-04-26 01:27 pm
ಹೊರ್ಮುಜ್ ಜಲಸಂಧಿಯನ್ನು ನಾವೇ ತಡೆಯುತ್ತೇವೆ, ಅಣ್ವಸ್...
12-04-26 10:59 pm
13-04-26 11:39 pm
Mangalore Correspondent
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
14-04-26 11:52 am
HK News Staffer
ನಂತೂರು ಭೀಕರ ಅಪಘಾತ ; ಬೈಕ್ ಸವಾರನ ಧಾವಂತಕ್ಕೆ ರಸ್ತ...
14-04-26 11:14 am
ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಪತ್ನಿ ಸೌಮ್ಯಾ ಶೆಟ...
11-04-26 11:14 pm
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm