ಬ್ರೇಕಿಂಗ್ ನ್ಯೂಸ್
26-03-26 09:00 pm HK News Staffer ದೇಶ - ವಿದೇಶ
ಟೆಹ್ರಾನ್, ಮಾರ್ಚ್ 26 : ಇರಾನ್ ಮೇಲೆ ಇಸ್ರೇಲ್ ದಾಳಿ ಮುಂದುವರಿಸಿದ್ದು ಐಆರ್ ಜಿಸಿ ನೌಕಾ ಪಡೆಯ ಮುಖ್ಯಸ್ಥ ಅಲಿರೆಜಾ ತಂಗ್ಸಿರಿ ಅವರನ್ನು ಹತ್ಯೆ ಮಾಡಲಾಗಿದೆ ಎಂದು ಇಸ್ರೇಲಿ ಸೇನಾಧಿಕಾರಿಗಳು ತಿಳಿಸಿದ್ದಾರೆ, ಹೊರ್ಮುಜ್ ಜಲಸಂಧಿಯಲ್ಲಿ ನೂರಾರು ಹಡಗುಗಳನ್ನು ತಡೆಯುವಲ್ಲಿ ಅಲಿರೆಜಾ ಅವರದೇ ನಿರ್ಧಾರ ಪ್ರಮುಖವಾಗಿತ್ತು.
ಇರಾನ್ ಬಂದರು ಅಬ್ಬಾಸ್ನಲ್ಲಿ ನಡೆದ ದಾಳಿಯಲ್ಲಿ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ ನೌಕಾಪಡೆಯ ಕಮಾಂಡರ್ ಅಲಿರೆಜಾ ತಂಗ್ಸಿರಿ ಸಾವನ್ನಪ್ಪಿದ್ದಾರೆ ಎಂದು ಇಸ್ರೇಲಿ ಅಧಿಕಾರಿಯೊಬ್ಬರು ಸ್ಥಳೀಯ ಮಾಧ್ಯಮಕ್ಕೆ ತಿಳಿಸಿದ್ದಾರೆ. ಹಾರ್ಮುಜ್ ಜಲಸಂಧಿಯ ಮುಚ್ಚುವಿಕೆಗೆ ತಂಗ್ಸಿರಿ ಅವರೇ ಕಾರಣ ಎಂದು ಅಧಿಕಾರಿಗಳನ್ನು ಉಲ್ಲೇಖಿಸಿ ಟೈಮ್ಸ್ ಆಫ್ ಇಸ್ರೇಲ್ ವರದಿ ಮಾಡಿದೆ.
ಈ ಬಗ್ಗೆ ಇರಾನ್ನಿಂದ ತಕ್ಷಣದ ದೃಢೀಕರಣ ಬಂದಿಲ್ಲ ಮತ್ತು ಇಸ್ರೇಲ್ ರಕ್ಷಣಾ ಪಡೆಗಳು ವರದಿಯಾದ ದಾಳಿಯ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಈ ಹತ್ಯೆ ದೃಢಪಟ್ಟರೆ, ಇರಾನ್ ಮಿಲಿಟರಿ ನಾಯಕತ್ವಕ್ಕೆ, ವಿಶೇಷವಾಗಿ ಕಾರ್ಯತಂತ್ರದ ಮಹತ್ವದ ಪರ್ಷಿಯನ್ ಕೊಲ್ಲಿಯಲ್ಲಿನ ಅದರ ನೌಕಾ ಕಾರ್ಯಾಚರಣೆಗಳಿಗೆ ದೊಡ್ಡ ಹೊಡೆತ ಬೀಳಲಿದೆ.
ಅಲಿರೇಜಾ ತಂಗ್ಸಿರಿ ಯಾರು?
ದಕ್ಷಿಣ ಇರಾನ್ನ ಬುಶೆಹರ್ ಪ್ರಾಂತ್ಯದಲ್ಲಿ ಜನಿಸಿದ ಅಲಿರೆಜಾ ತಂಗ್ಸಿರಿ, ಇರಾನ್-ಇರಾಕ್ ಯುದ್ಧ ಮತ್ತು 1980 ರ ದಶಕದಲ್ಲಿ ಇರಾನ್ನೊಂದಿಗೆ ಯುನೈಟೆಡ್ ಸ್ಟೇಟ್ಸ್ನ ಮೊದಲ ಸಂಘರ್ಷವಾದ ಟ್ಯಾಂಕರ್ ಯುದ್ಧಗಳ ಸಮಯದಲ್ಲಿ ಸೇವೆ ಸಲ್ಲಿಸಿದ್ದರು. ನಂತರ IRGC ನೌಕಾಪಡೆಗೆ ನೇಮಕವಾಗಿದ್ದರು. ಆಬಳಿಕ ತಂಗ್ಸಿರಿ ಬಂದರ್ ಅಬ್ಬಾಸ್ನಲ್ಲಿರುವ ಐಆರ್ಜಿಸಿ ನೌಕಾಪಡೆಯ 1ನೇ ನೌಕಾ ಜಿಲ್ಲೆಗೆ 2010 ರಿಂದ 2018ರ ವರೆಗೆ ಉಪ ಕಮಾಂಡರ್ ಆಗಿ ಸೇವೆ ಸಲ್ಲಿಸಿದ್ದು ನಂತರ ನೌಕಾ ಪಡೆಯ ಮುಖ್ಯಸ್ಥರಾಗಿದ್ದರು.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am