ಬ್ರೇಕಿಂಗ್ ನ್ಯೂಸ್
26-03-26 09:00 pm HK News Staffer ದೇಶ - ವಿದೇಶ
ಟೆಹ್ರಾನ್, ಮಾರ್ಚ್ 26 : ಇರಾನ್ ಮೇಲೆ ಇಸ್ರೇಲ್ ದಾಳಿ ಮುಂದುವರಿಸಿದ್ದು ಐಆರ್ ಜಿಸಿ ನೌಕಾ ಪಡೆಯ ಮುಖ್ಯಸ್ಥ ಅಲಿರೆಜಾ ತಂಗ್ಸಿರಿ ಅವರನ್ನು ಹತ್ಯೆ ಮಾಡಲಾಗಿದೆ ಎಂದು ಇಸ್ರೇಲಿ ಸೇನಾಧಿಕಾರಿಗಳು ತಿಳಿಸಿದ್ದಾರೆ, ಹೊರ್ಮುಜ್ ಜಲಸಂಧಿಯಲ್ಲಿ ನೂರಾರು ಹಡಗುಗಳನ್ನು ತಡೆಯುವಲ್ಲಿ ಅಲಿರೆಜಾ ಅವರದೇ ನಿರ್ಧಾರ ಪ್ರಮುಖವಾಗಿತ್ತು.
ಇರಾನ್ ಬಂದರು ಅಬ್ಬಾಸ್ನಲ್ಲಿ ನಡೆದ ದಾಳಿಯಲ್ಲಿ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ ನೌಕಾಪಡೆಯ ಕಮಾಂಡರ್ ಅಲಿರೆಜಾ ತಂಗ್ಸಿರಿ ಸಾವನ್ನಪ್ಪಿದ್ದಾರೆ ಎಂದು ಇಸ್ರೇಲಿ ಅಧಿಕಾರಿಯೊಬ್ಬರು ಸ್ಥಳೀಯ ಮಾಧ್ಯಮಕ್ಕೆ ತಿಳಿಸಿದ್ದಾರೆ. ಹಾರ್ಮುಜ್ ಜಲಸಂಧಿಯ ಮುಚ್ಚುವಿಕೆಗೆ ತಂಗ್ಸಿರಿ ಅವರೇ ಕಾರಣ ಎಂದು ಅಧಿಕಾರಿಗಳನ್ನು ಉಲ್ಲೇಖಿಸಿ ಟೈಮ್ಸ್ ಆಫ್ ಇಸ್ರೇಲ್ ವರದಿ ಮಾಡಿದೆ.
ಈ ಬಗ್ಗೆ ಇರಾನ್ನಿಂದ ತಕ್ಷಣದ ದೃಢೀಕರಣ ಬಂದಿಲ್ಲ ಮತ್ತು ಇಸ್ರೇಲ್ ರಕ್ಷಣಾ ಪಡೆಗಳು ವರದಿಯಾದ ದಾಳಿಯ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಈ ಹತ್ಯೆ ದೃಢಪಟ್ಟರೆ, ಇರಾನ್ ಮಿಲಿಟರಿ ನಾಯಕತ್ವಕ್ಕೆ, ವಿಶೇಷವಾಗಿ ಕಾರ್ಯತಂತ್ರದ ಮಹತ್ವದ ಪರ್ಷಿಯನ್ ಕೊಲ್ಲಿಯಲ್ಲಿನ ಅದರ ನೌಕಾ ಕಾರ್ಯಾಚರಣೆಗಳಿಗೆ ದೊಡ್ಡ ಹೊಡೆತ ಬೀಳಲಿದೆ.
ಅಲಿರೇಜಾ ತಂಗ್ಸಿರಿ ಯಾರು?
ದಕ್ಷಿಣ ಇರಾನ್ನ ಬುಶೆಹರ್ ಪ್ರಾಂತ್ಯದಲ್ಲಿ ಜನಿಸಿದ ಅಲಿರೆಜಾ ತಂಗ್ಸಿರಿ, ಇರಾನ್-ಇರಾಕ್ ಯುದ್ಧ ಮತ್ತು 1980 ರ ದಶಕದಲ್ಲಿ ಇರಾನ್ನೊಂದಿಗೆ ಯುನೈಟೆಡ್ ಸ್ಟೇಟ್ಸ್ನ ಮೊದಲ ಸಂಘರ್ಷವಾದ ಟ್ಯಾಂಕರ್ ಯುದ್ಧಗಳ ಸಮಯದಲ್ಲಿ ಸೇವೆ ಸಲ್ಲಿಸಿದ್ದರು. ನಂತರ IRGC ನೌಕಾಪಡೆಗೆ ನೇಮಕವಾಗಿದ್ದರು. ಆಬಳಿಕ ತಂಗ್ಸಿರಿ ಬಂದರ್ ಅಬ್ಬಾಸ್ನಲ್ಲಿರುವ ಐಆರ್ಜಿಸಿ ನೌಕಾಪಡೆಯ 1ನೇ ನೌಕಾ ಜಿಲ್ಲೆಗೆ 2010 ರಿಂದ 2018ರ ವರೆಗೆ ಉಪ ಕಮಾಂಡರ್ ಆಗಿ ಸೇವೆ ಸಲ್ಲಿಸಿದ್ದು ನಂತರ ನೌಕಾ ಪಡೆಯ ಮುಖ್ಯಸ್ಥರಾಗಿದ್ದರು.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
27-07-26 01:09 pm
HK News Staffer
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm