ಬ್ರೇಕಿಂಗ್ ನ್ಯೂಸ್
26-03-26 09:00 pm HK News Staffer ದೇಶ - ವಿದೇಶ
ಟೆಹ್ರಾನ್, ಮಾರ್ಚ್ 26 : ಇರಾನ್ ಮೇಲೆ ಇಸ್ರೇಲ್ ದಾಳಿ ಮುಂದುವರಿಸಿದ್ದು ಐಆರ್ ಜಿಸಿ ನೌಕಾ ಪಡೆಯ ಮುಖ್ಯಸ್ಥ ಅಲಿರೆಜಾ ತಂಗ್ಸಿರಿ ಅವರನ್ನು ಹತ್ಯೆ ಮಾಡಲಾಗಿದೆ ಎಂದು ಇಸ್ರೇಲಿ ಸೇನಾಧಿಕಾರಿಗಳು ತಿಳಿಸಿದ್ದಾರೆ, ಹೊರ್ಮುಜ್ ಜಲಸಂಧಿಯಲ್ಲಿ ನೂರಾರು ಹಡಗುಗಳನ್ನು ತಡೆಯುವಲ್ಲಿ ಅಲಿರೆಜಾ ಅವರದೇ ನಿರ್ಧಾರ ಪ್ರಮುಖವಾಗಿತ್ತು.
ಇರಾನ್ ಬಂದರು ಅಬ್ಬಾಸ್ನಲ್ಲಿ ನಡೆದ ದಾಳಿಯಲ್ಲಿ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ ನೌಕಾಪಡೆಯ ಕಮಾಂಡರ್ ಅಲಿರೆಜಾ ತಂಗ್ಸಿರಿ ಸಾವನ್ನಪ್ಪಿದ್ದಾರೆ ಎಂದು ಇಸ್ರೇಲಿ ಅಧಿಕಾರಿಯೊಬ್ಬರು ಸ್ಥಳೀಯ ಮಾಧ್ಯಮಕ್ಕೆ ತಿಳಿಸಿದ್ದಾರೆ. ಹಾರ್ಮುಜ್ ಜಲಸಂಧಿಯ ಮುಚ್ಚುವಿಕೆಗೆ ತಂಗ್ಸಿರಿ ಅವರೇ ಕಾರಣ ಎಂದು ಅಧಿಕಾರಿಗಳನ್ನು ಉಲ್ಲೇಖಿಸಿ ಟೈಮ್ಸ್ ಆಫ್ ಇಸ್ರೇಲ್ ವರದಿ ಮಾಡಿದೆ.
ಈ ಬಗ್ಗೆ ಇರಾನ್ನಿಂದ ತಕ್ಷಣದ ದೃಢೀಕರಣ ಬಂದಿಲ್ಲ ಮತ್ತು ಇಸ್ರೇಲ್ ರಕ್ಷಣಾ ಪಡೆಗಳು ವರದಿಯಾದ ದಾಳಿಯ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಈ ಹತ್ಯೆ ದೃಢಪಟ್ಟರೆ, ಇರಾನ್ ಮಿಲಿಟರಿ ನಾಯಕತ್ವಕ್ಕೆ, ವಿಶೇಷವಾಗಿ ಕಾರ್ಯತಂತ್ರದ ಮಹತ್ವದ ಪರ್ಷಿಯನ್ ಕೊಲ್ಲಿಯಲ್ಲಿನ ಅದರ ನೌಕಾ ಕಾರ್ಯಾಚರಣೆಗಳಿಗೆ ದೊಡ್ಡ ಹೊಡೆತ ಬೀಳಲಿದೆ.
ಅಲಿರೇಜಾ ತಂಗ್ಸಿರಿ ಯಾರು?
ದಕ್ಷಿಣ ಇರಾನ್ನ ಬುಶೆಹರ್ ಪ್ರಾಂತ್ಯದಲ್ಲಿ ಜನಿಸಿದ ಅಲಿರೆಜಾ ತಂಗ್ಸಿರಿ, ಇರಾನ್-ಇರಾಕ್ ಯುದ್ಧ ಮತ್ತು 1980 ರ ದಶಕದಲ್ಲಿ ಇರಾನ್ನೊಂದಿಗೆ ಯುನೈಟೆಡ್ ಸ್ಟೇಟ್ಸ್ನ ಮೊದಲ ಸಂಘರ್ಷವಾದ ಟ್ಯಾಂಕರ್ ಯುದ್ಧಗಳ ಸಮಯದಲ್ಲಿ ಸೇವೆ ಸಲ್ಲಿಸಿದ್ದರು. ನಂತರ IRGC ನೌಕಾಪಡೆಗೆ ನೇಮಕವಾಗಿದ್ದರು. ಆಬಳಿಕ ತಂಗ್ಸಿರಿ ಬಂದರ್ ಅಬ್ಬಾಸ್ನಲ್ಲಿರುವ ಐಆರ್ಜಿಸಿ ನೌಕಾಪಡೆಯ 1ನೇ ನೌಕಾ ಜಿಲ್ಲೆಗೆ 2010 ರಿಂದ 2018ರ ವರೆಗೆ ಉಪ ಕಮಾಂಡರ್ ಆಗಿ ಸೇವೆ ಸಲ್ಲಿಸಿದ್ದು ನಂತರ ನೌಕಾ ಪಡೆಯ ಮುಖ್ಯಸ್ಥರಾಗಿದ್ದರು.
26-03-26 10:27 pm
HK News Staffer
ಕ್ಲಾಸ್ ರೂಮಿನಲ್ಲೇ ವಿದ್ಯಾರ್ಥಿನಿಗೆ ಪ್ರಪೋಸ್ ಮಾಡಿದ...
26-03-26 09:21 pm
ಬಾಂಗ್ಲಾದೇಶದಲ್ಲಿ ನದಿಗೆ ಉರುಳಿ ಬಿದ್ದ ಬಸ್ ; 23 ಮಂ...
26-03-26 12:31 pm
ಆಂಧ್ರಪ್ರದೇಶ ; ಖಾಸಗಿ ಬಸ್- ಜಲ್ಲಿ ತುಂಬಿದ ಲಾರಿ ಮು...
26-03-26 11:14 am
ಮುಂದಿನ ಲೋಕಸಭೆ ವೇಳೆಗೆ 543 ಸ್ಥಾನ 816ಕ್ಕೆ ಹೆಚ್ಚಳ...
25-03-26 09:32 pm
26-03-26 09:44 pm
HK News Staffer
ಹೊರ್ಮುಜ್ ಜಲಸಂಧಿ ನಿರ್ಬಂಧಿಸಿದ್ದ ಇರಾನ್ ನೌಕಾಪಡೆ ಮ...
26-03-26 09:00 pm
ಮಂಗಳೂರಿಗೆ ಮತ್ತೆರಡು ಬೃಹತ್ ತೈಲ ಟ್ಯಾಂಕರ್ ಹಡಗು ;...
26-03-26 09:31 am
ಅಮೆರಿಕ- ಇರಾನ್ ಶಾಂತಿ ಮಾತುಕತೆ; ಯುದ್ಧ ನಿಲ್ಲಿಸಲು...
25-03-26 06:15 pm
ಟ್ರಂಪ್ ಯುದ್ಧ ವಿರಾಮ ನಡುವೆಯೂ ಇಸ್ರೇಲ್ ದಾಳಿ ಮುಂದು...
24-03-26 04:43 pm
26-03-26 10:29 pm
HK News Staffer
ನವ ಮಂಗಳೂರು ಬಂದರು ಸ್ಥಾಪನೆಗೊಂಡ ಬಳಿಕ 40 ಸಾವಿರ ಹಡ...
26-03-26 07:19 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; ಸಾಮಾಜಿಕ ಜಾಲತಾಣದಲ್...
25-03-26 08:44 pm
ಭಾರತೀಯ ನೌಕಾಪಡೆ ರಕ್ಷಣೆ, ಆತಂಕದಿಂದ ಪಾರಾಗಿದ್ದೇವೆ...
25-03-26 05:23 pm
ಟೋಲ್ ಪ್ಲಾಜಾಗಳ ಮೇಲ್ಛಾವಣಿಯಲ್ಲಿ ಸೌರ ವಿದ್ಯುತ್ ಘಟಕ...
25-03-26 03:49 pm
26-03-26 06:48 pm
HK News Staffer
ಮೂಡುಬಿದ್ರೆ ಸಂದೇಶ್ ಕೇಸ್ ಬೆನ್ನಲ್ಲೇ ಬೆಂಗಳೂರಿನಲ್ಲ...
26-03-26 03:12 pm
ಪ್ರೇಮದ ನಾಟಕವಾಡಿ ವೈದ್ಯೆಯನ್ನೇ 'ಜೀವಂತ ಶವ' ಮಾಡಿದ್...
26-03-26 09:28 am
ಮದುವೆಯಾಗೋದಾಗಿ ನಂಬಿಸಿ ಮೋಸ ; ನೀನು ನಂಗೆ ದೈಹಿಕ ತೃ...
24-03-26 02:04 pm
ಸಾಮಾಜಿಕ ಜಾಲತಾಣದಲ್ಲಿ ಕೋಮುದ್ವೇಷ ಪ್ರಚೋದಿಸುವ ವಿಡಿ...
23-03-26 09:44 pm