ಬ್ರೇಕಿಂಗ್ ನ್ಯೂಸ್
27-03-26 12:11 pm HK News Staffer ದೇಶ - ವಿದೇಶ
ನವದೆಹಲಿ, ಮಾರ್ಚ್ 27: ಗಲ್ಫ್ ದೇಶಗಳ ಸಂಘರ್ಷದ ಪರಿಣಾಮಗಳನ್ನು ಊಹಿಸುವುದು ಕಷ್ಟ. ಕೋವಿಡ್ನಂತೆ ಜಾಗತಿಕ ಪರಿಣಾಮ ಬೀರಬಲ್ಲದು ಎಂದು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಹೇಳಿದ್ದಾರೆ.
ಗಲ್ಫ್ ಯುದ್ಧದ ಬಗ್ಗೆ ಎರಡು ದಿನಗಳ ಹಿಂದಷ್ಟೇ ಭಾರತದ ಪ್ರಧಾನಿ ನರೇಂದ್ರ ಮೋದಿ, ಕೋವಿಡ್ ನಂತಹ ಸ್ಥಿತಿ ಎದುರಿಸಲು ಸಿದ್ಧರಾಗಿ ಎಂದು ದೇಶ ವಾಸಿಗಳಿಗೆ ಕರೆ ನೀಡಿದ್ದರು. ಇದರ ಬೆನ್ನಲ್ಲೇ ಪುಟಿನ್ ಕೂಡ ಅದೇ ರೀತಿಯ ಮಾತುಗಳನ್ನಾಡಿದ್ದಾರೆ.
ಗಲ್ಫ್ ಸಂಘರ್ಷವು ಈಗಾಗಲೇ ಇಂಟರ್ನ್ಯಾಷನಲ್ ಲಾಜಿಸ್ಟಿಕ್ಸ್, ಉತ್ಪಾದನೆ ಮತ್ತು ಪೂರೈಕೆ ಸರಪಳಿಗಳಿಗೆ ಅಡ್ಡಿ ಪಡಿಸುತ್ತಿದೆ. ಹೈಡ್ರೋ ಕಾರ್ಬನ್, ಲೋಹಗಳು ಮತ್ತು ರಸಗೊಬ್ಬರ ಕಂಪನಿಗಳ ಮೇಲೆ ಭಾರೀ ಒತ್ತಡವನ್ನು ಹೇರುತ್ತಿದೆ. ತೈಲದ ಪೂರೈಕೆಯಲ್ಲಿ ವ್ಯತ್ಯಯವಾಗ ಜಾಗತಿಕವಾಗಿ ಅಸಮತೋಲನ ಉಂಟಾಗಿದೆ ಎಂದು ಪುಟಿನ್ ಹೇಳಿದ್ದಾರೆ.
ಇರಾನ್ ಮೇಲಿನ ಅಮೆರಿಕ ಮತ್ತು ಇಸ್ರೇಲಿ ದಾಳಿಗಳು ಮಧ್ಯಪ್ರಾಚ್ಯವನ್ನು ವ್ಯಾಪಕ ಬಿಕ್ಕಟ್ಟಿನತ್ತ ತಳ್ಳಿದೆ. ಮಧ್ಯ ಪ್ರಾಚ್ಯದಲ್ಲಿ ಈಗ ಎದ್ದಿರುವ ಬಿಕ್ಕಟ್ಟು ಬೇಗ ಬಗೆಹರಿಯುವುದಿಲ್ಲ, ಯಾವಾಗ ಅಂತ್ಯವಾಗುತ್ತೆ ಅಂತಾ ಯುದ್ಧ ಆರಂಭಿಸಿದವರಿಗೆ ಗೊತ್ತಿಲ್ಲ. ಯಾವಾಗ ಏನಾಗುತ್ತೋ ಅಂತಾ ಹೇಳಲು ಯಾರಿಗೂ ಸಾಧ್ಯವಾಗುತ್ತಿಲ್ಲ ಎಂದಿದ್ದಾರೆ.
ಮಧ್ಯಪ್ರಾಚ್ಯದಲ್ಲಿ ಅಮೆರಿಕ- ಇಸ್ರೇಲ್ ಮತ್ತು ಇರಾನ್ ನಡುವೆ ಭೀಕರ ಯುದ್ಧ ನಡೆಯುತ್ತಿದೆ. ಮೇಲ್ನೋಟಕ್ಕೆ ಇದು ಕೇವಲ ಮೂರು ದೇಶಗಳ ನಡುವಿನ ಕಾದಾಟದಂತೆ ಕಾಣಿಸಬಹುದು, ಆದರೆ ಸಾಕಷ್ಟು ರಾಷ್ಟ್ರಗಳ ಮೇಲೆ ಇದರ ದುಷ್ಪರಿಣಾಮ ಬೀರುತ್ತಿದೆ. ಇರಾನ್ ಮತ್ತು ಇಸ್ರೇಲ್-ಅಮೆರಿಕ ನಡುವೆ ಫೆಬ್ರವರಿ 28ರಂದು ಯುದ್ಧ ಆರಂಭವಾದಾಗಿನಿಂದ, ರಷ್ಯಾ ಇರಾನ್ ಪರ ರಹಸ್ಯವಾಗಿ ಕೆಲಸ ಮಾಡುತ್ತಿದೆ. ಗುಪ್ತಚರ ಮಾಹಿತಿ ನೀಡುತ್ತ ಅಮೆರಿಕದ ಸೇನಾ ನೆಲೆಗಳಿಗೆ ಏಟು ಕೊಡುತ್ತಿದೆ.
ಈ ಮೂಲಕ ಪುಟಿನ್ ಅವರು, ಉಕ್ರೇನ್ ಯುದ್ಧದಲ್ಲಿ ತನಗೆ ಆತಂಕ ತಂದೊಡ್ಡಿದ್ದ ಅಮೆರಿಕದ ವಿರುದ್ಧ ಸೇಡು ತೀರಿಸಿಕೊಳ್ಳಲು ಮುಂದಾಗಿರುವಂತಿದೆ. ಇದೀಗ ಈ ಸಂಘರ್ಷವು ಕೋವಿಡ್ ರೀತಿಯ ಆತಂಕ ತಂದೊಡ್ಡಬಹುದು ಎಂದಿದ್ದಾರೆ. ಆಮೂಲಕ ಯುದ್ಧ ಬೇಗನೆ ಕೊನೆಯಾಗಲ್ಲ ಎಂಬ ಸುಳಿವು ನೀಡಿದ್ದಾರೆ.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
27-07-26 01:09 pm
HK News Staffer
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm