ಬ್ರೇಕಿಂಗ್ ನ್ಯೂಸ್
27-03-26 04:07 pm HK News Staffer ದೇಶ - ವಿದೇಶ
ವಾಷಿಂಗ್ಟನ್, ಮಾರ್ಚ್ 27: ಯುದ್ಧದಿಂದ ಉಂಟಾಗಿರುವ ಉದ್ವಿಗ್ನ ಸ್ಥಿತಿಯ ನಡುವೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ರಾಜತಾಂತ್ರಿಕ ಹೆಜ್ಜೆ ಇಟ್ಟಿದ್ದಾರೆ. ಇರಾನ್ ತನ್ನ ಷರತ್ತುಗಳಿಗೆ ಬಗ್ಗದಿದ್ದರೆ ದೊಡ್ಡ ಮಟ್ಟದ ದಾಳಿ ನಡೆಸುತ್ತೇವೆ ಎಂದಿದ್ದ ಟ್ರಂಪ್, ಇದೀಗ ದಾಳಿ ಗಡುವನ್ನು ಹತ್ತು ದಿನಕ್ಕೆ ಮುಂದೂಡಿದ್ದಾರೆ.
ಇಂಧನ ಮೂಲಗಳನ್ನು ಗುರಿಯಾಗಿಸಿ ಸೇನಾ ಕಾರ್ಯಾಚರಣೆ ಕೈಗೊಳ್ಳಲು ಸಿದ್ಧವಾಗಿದ್ದ ಅಮೆರಿಕ, ದಿಢೀರ್ ಎನ್ನುವಂತೆ 10 ದಿನಗಳ ಗಡುವು ವಿಸ್ತರಿಸುವ ನಿರ್ಧಾರ ಕೈಗೊಂಡಿದ್ದಾರೆ. ಈ ಮೂಲಕ ದೊಡ್ಡ ಮಟ್ಟದ ಯುದ್ಧದ ಆತಂಕವನ್ನು ಕೆಲವು ದಿನಗಳ ಕಾಲ ದೂರ ಮಾಡಿದ್ದಾರೆ. ಆದರೆ, ಈ ನಿರ್ಧಾರವನ್ನು ಇರಾನ್ ವಿನಂತಿಯ ಮೇರೆಗೆ ತೆಗೆದುಕೊಳ್ಳಲಾಗಿದೆ ಎಂದು ಟ್ರಂಪ್ ತಿಳಿಸಿದ್ದಾರೆ.
ಇರಾನ್ ಜೊತೆಗೆ ಮಾತುಕತೆಗೆ ಇನ್ನಷ್ಟು ಸಮಯ ನೀಡುವುದರಿಂದ ಸಮಸ್ಯೆಗೆ ಶಾಂತಿಯುತ ಪರಿಹಾರ ಕಂಡುಕೊಳ್ಳಬಹುದು ಎಂಬ ನಂಬಿಕೆಯನ್ನು ಅವರು ವ್ಯಕ್ತಪಡಿಸಿದ್ದಾರೆ. ಈ ಅವಧಿಯಲ್ಲಿ ಇರಾನ್ ತನ್ನ ನಿಲುವಿನಲ್ಲಿ ಬದಲಾವಣೆ ತರಬಹುದು ಮತ್ತು ಅಮೆರಿಕ ನೀಡಿದ ಪ್ರಸ್ತಾವನೆಗೆ ಒಪ್ಪಿಗೆ ಸೂಚಿಸಬಹುದು ಎಂಬ ನಿರೀಕ್ಷೆ ವ್ಯಕ್ತವಾಗುತ್ತಿದೆ. ಆದರೆ, ಇರಾನ್ ಟ್ರಂಪ್ ಹೇಳಿಕೆಗಳಿಗೆ ಪ್ರತಿಕ್ರಿಯೆ ನೀಡಿಲ್ಲ. ಅಮೆರಿಕ ನೀಡಿದ ಪ್ರಸ್ತಾವನೆಗಳು ಏಕಪಕ್ಷೀಯ ಮತ್ತು ತಮ್ಮ ಹಿತಾಸಕ್ತಿಗಳಿಗೆ ಅನುಕೂಲಕರವಾಗಿಲ್ಲ ಎಂದು ಇದಕ್ಕೂ ಮುನ್ನ ಟೀಕಿಸಿತ್ತು.
ನೇರ ಮಾತುಕತೆ ಬದಲು ಪರೋಕ್ಷ ಮಾತುಕತೆ ನಡೆಯುತ್ತಿರುವುದರಿಂದ ಶಾಂತಿ ಒಪ್ಪಂದದ ಬಗ್ಗೆ ಅನುಮಾನಗಳು ಮೂಡತೊಡಗಿವೆ. ಈ ಹಿನ್ನೆಲೆಯಲ್ಲಿ ಟ್ರಂಪ್ ಅವರ 'ಇರಾನ್ ಜೊತೆಗಿನ ಮಾತುಕತೆಗಳು ಉತ್ತಮ ರೀತಿಯಲ್ಲಿ ಸಾಗುತ್ತಿದೆ' ಎಂಬ ಹೇಳಿಕೆ ಮತ್ತು ಇರಾನ್ ಪ್ರತಿಕ್ರಿಯೆ ಸಾಕಷ್ಟು ಚರ್ಚೆಗಳನ್ನು ಹುಟ್ಟು ಹಾಕಿದೆ. ಇದೇ ವೇಳೆ, ಯುದ್ಧದ ಪರಿಣಾಮಗಳು ಜಾಗತಿಕ ಮಟ್ಟದಲ್ಲಿ ತೀವ್ರವಾಗಿ ಪರಿಣಾಮ ಬೀರಿವೆ. ಇಂಧನ ಕ್ಷೇತ್ರದಲ್ಲಿ ಅಸ್ಥಿರತೆ ಹೆಚ್ಚಿದ್ದು, ತೈಲ ಬೆಲೆಗಳಲ್ಲಿ ಏರಿಳಿತ ಕಂಡುಬರುತ್ತಿದೆ. ಯುದ್ದದಿಂದಾಗಿ ಅಂತಾರಾಷ್ಟ್ರೀಯ ವ್ಯಾಪಾರ ಮತ್ತು ಭದ್ರತೆ ಮೇಲೂ ಪರಿಣಾಮ ಬೀರಿದೆ.
ಟ್ರಂಪ್ ಅವರ ಈ ತೀರ್ಮಾನವನ್ನು ವಿವಿಧ ರೀತಿಯಲ್ಲಿ ವಿಶ್ಲೇಷಿಸಲಾಗುತ್ತಿದೆ. ಕೆಲವರು ಇದನ್ನು ಶಾಂತಿ ಮಾತುಕತೆಗಳಿಗೆ ಅವಕಾಶ ನೀಡುವ ಧೈರ್ಯಶಾಲಿ ರಾಜತಾಂತ್ರಿಕ ಹೆಜ್ಜೆ ಎಂದು ಹೊಗಳುತ್ತಿದ್ದಾರೆ. ಇನ್ನೂ ಕೆಲವರು ಇದನ್ನು ಕೇವಲ ಸೈನಿಕ ಒತ್ತಡವನ್ನು ಮುಂದುವರಿಸಿ ಸಮಯ ಗೆಲ್ಲುವ ತಂತ್ರ ಎಂದು ಟೀಕಿಸುತ್ತಿದ್ದಾರೆ.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
27-07-26 01:09 pm
HK News Staffer
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm