ಬ್ರೇಕಿಂಗ್ ನ್ಯೂಸ್
27-03-26 04:07 pm HK News Staffer ದೇಶ - ವಿದೇಶ
ವಾಷಿಂಗ್ಟನ್, ಮಾರ್ಚ್ 27: ಯುದ್ಧದಿಂದ ಉಂಟಾಗಿರುವ ಉದ್ವಿಗ್ನ ಸ್ಥಿತಿಯ ನಡುವೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ರಾಜತಾಂತ್ರಿಕ ಹೆಜ್ಜೆ ಇಟ್ಟಿದ್ದಾರೆ. ಇರಾನ್ ತನ್ನ ಷರತ್ತುಗಳಿಗೆ ಬಗ್ಗದಿದ್ದರೆ ದೊಡ್ಡ ಮಟ್ಟದ ದಾಳಿ ನಡೆಸುತ್ತೇವೆ ಎಂದಿದ್ದ ಟ್ರಂಪ್, ಇದೀಗ ದಾಳಿ ಗಡುವನ್ನು ಹತ್ತು ದಿನಕ್ಕೆ ಮುಂದೂಡಿದ್ದಾರೆ.
ಇಂಧನ ಮೂಲಗಳನ್ನು ಗುರಿಯಾಗಿಸಿ ಸೇನಾ ಕಾರ್ಯಾಚರಣೆ ಕೈಗೊಳ್ಳಲು ಸಿದ್ಧವಾಗಿದ್ದ ಅಮೆರಿಕ, ದಿಢೀರ್ ಎನ್ನುವಂತೆ 10 ದಿನಗಳ ಗಡುವು ವಿಸ್ತರಿಸುವ ನಿರ್ಧಾರ ಕೈಗೊಂಡಿದ್ದಾರೆ. ಈ ಮೂಲಕ ದೊಡ್ಡ ಮಟ್ಟದ ಯುದ್ಧದ ಆತಂಕವನ್ನು ಕೆಲವು ದಿನಗಳ ಕಾಲ ದೂರ ಮಾಡಿದ್ದಾರೆ. ಆದರೆ, ಈ ನಿರ್ಧಾರವನ್ನು ಇರಾನ್ ವಿನಂತಿಯ ಮೇರೆಗೆ ತೆಗೆದುಕೊಳ್ಳಲಾಗಿದೆ ಎಂದು ಟ್ರಂಪ್ ತಿಳಿಸಿದ್ದಾರೆ.
ಇರಾನ್ ಜೊತೆಗೆ ಮಾತುಕತೆಗೆ ಇನ್ನಷ್ಟು ಸಮಯ ನೀಡುವುದರಿಂದ ಸಮಸ್ಯೆಗೆ ಶಾಂತಿಯುತ ಪರಿಹಾರ ಕಂಡುಕೊಳ್ಳಬಹುದು ಎಂಬ ನಂಬಿಕೆಯನ್ನು ಅವರು ವ್ಯಕ್ತಪಡಿಸಿದ್ದಾರೆ. ಈ ಅವಧಿಯಲ್ಲಿ ಇರಾನ್ ತನ್ನ ನಿಲುವಿನಲ್ಲಿ ಬದಲಾವಣೆ ತರಬಹುದು ಮತ್ತು ಅಮೆರಿಕ ನೀಡಿದ ಪ್ರಸ್ತಾವನೆಗೆ ಒಪ್ಪಿಗೆ ಸೂಚಿಸಬಹುದು ಎಂಬ ನಿರೀಕ್ಷೆ ವ್ಯಕ್ತವಾಗುತ್ತಿದೆ. ಆದರೆ, ಇರಾನ್ ಟ್ರಂಪ್ ಹೇಳಿಕೆಗಳಿಗೆ ಪ್ರತಿಕ್ರಿಯೆ ನೀಡಿಲ್ಲ. ಅಮೆರಿಕ ನೀಡಿದ ಪ್ರಸ್ತಾವನೆಗಳು ಏಕಪಕ್ಷೀಯ ಮತ್ತು ತಮ್ಮ ಹಿತಾಸಕ್ತಿಗಳಿಗೆ ಅನುಕೂಲಕರವಾಗಿಲ್ಲ ಎಂದು ಇದಕ್ಕೂ ಮುನ್ನ ಟೀಕಿಸಿತ್ತು.
ನೇರ ಮಾತುಕತೆ ಬದಲು ಪರೋಕ್ಷ ಮಾತುಕತೆ ನಡೆಯುತ್ತಿರುವುದರಿಂದ ಶಾಂತಿ ಒಪ್ಪಂದದ ಬಗ್ಗೆ ಅನುಮಾನಗಳು ಮೂಡತೊಡಗಿವೆ. ಈ ಹಿನ್ನೆಲೆಯಲ್ಲಿ ಟ್ರಂಪ್ ಅವರ 'ಇರಾನ್ ಜೊತೆಗಿನ ಮಾತುಕತೆಗಳು ಉತ್ತಮ ರೀತಿಯಲ್ಲಿ ಸಾಗುತ್ತಿದೆ' ಎಂಬ ಹೇಳಿಕೆ ಮತ್ತು ಇರಾನ್ ಪ್ರತಿಕ್ರಿಯೆ ಸಾಕಷ್ಟು ಚರ್ಚೆಗಳನ್ನು ಹುಟ್ಟು ಹಾಕಿದೆ. ಇದೇ ವೇಳೆ, ಯುದ್ಧದ ಪರಿಣಾಮಗಳು ಜಾಗತಿಕ ಮಟ್ಟದಲ್ಲಿ ತೀವ್ರವಾಗಿ ಪರಿಣಾಮ ಬೀರಿವೆ. ಇಂಧನ ಕ್ಷೇತ್ರದಲ್ಲಿ ಅಸ್ಥಿರತೆ ಹೆಚ್ಚಿದ್ದು, ತೈಲ ಬೆಲೆಗಳಲ್ಲಿ ಏರಿಳಿತ ಕಂಡುಬರುತ್ತಿದೆ. ಯುದ್ದದಿಂದಾಗಿ ಅಂತಾರಾಷ್ಟ್ರೀಯ ವ್ಯಾಪಾರ ಮತ್ತು ಭದ್ರತೆ ಮೇಲೂ ಪರಿಣಾಮ ಬೀರಿದೆ.
ಟ್ರಂಪ್ ಅವರ ಈ ತೀರ್ಮಾನವನ್ನು ವಿವಿಧ ರೀತಿಯಲ್ಲಿ ವಿಶ್ಲೇಷಿಸಲಾಗುತ್ತಿದೆ. ಕೆಲವರು ಇದನ್ನು ಶಾಂತಿ ಮಾತುಕತೆಗಳಿಗೆ ಅವಕಾಶ ನೀಡುವ ಧೈರ್ಯಶಾಲಿ ರಾಜತಾಂತ್ರಿಕ ಹೆಜ್ಜೆ ಎಂದು ಹೊಗಳುತ್ತಿದ್ದಾರೆ. ಇನ್ನೂ ಕೆಲವರು ಇದನ್ನು ಕೇವಲ ಸೈನಿಕ ಒತ್ತಡವನ್ನು ಮುಂದುವರಿಸಿ ಸಮಯ ಗೆಲ್ಲುವ ತಂತ್ರ ಎಂದು ಟೀಕಿಸುತ್ತಿದ್ದಾರೆ.
13-05-26 10:18 pm
HK News Desk
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
13-05-26 09:25 pm
HK News Desk
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm
ಚಂದನವನಕ್ಕೆ ಆಘಾತ; ಮಿಲನ, ಹಿಟ್ಲರ್ ಕಲ್ಯಾಣ ಖ್ಯಾತಿಯ...
13-05-26 11:44 am