ಬ್ರೇಕಿಂಗ್ ನ್ಯೂಸ್
27-03-26 04:07 pm HK News Staffer ದೇಶ - ವಿದೇಶ
ವಾಷಿಂಗ್ಟನ್, ಮಾರ್ಚ್ 27: ಯುದ್ಧದಿಂದ ಉಂಟಾಗಿರುವ ಉದ್ವಿಗ್ನ ಸ್ಥಿತಿಯ ನಡುವೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ರಾಜತಾಂತ್ರಿಕ ಹೆಜ್ಜೆ ಇಟ್ಟಿದ್ದಾರೆ. ಇರಾನ್ ತನ್ನ ಷರತ್ತುಗಳಿಗೆ ಬಗ್ಗದಿದ್ದರೆ ದೊಡ್ಡ ಮಟ್ಟದ ದಾಳಿ ನಡೆಸುತ್ತೇವೆ ಎಂದಿದ್ದ ಟ್ರಂಪ್, ಇದೀಗ ದಾಳಿ ಗಡುವನ್ನು ಹತ್ತು ದಿನಕ್ಕೆ ಮುಂದೂಡಿದ್ದಾರೆ.
ಇಂಧನ ಮೂಲಗಳನ್ನು ಗುರಿಯಾಗಿಸಿ ಸೇನಾ ಕಾರ್ಯಾಚರಣೆ ಕೈಗೊಳ್ಳಲು ಸಿದ್ಧವಾಗಿದ್ದ ಅಮೆರಿಕ, ದಿಢೀರ್ ಎನ್ನುವಂತೆ 10 ದಿನಗಳ ಗಡುವು ವಿಸ್ತರಿಸುವ ನಿರ್ಧಾರ ಕೈಗೊಂಡಿದ್ದಾರೆ. ಈ ಮೂಲಕ ದೊಡ್ಡ ಮಟ್ಟದ ಯುದ್ಧದ ಆತಂಕವನ್ನು ಕೆಲವು ದಿನಗಳ ಕಾಲ ದೂರ ಮಾಡಿದ್ದಾರೆ. ಆದರೆ, ಈ ನಿರ್ಧಾರವನ್ನು ಇರಾನ್ ವಿನಂತಿಯ ಮೇರೆಗೆ ತೆಗೆದುಕೊಳ್ಳಲಾಗಿದೆ ಎಂದು ಟ್ರಂಪ್ ತಿಳಿಸಿದ್ದಾರೆ.
ಇರಾನ್ ಜೊತೆಗೆ ಮಾತುಕತೆಗೆ ಇನ್ನಷ್ಟು ಸಮಯ ನೀಡುವುದರಿಂದ ಸಮಸ್ಯೆಗೆ ಶಾಂತಿಯುತ ಪರಿಹಾರ ಕಂಡುಕೊಳ್ಳಬಹುದು ಎಂಬ ನಂಬಿಕೆಯನ್ನು ಅವರು ವ್ಯಕ್ತಪಡಿಸಿದ್ದಾರೆ. ಈ ಅವಧಿಯಲ್ಲಿ ಇರಾನ್ ತನ್ನ ನಿಲುವಿನಲ್ಲಿ ಬದಲಾವಣೆ ತರಬಹುದು ಮತ್ತು ಅಮೆರಿಕ ನೀಡಿದ ಪ್ರಸ್ತಾವನೆಗೆ ಒಪ್ಪಿಗೆ ಸೂಚಿಸಬಹುದು ಎಂಬ ನಿರೀಕ್ಷೆ ವ್ಯಕ್ತವಾಗುತ್ತಿದೆ. ಆದರೆ, ಇರಾನ್ ಟ್ರಂಪ್ ಹೇಳಿಕೆಗಳಿಗೆ ಪ್ರತಿಕ್ರಿಯೆ ನೀಡಿಲ್ಲ. ಅಮೆರಿಕ ನೀಡಿದ ಪ್ರಸ್ತಾವನೆಗಳು ಏಕಪಕ್ಷೀಯ ಮತ್ತು ತಮ್ಮ ಹಿತಾಸಕ್ತಿಗಳಿಗೆ ಅನುಕೂಲಕರವಾಗಿಲ್ಲ ಎಂದು ಇದಕ್ಕೂ ಮುನ್ನ ಟೀಕಿಸಿತ್ತು.
ನೇರ ಮಾತುಕತೆ ಬದಲು ಪರೋಕ್ಷ ಮಾತುಕತೆ ನಡೆಯುತ್ತಿರುವುದರಿಂದ ಶಾಂತಿ ಒಪ್ಪಂದದ ಬಗ್ಗೆ ಅನುಮಾನಗಳು ಮೂಡತೊಡಗಿವೆ. ಈ ಹಿನ್ನೆಲೆಯಲ್ಲಿ ಟ್ರಂಪ್ ಅವರ 'ಇರಾನ್ ಜೊತೆಗಿನ ಮಾತುಕತೆಗಳು ಉತ್ತಮ ರೀತಿಯಲ್ಲಿ ಸಾಗುತ್ತಿದೆ' ಎಂಬ ಹೇಳಿಕೆ ಮತ್ತು ಇರಾನ್ ಪ್ರತಿಕ್ರಿಯೆ ಸಾಕಷ್ಟು ಚರ್ಚೆಗಳನ್ನು ಹುಟ್ಟು ಹಾಕಿದೆ. ಇದೇ ವೇಳೆ, ಯುದ್ಧದ ಪರಿಣಾಮಗಳು ಜಾಗತಿಕ ಮಟ್ಟದಲ್ಲಿ ತೀವ್ರವಾಗಿ ಪರಿಣಾಮ ಬೀರಿವೆ. ಇಂಧನ ಕ್ಷೇತ್ರದಲ್ಲಿ ಅಸ್ಥಿರತೆ ಹೆಚ್ಚಿದ್ದು, ತೈಲ ಬೆಲೆಗಳಲ್ಲಿ ಏರಿಳಿತ ಕಂಡುಬರುತ್ತಿದೆ. ಯುದ್ದದಿಂದಾಗಿ ಅಂತಾರಾಷ್ಟ್ರೀಯ ವ್ಯಾಪಾರ ಮತ್ತು ಭದ್ರತೆ ಮೇಲೂ ಪರಿಣಾಮ ಬೀರಿದೆ.
ಟ್ರಂಪ್ ಅವರ ಈ ತೀರ್ಮಾನವನ್ನು ವಿವಿಧ ರೀತಿಯಲ್ಲಿ ವಿಶ್ಲೇಷಿಸಲಾಗುತ್ತಿದೆ. ಕೆಲವರು ಇದನ್ನು ಶಾಂತಿ ಮಾತುಕತೆಗಳಿಗೆ ಅವಕಾಶ ನೀಡುವ ಧೈರ್ಯಶಾಲಿ ರಾಜತಾಂತ್ರಿಕ ಹೆಜ್ಜೆ ಎಂದು ಹೊಗಳುತ್ತಿದ್ದಾರೆ. ಇನ್ನೂ ಕೆಲವರು ಇದನ್ನು ಕೇವಲ ಸೈನಿಕ ಒತ್ತಡವನ್ನು ಮುಂದುವರಿಸಿ ಸಮಯ ಗೆಲ್ಲುವ ತಂತ್ರ ಎಂದು ಟೀಕಿಸುತ್ತಿದ್ದಾರೆ.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am