ಬ್ರೇಕಿಂಗ್ ನ್ಯೂಸ್
28-03-26 02:58 pm HK News Staffer ದೇಶ - ವಿದೇಶ
ಕಾಠ್ಮಂಡು, ಮಾರ್ಚ್ 28: ನೇಪಾಳದಲ್ಲಿ ಹೊಸತಾಗಿ ಬಾಲೇಂದ್ರ ಶಾ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ ಕಳೆದ ವರ್ಷ ದೇಶಾದ್ಯಂತ ನಡೆದಿದ್ದ ಝೆನ್ ಜಿ ಪ್ರತಿಭಟನೆ ಹತ್ತಿಕ್ಕಲು ಮುಂದಾಗಿದ್ದ ಮಾಜಿ ಪ್ರಧಾನಿ ಕೆ.ಪಿ. ಶರ್ಮಾ ಓಲಿ ಅವರನ್ನು ಬಂಧಿಸಲಾಗಿದೆ, ಬಾಲೇಂದ್ರ ಶಾ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ ಒಂದು ದಿನದಲ್ಲಿ ಓಲಿಯನ್ನು ನೇಪಾಳ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ವರದಿಗಳ ಪ್ರಕಾರ, ಗೌರಿಬಹಾದೂರ್ ಕರ್ಕಿ ನೇತೃತ್ವದ ತನಿಖಾ ಆಯೋಗವು ಭದ್ರಾ ಪ್ರದೇಶದಲ್ಲಿ ನಡೆದ ಝೆನ್ ಜಿ ಪ್ರತಿಭಟನೆ ಹತ್ತಿಕ್ಕಿದ್ದಕ್ಕಾಗಿ ಓಲಿ ಮತ್ತು ಲೇಖಕ್ ಸೇರಿದಂತೆ ಇತರರನ್ನ ತಪ್ಪಿತಸ್ಥರೆಂದು ಘೋಷಿಸಿದೆ. ಅಲ್ಲದೇ ತನಿಖಾ ಆಯೋಗವು ಪ್ರತಿಭಟನೆ ಸಂದರ್ಭದಲ್ಲಿನ ನೇಪಾಳ ಪೊಲೀಸ್ ಇನ್ಸ್ಪೆಕ್ಟರ್ ಜನರಲ್ ಚಂದ್ರಕುಬೇರ್ ಖಪುಂಗ್ ಸೇರಿದಂತೆ ಇತರ ಉನ್ನತ ಅಧಿಕಾರಿಗಳ ವಿರುದ್ಧವೂ ಕ್ರಮ ಕೈಗೊಳ್ಳಲು ಶಿಫಾರಸು ಮಾಡಿದೆ.
ಇಂದು ಬೆಳಗ್ಗೆ ಮಾಜಿ ಪ್ರಧಾನಿ ಹಾಗೂ ಮಾಜಿ ಗೃಹಸಚಿವರನ್ನ ಬಂಧಿಸಲಾಗಿದ್ದು, ಕಾನೂನು ಪ್ರಕಾರವೇ ಕ್ರಮ ಮುಂದುವರಿಯುತ್ತದೆ ಎಂದು ಕಠ್ಮಂಡು ಕಣಿವೆ ಪೊಲೀಸ್ ಓಂ ಅಧಿಕಾರಿ ತಿಳಿಸಿದ್ದಾರೆ. ಬಂಧನದ ಬಳಿಕ ಪ್ರತಿಕ್ರಿಯೆ ನೀಡಿರುವ ಹಾಲಿ ಗೃಹಸಚಿವ ಸುಡಾನ್ ಗುರುಂಗ್, ಭರವಸೆ ಅಂದ್ರೆ ಭರವಸೆ, ಕಾನೂನಿಗಿಂತ ಯಾರೂ ಮೇಲಲ್ಲ ಎಂದು ತಿಳಿಸಿದ್ದಾರೆ. ನಾವು ಮಾಜಿ ಪ್ರಧಾನಿ ಕೆ.ಪಿ. ಶರ್ಮಾ ಓಲಿ ಮತ್ತು ಮಾಜಿ ಗೃಹಸಚಿವ ರಮೇಶ್ ಲೇಖಕ್ ಅವರನ್ನ ಬಂಧಿಸಿದ್ದೇವೆ. ಇದು ಯಾರ ವಿರುದ್ಧವೂ ಸೇಡು ತೀರಿಸಿಕೊಳ್ಳುವ ಕ್ರಮವಲ್ಲ. ನ್ಯಾಯದ ಆರಂಭ ಮಾತ್ರ. ಈಗ ದೇಶವು ಹೊಸ ದಿಕ್ಕಿನತ್ತ ಸಾಗುತ್ತಿದೆ ಎಂದು ನಾನು ನಂಬುತ್ತೇನೆ ಎಂಬುದಾಗಿ ಎಕ್ಸ್ ನಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ.
ಕಳೆದ ಸೆಪ್ಟೆಂಬರ್ನಲ್ಲಿ ನೇಪಾಳದಲ್ಲಿ ಯುವಕರ ಕ್ರಾಂತಿ ಭುಗಿಲೆದ್ದಿತ್ತು. ಈ ವೇಳೆ, ಪ್ರತಿಭಟನೆಗಳನ್ನು ನಿಗ್ರಹಿಸುವ ವೇಳೆ ನಡೆದ ಕ್ರಿಮಿನಲ್ ನಿರ್ಲಕ್ಷ್ಯ ಮಾಡಲಾಗಿದೆ ಎಂಬ ಆರೋಪದ ಬಗ್ಗೆ ಕ್ರಮ ಕೈಗೊಳ್ಳಲಾಗಿದೆ.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
27-07-26 01:09 pm
HK News Staffer
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm